Advertisement
ಯಕ್ಷಗಾನ : ಮಾತು-ಮಸೆತ

‘ಆಳು’ ಎಂಬ ಶಬ್ದ ಎರಡರ್ಥವನ್ನು ಕೊಡುತ್ತದೆ….

Share

(ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಹರಿಶ್ಚಂದ್ರ)
ಪ್ರಸಂಗ : ರಾಜಾ ಹರಿಶ್ಚಂದ್ರ

(ಸಂದರ್ಭ : ವೀರಬಾಹುಕನ ಸಾಂಗತ್ಯದಲ್ಲಿ ಹರಿಶ್ಚಂದ್ರ ಸ್ಮಶಾನವಾಸಿಯಾಗುತ್ತಾನೆ. ಇಲ್ಲಿ ಸಂಪಾದಿಸಿದ ಧನವನ್ನು ವಿಶ್ವಾಮಿತ್ರ ಶಿಷ್ಯ ನಕ್ಷತ್ರಿಕನಿಗೆ ಹಸ್ತಾಂತರಿಸುತ್ತಾನೆ)

“ವಿಶ್ವಾಮಿತ್ರ ಶಿಷ್ಯರೇ, ಈಗಲಾದರೂ ನನ್ನನ್ನು ಆ ಪಾಶದಿಂದ ಬಿಡುಗಡೆಗೊಳಿಸುತ್ತೀರಾ? ಆಗಲಿ. ಧನ್ಯನಾದೆ. ಚಕ್ರವರ್ತಿಯಾಗಿದ್ದ ನಾನು ವೀರ ಬಾಹುಕನ ಆಜ್ಞೆಯಂತೆ ಪ್ರತಿಯೊಂದು ಹೆಣಕ್ಕೂ ಎಷ್ಟು ಹಣವನ್ನು ಸಂಪಾದಿಸಬೇಕೋ, ಅಷ್ಟು ಹಣವನ್ನು ಸಂಪಾದಿಸುತ್ತಾ, ಒಡೆಯನಿಗೆ ಸಲ್ಲಬೇಕಾಗಿದ್ದ ಹಣವನ್ನು ಅವನಿಗೆ ಸಮರ್ಪಿಸುತ್ತಿದ್ದೇನೆ.

ಪಟ್ಟಾಭಿಷೇಕವಾಗುವಾಗ ಹಿರಿಯರು ಹೇಳಿದ ಮಾತು ನೆನಪಾಗುತ್ತದೆ ಪ್ರಜೆಗಳೆಲ್ಲಾ ನಿನ್ನನ್ನು ಕೇಂದ್ರೀಕರಿಸಿಯೇ ಗೃಹಸ್ಥಾಶ್ರಮಿಗಳಾಗುತಾರೆ, ಅಲ್ಲ ಬ್ರಹ್ಮಚಾರಿಗಳಾಗಿರುತ್ತಾರೆ. ಅವನು ಯಾವುದೇ ಆಶ್ರಮ ಸ್ವೀಕಾರ ಮಾಡಬೇಕಿದ್ದರೂ ಕೂಡಾ ಭರವಸೆ ಸಿಂಹಾಸನದಲ್ಲಿ ಕುಳಿತ ನಿನ್ನಿಂದ ಬರಬೇಕು. ಆದ ಕಾರಣ ನೀನು ಕಾವಲುಗಾರನಾಗಬೇಕಾಗುತ್ತದೆ.
ನೀನಾಳು, ರಾಜ್ಯವನ್ನಾಳು. ಇಲ್ಲಿ ‘ಆಳು’ ಎಂಬ ಶಬ್ದ ಎರಡರ್ಥವನ್ನು ಕೊಡುತ್ತದೆ. ಬಾಕಿದ್ದವರನ್ನೆಲ್ಲ ‘ಆಳುವುದು’ ಎಂಬ ಅರ್ಥ ಒಂದಾದರೆ, ರೂಢಿಯ ಮಾತಿನಂತೆ ನೀನು ‘ಆಳು’! ಅವರೆಲ್ಲಾ ಆಳುಗಳಲ್ಲ, ಎಲ್ಲರನ್ನು ಆಳುವ ಆಳಾಗಿ ನೀನು ಬಾಳಬೇಕು. ಆ ಮಾತು ಈ ಹೊತ್ತು ಅನುಭವಕ್ಕೆ ಬಂತು. ಒಮ್ಮೆ ಎಲ್ಲರನ್ನು ಆಳಿದೆ. ಈಗ ನಿಜವಾದಂತಹ ‘ಆಳು’ ಶಬ್ದಕ್ಕೆ ಪ್ರತೀಕವೆನಿಸಿದ್ದೇನೆ. ಸುಡುಗಾಡಿನಲ್ಲಿ ಸುಡುಗಾಡಿನ ಕಾವಲುಗಾರನಾದ ಒಬ್ಬ ಚಾಂಡಾಲನ ಆಳು. ವ್ಯಸನವಿಲ್ಲ. ಯಾಕೆಂದರೆ, ಹಂಸತೂಲಿಕಾತಲ್ಪದಲ್ಲಿ ಪವಡಿಸಿದಂತಹ ಸುಖವನ್ನು ಮರೆಯಬೇಕಿದ್ದರೆ ಬರೇ ನೆಲದಲ್ಲಿ ಮಲಗಬೇಕು. ಈ ಜೀವನದಲ್ಲಿ ಜೀವನದ ಎರಡು ಪುಟವನ್ನು ಯಾವನು ಅಧ್ಯಯನ ಮಾಡುತ್ತಾನೋ ಅವನು ಮರಳಿ ಹುಟ್ಟುವುದಿಲ್ಲವಂತೆ. ಪಾತ್ರಕ್ಕೆ ಬಂದುದೇ ಪಂಚಾಮೃತ. ಇಲ್ಲೇ ಇರುತ್ತೇನೆ…”

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

10 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

15 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

16 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

18 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

19 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

1 day ago