Advertisement
ಸುದ್ದಿಗಳು

ಆಸ್ತಿ ವಿವಾದ : ಕತ್ತಿಯಿಂದ ಕಡಿದು ಕೊಲೆ | ಇಬ್ಬರು ಪೊಲೀಸ್ ವಶಕ್ಕೆ | ಮುಂದುವರಿದ ತನಿಖೆ

Share

ಸಂಪಾಜೆ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಶುಕ್ರವಾರ ತಡರಾತ್ರಿ ಮಾತಿನ ಚಕಮಕಿ ನಡೆದು ಕೊಲೆಯಲ್ಲಿ ಅಂತ್ಯವಾದ ಘಟನೆ ಪೆರಾಜೆಯ ಪೀಚೆ ಮನೆ  ಎಂಬಲ್ಲಿ  ನಡೆದಿದೆ. ಘಟನೆಯಲ್ಲಿ  ಉತ್ತರ ಕುಮಾರ ಎಂಬವರು ಮೃತಪಟ್ಟಿದ್ದಾರೆ.

ಮದ್ಯಪಾನ ಮಾಡಿ ಮನೆಗೆ ನುಗ್ಗಿ ಆಸ್ತಿ ವಿಚಾರವಾಗಿ ಗಲಾಟೆ ಮಾಡಿದ ಮೈದುನನ್ನು ಅತ್ತಿಗೆ ಹಾಗೂ ಆಕೆಯ ಪುತ್ರ ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾರೆ. ಆರೋಪಿಗಳಾದ ದಿ.ಕೇಶವ ಅವರ ಪತ್ನಿ  ತಾರಿಣಿ , ಹಾಗೂ ಪುತ್ರ ಧರಣೀಧರ ಇವರನ್ನು ಮಡಿಕೇರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶುಕ್ರವಾರ ತಡರಾತ್ರಿ ಸ್ನೇಹಿತರ ಮನೆಗೆ ಹೋಗಿ ಬಂದಿದ್ದ ಉತ್ತರ ಕುಮಾರ ಅವರು ತಾರಿಣಿ ಅವರ ಮನೆಯ ಬಳಿ ಬೈಕ್ ಸದ್ದು ಮಾಡುತ್ತಿರುವುದು  ಕೇಳಿ ತರಾಟೆಗೆ ತೆಗೆದುಕೊಂಡರು ಎನ್ನಲಾಗಿದೆ. ಆಸ್ತಿ ತಕರಾರು ಹಿಂದೆಯೇ ಇದ್ದ ಕಾರಣ ಮಾತಿಗೆ ಮಾತು ಬೆಳೆದು ಪಾನಮತ್ತರಾಗಿದ್ದ ಉತ್ತರ ಕುಮಾರ ತಾರಿಣಿಯವರ ಮನೆಯಂಗಳಕ್ಕೆ ಬಂದು ಬೈಯ್ಯತೊಡಗಿದರೆನ್ನಲಾಗಿದೆ.

ಈ ಸಂದರ್ಭ ಉತ್ತರ ಕುಮಾರ ಅವರು ತಾರಿಣಿ ಅವರ ಮನೆ ಪ್ರವೇಶಿಸಿಲು ಯತ್ನಿಸಿದಾಗ ಕತ್ತಿಯಿಂದ ಕಡಿದರು ಎನ್ನಲಾಗಿದೆ.  ಈ ವೇಳೆ ಗಂಭೀರ ಗಾಯಗೊಂಡ ಉತ್ತರ ಕುಮಾರ ಅಂಗಳದಲ್ಲಿ ಬಿದ್ದ ಸ್ಥಳದಲ್ಲಿಯೇ ಸಾವನ್ನಪ್ಪಿದರೆನ್ನಲಾಗಿದೆ.

ಶನಿವಾರ ಬೆಳಗ್ಗೆ ಮಡಿಕೇರಿಯಿಂದ ಪೊಲೀಸ್ ಅಧಿಕಾರಿಗಳು ಆಗಮಿಸಿ ತನಿಖೆ ಆರಂಭಿಸಿದ್ದಾರೆ. ತಾರಿಣಿ ಮತ್ತು ಧರಣೀಧರ ಅವರನ್ನು ವಶಕ್ಕೆ ಪಡೆದಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

2 hours ago

ಹವಾಮಾನ ಬಿಕ್ಕಟ್ಟಿನ ನಡುವೆಯೂ ಕೃಷಿ ಉಳಿಸುವ ದಾರಿ ಕಂಡುಕೊಂಡ ದಕ್ಷಿಣ ಏಷ್ಯಾ ದೇಶಗಳು – ಸ್ಥಳೀಯ ಆವಿಷ್ಕಾರಗಳಿಗೆ ಹೆಚ್ಚಿದ ಮಹತ್ವ

ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…

2 hours ago

ಮುಂಗಾರು ಅಧಿಕೃತ ದಿನಾಂಕ ತಪ್ಪಿತು..! ಜೂನ್ ಮೊದಲ ವಾರದ ಬಳಿಕವೇ ಭಾರೀ ಮಳೆ ಸಾಧ್ಯತೆ ಎಂದ ಸ್ಕೈಮೆಟ್

ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…

12 hours ago

ಹೊಸ ಪಕ್ಷ ಸ್ಥಾಪನೆ ಊಹಾಪೋಹ – ‘ಇನ್ನೆರಡು ದಿನಗಳಲ್ಲಿ ಸ್ಪಷ್ಟನೆ ಕೊಡುತ್ತೇನೆ’ ಎಂದ ಅಣ್ಣಾಮಲೈ

ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಅಣ್ಣಾಮಲೈ ಹೊಸ ಪಕ್ಷ ಸ್ಥಾಪಿಸಲಿದ್ದಾರೆ ಎಂಬ ಊಹಾಪೋಹಗಳ…

13 hours ago

ಹವಾಮಾನ ವರದಿ | 01-06-2026 | ಜೂನ್ 4 ರಿಂದ ಕರಾವಳಿಯಲ್ಲಿ ಮುಂಗಾರು ಚಟುವಟಿಕೆ ಆರಂಭ ಸಾಧ್ಯತೆ – ಜೂನ್ 8ರಿಂದ ಮಳೆ ಮತ್ತಷ್ಟು ಹೆಚ್ಚಳದ ಸೂಚನೆ

ಕರ್ನಾಟಕದ ವಿವಿಧ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ಮಳೆಯ ವಾತಾವರಣ ಮುಂದುವರಿಯಲಿದೆ. ಜೂನ್…

19 hours ago

ಭಾರತದ ಕಸದಿಂದ ₹4.3 ಲಕ್ಷ ಕೋಟಿ ಮಾರುಕಟ್ಟೆ ಅವಕಾಶ..! 26 ಲಕ್ಷ ಉದ್ಯೋಗ ಸೃಷ್ಟಿಸುವ ಸಾಮರ್ಥ್ಯ…!

ಭಾರತದ ನಗರಗಳ ಸಾವಯವ ತ್ಯಾಜ್ಯವನ್ನು ಸಮರ್ಥವಾಗಿ ನಿರ್ವಹಿಸಿದರೆ 2047ರ ವೇಳೆಗೆ ₹4.3 ಲಕ್ಷ…

1 day ago