Advertisement
ಸುದ್ದಿಗಳು

ಆಸ್ತಿ ವಿವಾದ : ಕತ್ತಿಯಿಂದ ಕಡಿದು ಕೊಲೆ | ಇಬ್ಬರು ಪೊಲೀಸ್ ವಶಕ್ಕೆ | ಮುಂದುವರಿದ ತನಿಖೆ

Share

ಸಂಪಾಜೆ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಶುಕ್ರವಾರ ತಡರಾತ್ರಿ ಮಾತಿನ ಚಕಮಕಿ ನಡೆದು ಕೊಲೆಯಲ್ಲಿ ಅಂತ್ಯವಾದ ಘಟನೆ ಪೆರಾಜೆಯ ಪೀಚೆ ಮನೆ  ಎಂಬಲ್ಲಿ  ನಡೆದಿದೆ. ಘಟನೆಯಲ್ಲಿ  ಉತ್ತರ ಕುಮಾರ ಎಂಬವರು ಮೃತಪಟ್ಟಿದ್ದಾರೆ.

ಮದ್ಯಪಾನ ಮಾಡಿ ಮನೆಗೆ ನುಗ್ಗಿ ಆಸ್ತಿ ವಿಚಾರವಾಗಿ ಗಲಾಟೆ ಮಾಡಿದ ಮೈದುನನ್ನು ಅತ್ತಿಗೆ ಹಾಗೂ ಆಕೆಯ ಪುತ್ರ ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾರೆ. ಆರೋಪಿಗಳಾದ ದಿ.ಕೇಶವ ಅವರ ಪತ್ನಿ  ತಾರಿಣಿ , ಹಾಗೂ ಪುತ್ರ ಧರಣೀಧರ ಇವರನ್ನು ಮಡಿಕೇರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶುಕ್ರವಾರ ತಡರಾತ್ರಿ ಸ್ನೇಹಿತರ ಮನೆಗೆ ಹೋಗಿ ಬಂದಿದ್ದ ಉತ್ತರ ಕುಮಾರ ಅವರು ತಾರಿಣಿ ಅವರ ಮನೆಯ ಬಳಿ ಬೈಕ್ ಸದ್ದು ಮಾಡುತ್ತಿರುವುದು  ಕೇಳಿ ತರಾಟೆಗೆ ತೆಗೆದುಕೊಂಡರು ಎನ್ನಲಾಗಿದೆ. ಆಸ್ತಿ ತಕರಾರು ಹಿಂದೆಯೇ ಇದ್ದ ಕಾರಣ ಮಾತಿಗೆ ಮಾತು ಬೆಳೆದು ಪಾನಮತ್ತರಾಗಿದ್ದ ಉತ್ತರ ಕುಮಾರ ತಾರಿಣಿಯವರ ಮನೆಯಂಗಳಕ್ಕೆ ಬಂದು ಬೈಯ್ಯತೊಡಗಿದರೆನ್ನಲಾಗಿದೆ.

ಈ ಸಂದರ್ಭ ಉತ್ತರ ಕುಮಾರ ಅವರು ತಾರಿಣಿ ಅವರ ಮನೆ ಪ್ರವೇಶಿಸಿಲು ಯತ್ನಿಸಿದಾಗ ಕತ್ತಿಯಿಂದ ಕಡಿದರು ಎನ್ನಲಾಗಿದೆ.  ಈ ವೇಳೆ ಗಂಭೀರ ಗಾಯಗೊಂಡ ಉತ್ತರ ಕುಮಾರ ಅಂಗಳದಲ್ಲಿ ಬಿದ್ದ ಸ್ಥಳದಲ್ಲಿಯೇ ಸಾವನ್ನಪ್ಪಿದರೆನ್ನಲಾಗಿದೆ.

ಶನಿವಾರ ಬೆಳಗ್ಗೆ ಮಡಿಕೇರಿಯಿಂದ ಪೊಲೀಸ್ ಅಧಿಕಾರಿಗಳು ಆಗಮಿಸಿ ತನಿಖೆ ಆರಂಭಿಸಿದ್ದಾರೆ. ತಾರಿಣಿ ಮತ್ತು ಧರಣೀಧರ ಅವರನ್ನು ವಶಕ್ಕೆ ಪಡೆದಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

6 hours ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

6 hours ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

23 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago