Advertisement
ಸುದ್ದಿಗಳು

ಆಸ್ತಿ ವಿವಾದ : ಕತ್ತಿಯಿಂದ ಕಡಿದು ಕೊಲೆ | ಇಬ್ಬರು ಪೊಲೀಸ್ ವಶಕ್ಕೆ | ಮುಂದುವರಿದ ತನಿಖೆ

Share

ಸಂಪಾಜೆ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಶುಕ್ರವಾರ ತಡರಾತ್ರಿ ಮಾತಿನ ಚಕಮಕಿ ನಡೆದು ಕೊಲೆಯಲ್ಲಿ ಅಂತ್ಯವಾದ ಘಟನೆ ಪೆರಾಜೆಯ ಪೀಚೆ ಮನೆ  ಎಂಬಲ್ಲಿ  ನಡೆದಿದೆ. ಘಟನೆಯಲ್ಲಿ  ಉತ್ತರ ಕುಮಾರ ಎಂಬವರು ಮೃತಪಟ್ಟಿದ್ದಾರೆ.

ಮದ್ಯಪಾನ ಮಾಡಿ ಮನೆಗೆ ನುಗ್ಗಿ ಆಸ್ತಿ ವಿಚಾರವಾಗಿ ಗಲಾಟೆ ಮಾಡಿದ ಮೈದುನನ್ನು ಅತ್ತಿಗೆ ಹಾಗೂ ಆಕೆಯ ಪುತ್ರ ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾರೆ. ಆರೋಪಿಗಳಾದ ದಿ.ಕೇಶವ ಅವರ ಪತ್ನಿ  ತಾರಿಣಿ , ಹಾಗೂ ಪುತ್ರ ಧರಣೀಧರ ಇವರನ್ನು ಮಡಿಕೇರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶುಕ್ರವಾರ ತಡರಾತ್ರಿ ಸ್ನೇಹಿತರ ಮನೆಗೆ ಹೋಗಿ ಬಂದಿದ್ದ ಉತ್ತರ ಕುಮಾರ ಅವರು ತಾರಿಣಿ ಅವರ ಮನೆಯ ಬಳಿ ಬೈಕ್ ಸದ್ದು ಮಾಡುತ್ತಿರುವುದು  ಕೇಳಿ ತರಾಟೆಗೆ ತೆಗೆದುಕೊಂಡರು ಎನ್ನಲಾಗಿದೆ. ಆಸ್ತಿ ತಕರಾರು ಹಿಂದೆಯೇ ಇದ್ದ ಕಾರಣ ಮಾತಿಗೆ ಮಾತು ಬೆಳೆದು ಪಾನಮತ್ತರಾಗಿದ್ದ ಉತ್ತರ ಕುಮಾರ ತಾರಿಣಿಯವರ ಮನೆಯಂಗಳಕ್ಕೆ ಬಂದು ಬೈಯ್ಯತೊಡಗಿದರೆನ್ನಲಾಗಿದೆ.

ಈ ಸಂದರ್ಭ ಉತ್ತರ ಕುಮಾರ ಅವರು ತಾರಿಣಿ ಅವರ ಮನೆ ಪ್ರವೇಶಿಸಿಲು ಯತ್ನಿಸಿದಾಗ ಕತ್ತಿಯಿಂದ ಕಡಿದರು ಎನ್ನಲಾಗಿದೆ.  ಈ ವೇಳೆ ಗಂಭೀರ ಗಾಯಗೊಂಡ ಉತ್ತರ ಕುಮಾರ ಅಂಗಳದಲ್ಲಿ ಬಿದ್ದ ಸ್ಥಳದಲ್ಲಿಯೇ ಸಾವನ್ನಪ್ಪಿದರೆನ್ನಲಾಗಿದೆ.

ಶನಿವಾರ ಬೆಳಗ್ಗೆ ಮಡಿಕೇರಿಯಿಂದ ಪೊಲೀಸ್ ಅಧಿಕಾರಿಗಳು ಆಗಮಿಸಿ ತನಿಖೆ ಆರಂಭಿಸಿದ್ದಾರೆ. ತಾರಿಣಿ ಮತ್ತು ಧರಣೀಧರ ಅವರನ್ನು ವಶಕ್ಕೆ ಪಡೆದಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

3 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

13 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

18 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago