Advertisement
MIRROR FOCUS

ಆ ಮನೆಯ ಮಕ್ಕಳಲ್ಲೀಗ ಸಂತಸ…! ಯುವಬ್ರಿಗೇಡ್ ಯುವಕರಲ್ಲಿ ಸಂತೃಪ್ತ ಭಾವ

Share

ಸುಳ್ಯ: ಆ ಪುಟ್ಟ ಮನೆ ನಿರ್ಮಾಣಕ್ಕೆ ಒಂದು ದಿನದ ಶ್ರಮದಾನ. ದಾನಿಗಳ ನೆರವು. ಗುಡಿಸಲೂ ಅಲ್ಲದ ಮನೆಯೊಂದನ್ನು  ಮರುನಿರ್ಮಾಣ ಮಾಡಿದ್ದಾರೆ ಯುವಬ್ರಿಗೇಡ್ ಯುವಕರು. ಸುಳ್ಯದ ಯುವ ಬ್ರಿಗೇಡ್ ಯುವಕರು ಭಾನುವಾರ ಪೂರ್ತಿ ದಿನ ಕೆಲಸ ಮಾಡಿದರು. ಆ ಮನೆಯ ಮಕ್ಕಳ ಮುಖದಲ್ಲಿ ಸಂತಸ ಕಾಣುತ್ತಿದೆ. ಯುವಕರು ಸಂತೃಪ್ತ ಭಾವದಿಂದ ಸುಳ್ಯದ ಕಡೆಗೆ ಹೆಜ್ಜೆ ಹಾಕಿದರು.

ಗ್ರಾಮೀಣ ಕಡೆಗೆ ಯುವಕರೂ ನೋಡುತ್ತಿದ್ದಾರೆ. ಸಮಾಜಮುಖಿಯಾಗಿರುವ ಮನಸ್ಸುಗಳು ಇನ್ನೂ ಇವೆ. ಅವರನ್ನು  ನೋಡುವ ಕಣ್ಣುಗಳು ಇಲ್ಲವಾಗಿದೆ. ಹಾಗಂತ ಅವರೆಂದೂ ಕೆಲಸ ನಿಲ್ಲಿಸಿಲ್ಲ. ನಿರಂತರವಾಗಿ ಬಿಡುವಿನ ನಡುವೆ ಒಂದಷ್ಟು ಕೆಲಸ ಮಾಡುತ್ತಲೇ ಇದ್ದಾರೆ. ಅದು ಯುವಬ್ರಿಗೆಡ್ ಅಂತ ಅಲ್ಲ ಇನ್ನೂ ಹಲವಾರು ಸಂಘಟನೆಗಳ ಯುವಕರು ಸದ್ದಿಲ್ಲದೆ ಕೆಲಸ ಮಾಡುತ್ತಾರೆ. ಅವರಿಗೆ ಪ್ರಚಾರ ಬೇಕಿಲ್ಲ.  ಹಾಗಿದ್ದೂ ನಗರದ ಯಾವುದೇ ಒಂದು ಘಟನೆಯ ಸುತ್ತ ಸುತ್ತುತ್ತಾ ಯುವಕರು ದಾರಿ ತಪ್ಪಿದ್ದಾರೆ ಎನ್ನುವ ಬೊಬ್ಬೆ ಮಾಧ್ಯಮದಲ್ಲಿ  ಕೇಳುತ್ತದೆ. ಪ್ರತೀ ದಿನ ಎಲ್ಲಾ ವಿಷಯಗಳನ್ನೂ  ನೆಗೆಟಿವ್ ಆಗಿಯೇ ಪತ್ರಿಕೋದ್ಯಮ ನೋಡುತ್ತದೆ , ಜಾಹೀರಾತು ಇಲ್ಲದೆ  ನ್ಯೂಸ್ ಪ್ರಕಟವಾಗದು ಅಂತಲೂ ಹೇಳುವವರೂ ಇದ್ದಾರೆ.  ಪ್ರಚಾರಕ್ಕಾಗಿ ವಿವಿಧ ಬಗೆಯ ಆಂದೋಲನ ಮಾಡುವವರೂ ಇದ್ದಾರೆ. ಇದೆಲ್ಲಾ ಬಿಟ್ಟು ಸದ್ದಿಲ್ಲದೆ ಕೆಲಸ ಮಾಡುವ ಯುವಕರ ತಂಡ ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುತ್ತಲೇ ಇರುತ್ತದೆ. ಅಂತಹದ್ದರಲ್ಲಿ  ಭಾನುವಾರ ಸುಳ್ಯದ ಯುವಬ್ರಿಗೆಡ್ ಮಾಡಿರುವ ಕೆಲಸ ಶ್ಲಾಘನೀಯ. ಅದು ಸಮಾಜಕ್ಕೂ ತಿಳಿಯಬೇಕು. ಋಣಾತ್ಮಕವಾಗಿ ಚಿಂತಿಸುವ ಬದಲು ರಚನಾತ್ಮಕವಾಗಿ ಯೋಚಿಸುವ ಮನಸ್ಥಿತಿಯನ್ನು  ಯುವ ಬ್ರಿಗೆಡ್ ಯುವಕರಲ್ಲಿ  ಬೆಳೆಸುತ್ತಿದೆ.

