Advertisement
ಸುದ್ದಿಗಳು

ಆಹಾರ ಸಾಮಗ್ರಿಗಳ ನಿರಂತರ ಪೂರೈಕೆ: ಜಿಲ್ಲಾಧಿಕಾರಿ ಸೂಚನೆ | ಸಾರ್ವಜನಿಕರು ಆತಂಕಗೊಳ್ಳುವ ಅಗತ್ಯವಿಲ್ಲ| ಒಂದೇ ಬಾರಿಗೆ ಸಾಮಗ್ರಿಗಳನ್ನು ಖರೀದಿಸುವ ಅಗತ್ಯವಿಲ್ಲ |

Share

ಮಂಗಳೂರು : ಜಿಲ್ಲೆಗೆ ಹೊರಜಿಲ್ಲೆಗಳಿಂದ ಬರುವ  ಆಹಾರ ಸಾಮಾಗ್ರಿಗಳು, ದಿನಸಿ ಅಂಗಡಿ, ತರಕಾರಿ,ಹಣ್ಣು ಪೂರೈಕೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ನಿಗಾ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.

ಅವರು  ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯಲ್ಲಿ ಆಹಾರ ಸೇರಿದಂತೆ  ಅಗತ್ಯ ವಸ್ತುಗಳ ಪೂರೈಕೆ ಸಂಬಂಧಿಸಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಜಿಲ್ಲೆಯಲ್ಲಿ ಸಗಟು ಹಾಗೂ ಚಿಲ್ಲರೆ ವ್ಯಾಪಾರಿಗಳಿಗೆ ತರಕಾರಿ, ಅಕ್ಕಿ, ಹಣ್ಣುಹಂಪಲು ಸೇರಿದಂತೆ ಆಹಾರ ಸಾಮಗ್ರಿಗಳ ಪೂರೈಕೆ ನಿರಂತರವಾಗಿರಬೇಕು. ಅಕ್ಕಿ, ಜಿನಸು, ತರಕಾರಿ, ಹಣ್ಣು ಹಂಪಲು  ಸಾಗಿಸುವ ವಾಹನಗಳಿಗೆ ಯಾವುದೇ ಅಡೆತಡೆ ಮಾಡದಂತೆ ಅವರು  ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲೆಗೆ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಇತರ ಜಿಲ್ಲೆಗಳಿಂದ ತರಕಾರಿ ಹಣ್ಣು ಹಂಪಲು ಸರಬರಾಜು ಆಗುತ್ತಿದ್ದು, ಅಕ್ಕಿ ಉಡುಪಿಯಿಂದ ರವಾನೆಯಾಗುತ್ತದೆ. ಇಂತಹ ವಾಹನಗಳ ಸಂಚಾರಕ್ಕೆ ಯಾವುದೇ ಕಾರಣಕ್ಕೂ ಅಡೆತಡೆ ಮಾಡದಂತೆ ಅವರು ಸೂಚಿಸಿದರು.

ಸಾರ್ವಜನಿಕರು ಆತಂಕಗೊಳ್ಳುವ ಅಗತ್ಯವಿಲ್ಲ. ಒಂದೇ ಬಾರಿಗೆ ಸಾಮಗ್ರಿಗಳನ್ನು ಖರೀದಿಸುವ ಅಗತ್ಯವಿಲ್ಲ. ಆಹಾರ ಸಾಮಗ್ರಿ ಸಾಕಷ್ಟು ದಾಸ್ತಾನು ಇರುವಂತೆ ಅಹಾರ ಇಲಾಖೆಗೆ ಸೂಚಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕೆ ವತಿಯಿಂದಲು ಸ್ಥಳೀಯ ತಂಡ ರಚಿಸಿ ನಿಗಾ ಇಡಲು ಸೂಚಿಸಲಾಗಿದೆ. ಜನರು ಅಂಗಡಿಗಳಲ್ಲಿ ಮುಗಿ ಬೀಳಬಾರದು. ಮಾರುಕಟ್ಟೆಯಲ್ಲಿ ಆಹಾರ ಸಾಮಾಗ್ರಿಗಳ ಸರಬರಾಜು ಕೊರತೆಯಾಗದಂತೆ ನಿಗಾ ಇಡಲಾಗಿದೆ   ಎಂದು ಅವರು  ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರೂಪಾ,  ಮಹಾನಗರಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್, ಡಿಸಿಪಿಗಳಾದ ಅರುಣಾಂಶಗಿರಿ, ಲಕ್ಷ್ಮೀಗಣೇಶ್, ಎಎಸ್ಪಿ ವಿಕ್ರಂ ಅಮಾಟೆ,   ಆಹಾರ ಇಲಾಖೆ ಜಂಟೀ ನಿರ್ದೇಶಕ ಮಂಜುನಾಥ್, ತಹಶೀಲ್ದಾರ್ ಗಳು  ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

16 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

23 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

1 day ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago