Advertisement
ಸುದ್ದಿಗಳು

ಆಸ್ತಿ ವಿವಾದ : ಕತ್ತಿಯಿಂದ ಕಡಿದು ಕೊಲೆ | ಇಬ್ಬರು ಪೊಲೀಸ್ ವಶಕ್ಕೆ | ಮುಂದುವರಿದ ತನಿಖೆ

Share

ಸಂಪಾಜೆ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಶುಕ್ರವಾರ ತಡರಾತ್ರಿ ಮಾತಿನ ಚಕಮಕಿ ನಡೆದು ಕೊಲೆಯಲ್ಲಿ ಅಂತ್ಯವಾದ ಘಟನೆ ಪೆರಾಜೆಯ ಪೀಚೆ ಮನೆ  ಎಂಬಲ್ಲಿ  ನಡೆದಿದೆ. ಘಟನೆಯಲ್ಲಿ  ಉತ್ತರ ಕುಮಾರ ಎಂಬವರು ಮೃತಪಟ್ಟಿದ್ದಾರೆ.

ಮದ್ಯಪಾನ ಮಾಡಿ ಮನೆಗೆ ನುಗ್ಗಿ ಆಸ್ತಿ ವಿಚಾರವಾಗಿ ಗಲಾಟೆ ಮಾಡಿದ ಮೈದುನನ್ನು ಅತ್ತಿಗೆ ಹಾಗೂ ಆಕೆಯ ಪುತ್ರ ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾರೆ. ಆರೋಪಿಗಳಾದ ದಿ.ಕೇಶವ ಅವರ ಪತ್ನಿ  ತಾರಿಣಿ , ಹಾಗೂ ಪುತ್ರ ಧರಣೀಧರ ಇವರನ್ನು ಮಡಿಕೇರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶುಕ್ರವಾರ ತಡರಾತ್ರಿ ಸ್ನೇಹಿತರ ಮನೆಗೆ ಹೋಗಿ ಬಂದಿದ್ದ ಉತ್ತರ ಕುಮಾರ ಅವರು ತಾರಿಣಿ ಅವರ ಮನೆಯ ಬಳಿ ಬೈಕ್ ಸದ್ದು ಮಾಡುತ್ತಿರುವುದು  ಕೇಳಿ ತರಾಟೆಗೆ ತೆಗೆದುಕೊಂಡರು ಎನ್ನಲಾಗಿದೆ. ಆಸ್ತಿ ತಕರಾರು ಹಿಂದೆಯೇ ಇದ್ದ ಕಾರಣ ಮಾತಿಗೆ ಮಾತು ಬೆಳೆದು ಪಾನಮತ್ತರಾಗಿದ್ದ ಉತ್ತರ ಕುಮಾರ ತಾರಿಣಿಯವರ ಮನೆಯಂಗಳಕ್ಕೆ ಬಂದು ಬೈಯ್ಯತೊಡಗಿದರೆನ್ನಲಾಗಿದೆ.

ಈ ಸಂದರ್ಭ ಉತ್ತರ ಕುಮಾರ ಅವರು ತಾರಿಣಿ ಅವರ ಮನೆ ಪ್ರವೇಶಿಸಿಲು ಯತ್ನಿಸಿದಾಗ ಕತ್ತಿಯಿಂದ ಕಡಿದರು ಎನ್ನಲಾಗಿದೆ.  ಈ ವೇಳೆ ಗಂಭೀರ ಗಾಯಗೊಂಡ ಉತ್ತರ ಕುಮಾರ ಅಂಗಳದಲ್ಲಿ ಬಿದ್ದ ಸ್ಥಳದಲ್ಲಿಯೇ ಸಾವನ್ನಪ್ಪಿದರೆನ್ನಲಾಗಿದೆ.

ಶನಿವಾರ ಬೆಳಗ್ಗೆ ಮಡಿಕೇರಿಯಿಂದ ಪೊಲೀಸ್ ಅಧಿಕಾರಿಗಳು ಆಗಮಿಸಿ ತನಿಖೆ ಆರಂಭಿಸಿದ್ದಾರೆ. ತಾರಿಣಿ ಮತ್ತು ಧರಣೀಧರ ಅವರನ್ನು ವಶಕ್ಕೆ ಪಡೆದಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

21 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

22 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

22 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

1 day ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

2 days ago