ಬೆಂಗಳೂರು: ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಸಿದ್ದರಾಮಯ್ಯ ಅವರನ್ನು ಗುರುವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವರಾದ ಕೆ.ಎಸ್.ಈಶ್ವರಪ್ಪ, ಬಸವರಾಜ ಬೊಮ್ಮಾಯಿ ಯೋಗಕ್ಷೇಮ ವಿಚಾರಿಸಿ, ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.
ಈ ವೇಳೆ ಸಿಎಂ ಜತೆ ಮಾತನಾಡಿದ ಸಿದ್ದರಾಮಯ್ಯ, ನಾನು ಆರೋಗ್ಯವಾಗಿದ್ದೇನೆ, ಯಾರೂ ಆತಂಕಪಡುವ ಅಗತ್ಯವಿಲ್ಲ. ಇನ್ನು ಎರಡು ದಿನಗಳಲ್ಲಿ ವಾಪಸ್ ಬರಲಿದ್ದೇನೆ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಆರೋಗ್ಯ ವಿಚಾರಿಸಿದ ಅಹ್ಮದ್ ಪಟೇಲ್, ಕೆ.ಸಿ.ವೇಣುಗೋಪಾಲ್, ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಸಿದ್ದರಾಮಯ್ಯ ಅವರಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…