ಸಂಪಾಜೆ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಶುಕ್ರವಾರ ತಡರಾತ್ರಿ ಮಾತಿನ ಚಕಮಕಿ ನಡೆದು ಕೊಲೆಯಲ್ಲಿ ಅಂತ್ಯವಾದ ಘಟನೆ ಪೆರಾಜೆಯ ಪೀಚೆ ಮನೆ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಉತ್ತರ ಕುಮಾರ ಎಂಬವರು ಮೃತಪಟ್ಟಿದ್ದಾರೆ.
ಮದ್ಯಪಾನ ಮಾಡಿ ಮನೆಗೆ ನುಗ್ಗಿ ಆಸ್ತಿ ವಿಚಾರವಾಗಿ ಗಲಾಟೆ ಮಾಡಿದ ಮೈದುನನ್ನು ಅತ್ತಿಗೆ ಹಾಗೂ ಆಕೆಯ ಪುತ್ರ ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾರೆ. ಆರೋಪಿಗಳಾದ ದಿ.ಕೇಶವ ಅವರ ಪತ್ನಿ ತಾರಿಣಿ , ಹಾಗೂ ಪುತ್ರ ಧರಣೀಧರ ಇವರನ್ನು ಮಡಿಕೇರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶುಕ್ರವಾರ ತಡರಾತ್ರಿ ಸ್ನೇಹಿತರ ಮನೆಗೆ ಹೋಗಿ ಬಂದಿದ್ದ ಉತ್ತರ ಕುಮಾರ ಅವರು ತಾರಿಣಿ ಅವರ ಮನೆಯ ಬಳಿ ಬೈಕ್ ಸದ್ದು ಮಾಡುತ್ತಿರುವುದು ಕೇಳಿ ತರಾಟೆಗೆ ತೆಗೆದುಕೊಂಡರು ಎನ್ನಲಾಗಿದೆ. ಆಸ್ತಿ ತಕರಾರು ಹಿಂದೆಯೇ ಇದ್ದ ಕಾರಣ ಮಾತಿಗೆ ಮಾತು ಬೆಳೆದು ಪಾನಮತ್ತರಾಗಿದ್ದ ಉತ್ತರ ಕುಮಾರ ತಾರಿಣಿಯವರ ಮನೆಯಂಗಳಕ್ಕೆ ಬಂದು ಬೈಯ್ಯತೊಡಗಿದರೆನ್ನಲಾಗಿದೆ.
ಈ ಸಂದರ್ಭ ಉತ್ತರ ಕುಮಾರ ಅವರು ತಾರಿಣಿ ಅವರ ಮನೆ ಪ್ರವೇಶಿಸಿಲು ಯತ್ನಿಸಿದಾಗ ಕತ್ತಿಯಿಂದ ಕಡಿದರು ಎನ್ನಲಾಗಿದೆ. ಈ ವೇಳೆ ಗಂಭೀರ ಗಾಯಗೊಂಡ ಉತ್ತರ ಕುಮಾರ ಅಂಗಳದಲ್ಲಿ ಬಿದ್ದ ಸ್ಥಳದಲ್ಲಿಯೇ ಸಾವನ್ನಪ್ಪಿದರೆನ್ನಲಾಗಿದೆ.
ಶನಿವಾರ ಬೆಳಗ್ಗೆ ಮಡಿಕೇರಿಯಿಂದ ಪೊಲೀಸ್ ಅಧಿಕಾರಿಗಳು ಆಗಮಿಸಿ ತನಿಖೆ ಆರಂಭಿಸಿದ್ದಾರೆ. ತಾರಿಣಿ ಮತ್ತು ಧರಣೀಧರ ಅವರನ್ನು ವಶಕ್ಕೆ ಪಡೆದಿದ್ದಾರೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…