Advertisement
ಯಕ್ಷಗಾನ : ಮಾತು-ಮಸೆತ

‘ಆಳು’ ಎಂಬ ಶಬ್ದ ಎರಡರ್ಥವನ್ನು ಕೊಡುತ್ತದೆ….

Share

(ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಹರಿಶ್ಚಂದ್ರ)
ಪ್ರಸಂಗ : ರಾಜಾ ಹರಿಶ್ಚಂದ್ರ

(ಸಂದರ್ಭ : ವೀರಬಾಹುಕನ ಸಾಂಗತ್ಯದಲ್ಲಿ ಹರಿಶ್ಚಂದ್ರ ಸ್ಮಶಾನವಾಸಿಯಾಗುತ್ತಾನೆ. ಇಲ್ಲಿ ಸಂಪಾದಿಸಿದ ಧನವನ್ನು ವಿಶ್ವಾಮಿತ್ರ ಶಿಷ್ಯ ನಕ್ಷತ್ರಿಕನಿಗೆ ಹಸ್ತಾಂತರಿಸುತ್ತಾನೆ)

“ವಿಶ್ವಾಮಿತ್ರ ಶಿಷ್ಯರೇ, ಈಗಲಾದರೂ ನನ್ನನ್ನು ಆ ಪಾಶದಿಂದ ಬಿಡುಗಡೆಗೊಳಿಸುತ್ತೀರಾ? ಆಗಲಿ. ಧನ್ಯನಾದೆ. ಚಕ್ರವರ್ತಿಯಾಗಿದ್ದ ನಾನು ವೀರ ಬಾಹುಕನ ಆಜ್ಞೆಯಂತೆ ಪ್ರತಿಯೊಂದು ಹೆಣಕ್ಕೂ ಎಷ್ಟು ಹಣವನ್ನು ಸಂಪಾದಿಸಬೇಕೋ, ಅಷ್ಟು ಹಣವನ್ನು ಸಂಪಾದಿಸುತ್ತಾ, ಒಡೆಯನಿಗೆ ಸಲ್ಲಬೇಕಾಗಿದ್ದ ಹಣವನ್ನು ಅವನಿಗೆ ಸಮರ್ಪಿಸುತ್ತಿದ್ದೇನೆ.

ಪಟ್ಟಾಭಿಷೇಕವಾಗುವಾಗ ಹಿರಿಯರು ಹೇಳಿದ ಮಾತು ನೆನಪಾಗುತ್ತದೆ ಪ್ರಜೆಗಳೆಲ್ಲಾ ನಿನ್ನನ್ನು ಕೇಂದ್ರೀಕರಿಸಿಯೇ ಗೃಹಸ್ಥಾಶ್ರಮಿಗಳಾಗುತಾರೆ, ಅಲ್ಲ ಬ್ರಹ್ಮಚಾರಿಗಳಾಗಿರುತ್ತಾರೆ. ಅವನು ಯಾವುದೇ ಆಶ್ರಮ ಸ್ವೀಕಾರ ಮಾಡಬೇಕಿದ್ದರೂ ಕೂಡಾ ಭರವಸೆ ಸಿಂಹಾಸನದಲ್ಲಿ ಕುಳಿತ ನಿನ್ನಿಂದ ಬರಬೇಕು. ಆದ ಕಾರಣ ನೀನು ಕಾವಲುಗಾರನಾಗಬೇಕಾಗುತ್ತದೆ.
ನೀನಾಳು, ರಾಜ್ಯವನ್ನಾಳು. ಇಲ್ಲಿ ‘ಆಳು’ ಎಂಬ ಶಬ್ದ ಎರಡರ್ಥವನ್ನು ಕೊಡುತ್ತದೆ. ಬಾಕಿದ್ದವರನ್ನೆಲ್ಲ ‘ಆಳುವುದು’ ಎಂಬ ಅರ್ಥ ಒಂದಾದರೆ, ರೂಢಿಯ ಮಾತಿನಂತೆ ನೀನು ‘ಆಳು’! ಅವರೆಲ್ಲಾ ಆಳುಗಳಲ್ಲ, ಎಲ್ಲರನ್ನು ಆಳುವ ಆಳಾಗಿ ನೀನು ಬಾಳಬೇಕು. ಆ ಮಾತು ಈ ಹೊತ್ತು ಅನುಭವಕ್ಕೆ ಬಂತು. ಒಮ್ಮೆ ಎಲ್ಲರನ್ನು ಆಳಿದೆ. ಈಗ ನಿಜವಾದಂತಹ ‘ಆಳು’ ಶಬ್ದಕ್ಕೆ ಪ್ರತೀಕವೆನಿಸಿದ್ದೇನೆ. ಸುಡುಗಾಡಿನಲ್ಲಿ ಸುಡುಗಾಡಿನ ಕಾವಲುಗಾರನಾದ ಒಬ್ಬ ಚಾಂಡಾಲನ ಆಳು. ವ್ಯಸನವಿಲ್ಲ. ಯಾಕೆಂದರೆ, ಹಂಸತೂಲಿಕಾತಲ್ಪದಲ್ಲಿ ಪವಡಿಸಿದಂತಹ ಸುಖವನ್ನು ಮರೆಯಬೇಕಿದ್ದರೆ ಬರೇ ನೆಲದಲ್ಲಿ ಮಲಗಬೇಕು. ಈ ಜೀವನದಲ್ಲಿ ಜೀವನದ ಎರಡು ಪುಟವನ್ನು ಯಾವನು ಅಧ್ಯಯನ ಮಾಡುತ್ತಾನೋ ಅವನು ಮರಳಿ ಹುಟ್ಟುವುದಿಲ್ಲವಂತೆ. ಪಾತ್ರಕ್ಕೆ ಬಂದುದೇ ಪಂಚಾಮೃತ. ಇಲ್ಲೇ ಇರುತ್ತೇನೆ…”

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

4 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

4 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

6 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

9 hours ago