ಸಂಪಾಜೆ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಶುಕ್ರವಾರ ತಡರಾತ್ರಿ ಮಾತಿನ ಚಕಮಕಿ ನಡೆದು ಕೊಲೆಯಲ್ಲಿ ಅಂತ್ಯವಾದ ಘಟನೆ ಪೆರಾಜೆಯ ಪೀಚೆ ಮನೆ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಉತ್ತರ ಕುಮಾರ ಎಂಬವರು ಮೃತಪಟ್ಟಿದ್ದಾರೆ.
ಮದ್ಯಪಾನ ಮಾಡಿ ಮನೆಗೆ ನುಗ್ಗಿ ಆಸ್ತಿ ವಿಚಾರವಾಗಿ ಗಲಾಟೆ ಮಾಡಿದ ಮೈದುನನ್ನು ಅತ್ತಿಗೆ ಹಾಗೂ ಆಕೆಯ ಪುತ್ರ ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾರೆ. ಆರೋಪಿಗಳಾದ ದಿ.ಕೇಶವ ಅವರ ಪತ್ನಿ ತಾರಿಣಿ , ಹಾಗೂ ಪುತ್ರ ಧರಣೀಧರ ಇವರನ್ನು ಮಡಿಕೇರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶುಕ್ರವಾರ ತಡರಾತ್ರಿ ಸ್ನೇಹಿತರ ಮನೆಗೆ ಹೋಗಿ ಬಂದಿದ್ದ ಉತ್ತರ ಕುಮಾರ ಅವರು ತಾರಿಣಿ ಅವರ ಮನೆಯ ಬಳಿ ಬೈಕ್ ಸದ್ದು ಮಾಡುತ್ತಿರುವುದು ಕೇಳಿ ತರಾಟೆಗೆ ತೆಗೆದುಕೊಂಡರು ಎನ್ನಲಾಗಿದೆ. ಆಸ್ತಿ ತಕರಾರು ಹಿಂದೆಯೇ ಇದ್ದ ಕಾರಣ ಮಾತಿಗೆ ಮಾತು ಬೆಳೆದು ಪಾನಮತ್ತರಾಗಿದ್ದ ಉತ್ತರ ಕುಮಾರ ತಾರಿಣಿಯವರ ಮನೆಯಂಗಳಕ್ಕೆ ಬಂದು ಬೈಯ್ಯತೊಡಗಿದರೆನ್ನಲಾಗಿದೆ.
ಈ ಸಂದರ್ಭ ಉತ್ತರ ಕುಮಾರ ಅವರು ತಾರಿಣಿ ಅವರ ಮನೆ ಪ್ರವೇಶಿಸಿಲು ಯತ್ನಿಸಿದಾಗ ಕತ್ತಿಯಿಂದ ಕಡಿದರು ಎನ್ನಲಾಗಿದೆ. ಈ ವೇಳೆ ಗಂಭೀರ ಗಾಯಗೊಂಡ ಉತ್ತರ ಕುಮಾರ ಅಂಗಳದಲ್ಲಿ ಬಿದ್ದ ಸ್ಥಳದಲ್ಲಿಯೇ ಸಾವನ್ನಪ್ಪಿದರೆನ್ನಲಾಗಿದೆ.
ಶನಿವಾರ ಬೆಳಗ್ಗೆ ಮಡಿಕೇರಿಯಿಂದ ಪೊಲೀಸ್ ಅಧಿಕಾರಿಗಳು ಆಗಮಿಸಿ ತನಿಖೆ ಆರಂಭಿಸಿದ್ದಾರೆ. ತಾರಿಣಿ ಮತ್ತು ಧರಣೀಧರ ಅವರನ್ನು ವಶಕ್ಕೆ ಪಡೆದಿದ್ದಾರೆ.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…