Advertisement
ಸುದ್ದಿಗಳು

ಆಹಾರ ಸಾಮಗ್ರಿಗಳ ನಿರಂತರ ಪೂರೈಕೆ: ಜಿಲ್ಲಾಧಿಕಾರಿ ಸೂಚನೆ | ಸಾರ್ವಜನಿಕರು ಆತಂಕಗೊಳ್ಳುವ ಅಗತ್ಯವಿಲ್ಲ| ಒಂದೇ ಬಾರಿಗೆ ಸಾಮಗ್ರಿಗಳನ್ನು ಖರೀದಿಸುವ ಅಗತ್ಯವಿಲ್ಲ |

Share

ಮಂಗಳೂರು : ಜಿಲ್ಲೆಗೆ ಹೊರಜಿಲ್ಲೆಗಳಿಂದ ಬರುವ  ಆಹಾರ ಸಾಮಾಗ್ರಿಗಳು, ದಿನಸಿ ಅಂಗಡಿ, ತರಕಾರಿ,ಹಣ್ಣು ಪೂರೈಕೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ನಿಗಾ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.

ಅವರು  ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯಲ್ಲಿ ಆಹಾರ ಸೇರಿದಂತೆ  ಅಗತ್ಯ ವಸ್ತುಗಳ ಪೂರೈಕೆ ಸಂಬಂಧಿಸಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಜಿಲ್ಲೆಯಲ್ಲಿ ಸಗಟು ಹಾಗೂ ಚಿಲ್ಲರೆ ವ್ಯಾಪಾರಿಗಳಿಗೆ ತರಕಾರಿ, ಅಕ್ಕಿ, ಹಣ್ಣುಹಂಪಲು ಸೇರಿದಂತೆ ಆಹಾರ ಸಾಮಗ್ರಿಗಳ ಪೂರೈಕೆ ನಿರಂತರವಾಗಿರಬೇಕು. ಅಕ್ಕಿ, ಜಿನಸು, ತರಕಾರಿ, ಹಣ್ಣು ಹಂಪಲು  ಸಾಗಿಸುವ ವಾಹನಗಳಿಗೆ ಯಾವುದೇ ಅಡೆತಡೆ ಮಾಡದಂತೆ ಅವರು  ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲೆಗೆ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಇತರ ಜಿಲ್ಲೆಗಳಿಂದ ತರಕಾರಿ ಹಣ್ಣು ಹಂಪಲು ಸರಬರಾಜು ಆಗುತ್ತಿದ್ದು, ಅಕ್ಕಿ ಉಡುಪಿಯಿಂದ ರವಾನೆಯಾಗುತ್ತದೆ. ಇಂತಹ ವಾಹನಗಳ ಸಂಚಾರಕ್ಕೆ ಯಾವುದೇ ಕಾರಣಕ್ಕೂ ಅಡೆತಡೆ ಮಾಡದಂತೆ ಅವರು ಸೂಚಿಸಿದರು.

ಸಾರ್ವಜನಿಕರು ಆತಂಕಗೊಳ್ಳುವ ಅಗತ್ಯವಿಲ್ಲ. ಒಂದೇ ಬಾರಿಗೆ ಸಾಮಗ್ರಿಗಳನ್ನು ಖರೀದಿಸುವ ಅಗತ್ಯವಿಲ್ಲ. ಆಹಾರ ಸಾಮಗ್ರಿ ಸಾಕಷ್ಟು ದಾಸ್ತಾನು ಇರುವಂತೆ ಅಹಾರ ಇಲಾಖೆಗೆ ಸೂಚಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕೆ ವತಿಯಿಂದಲು ಸ್ಥಳೀಯ ತಂಡ ರಚಿಸಿ ನಿಗಾ ಇಡಲು ಸೂಚಿಸಲಾಗಿದೆ. ಜನರು ಅಂಗಡಿಗಳಲ್ಲಿ ಮುಗಿ ಬೀಳಬಾರದು. ಮಾರುಕಟ್ಟೆಯಲ್ಲಿ ಆಹಾರ ಸಾಮಾಗ್ರಿಗಳ ಸರಬರಾಜು ಕೊರತೆಯಾಗದಂತೆ ನಿಗಾ ಇಡಲಾಗಿದೆ   ಎಂದು ಅವರು  ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರೂಪಾ,  ಮಹಾನಗರಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್, ಡಿಸಿಪಿಗಳಾದ ಅರುಣಾಂಶಗಿರಿ, ಲಕ್ಷ್ಮೀಗಣೇಶ್, ಎಎಸ್ಪಿ ವಿಕ್ರಂ ಅಮಾಟೆ,   ಆಹಾರ ಇಲಾಖೆ ಜಂಟೀ ನಿರ್ದೇಶಕ ಮಂಜುನಾಥ್, ತಹಶೀಲ್ದಾರ್ ಗಳು  ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

18 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

20 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

20 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

23 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 day ago