ಇದು ಗುಡಿಸಲೂ ಅಲ್ಲದ ಮನೆಯೊಂದರ ಕತೆ. ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಮಡಿವಾಳ ಮೂಲೆ ಎಂಬಲ್ಲಿ  ಪಕೀರ ಎಂಬವರ ಮನೆಯ ಇತ್ತು. ಪೂರ್ತಿಯಾಗಿ ಪ್ಲಾಸ್ಟಿಕ್ ಹೊದಿಕೆ ಹಾಕಿ ಗುಡಿಸಲು ಎನ್ನಲೂ ಕಷ್ಟವಾಗುವ ಸ್ಥಿತಿಯಲ್ಲಿತ್ತು. ಈ ಬಗ್ಗೆ ಸಮಾಜಸೇವಾ ಸಂಘಟನೆಗಳು ಜನಪ್ರತಿನಿಧಿಗಳ, ಆಡಳಿತ ವ್ಯವಸ್ಥೆಯ ಗಮನಸೆಳೆದಿದ್ದರೂ ಮನೆ ಮಾತ್ರಾ ಆಗಿರಲಿಲ್ಲ. ಕಳೆದ ಅನೇಕ ವರಷಗಳಿಂದ ಇದೇ ಮನೆಯಲ್ಲಿ  ಅವರು ವಾಸ ಮಾಡುತ್ತಿದ್ದಾರೆ. ಮಳೆಗಾಲವಂತೂ ಇವರ ಬದುಕು ಅಯೋಮಯ. ವ್ಯವಸ್ಥೆಯ ಕಾರಣದಿಂದ  ಮಕ್ಕಳೂ ಶಾಲೆಗೂ ಹೋಗಲಾಗದೆ ಮನೆಯಲ್ಲೂ ಉಳಿದುಕೊಳ್ಳಲಾರದ ಸ್ಥಿತಿ ಇತ್ತು.

 

ಈಗ ನಿರ್ಮಾಣವಾದ ಮನೆ

 

ಯುವ ಬ್ರಿಗೇಡ್ ಈ ಕುಟುಂಬನ್ನು  ಗಮನಿಸಿ ಸಹಾಯ ಮಾಡಿದೆ. ದಾನಿಗಳ ಸಹಾಯದಿಂದ ಮನೆಯೊಂದನ್ನು  ಮರುನಿರ್ಮಾಣ ಮಾಡಿದೆ. ಭಾನುವಾರ ದಿನ ಪೂರ್ತಿ ಯುವಕರ ತಂಡ ಕೆಲಸ ಮಾಡಿದೆ ಅಲ್ಲಿ.  ಅಡಿಪಾಯ ಹಾಕಿ ಸುತ್ತಲೂ ಕಲ್ಲುಗಳನ್ನು  ಕಟ್ಟಿ, ನೆಲಕ್ಕೆ ಸಿಮೆಂಟ್ ಹಾಸಿ ಸುತ್ತಲೂ ಭದ್ರತೆ ಮಾಡಿ ಪ್ಲಾಸ್ಟಿಕ್ ಹೊದಿಕೆಯನ್ನು ಕಟ್ಟಿ ಮನೆ ನಿರ್ಮಾಣ ಮಾಡಿದ್ದಾರೆ. ಅದರ ಜೊತೆಗೆ ಸೋಲಾರ್ ಬೆಳಕನ್ನೂ ಮನೆಗೆ ಕಲ್ಪಿಸಿದ್ದಾರೆ.

 

 

ಯುವಬ್ರಿಗೇಡ್ ಕಾರ್ಯ ಇದಿಷ್ಟೇ ಅಲ್ಲ,

ಇತ್ತೀಚೆಗೆ ಪುಸ್ತಕವನ್ನು ಶಾಲಾ ಮಕ್ಕಳಿಗೆ ವಿತರಣೆ ಮಾಡಿದೆ,  ಶಾಲಾ ಮಕ್ಕಳು ಬರೆದು ಬಿಟ್ಟ ಪುಸ್ತಕದಲ್ಲಿ ಉಳಿದ ಖಾಲಿ ಪುಟಗಳನ್ನು ಸಂಗ್ರಹ ಮಾಡಿ ಅದನ್ನು ಮತ್ತೆ ಜೋಡಿಸಿ ಒಂದು ಸುಂದರವಾದ ಮುಖ ಪುಟವನ್ನು ಹಾಕಿ ಅದನ್ನು ಆಯ್ದ ಬಡ ಮಕ್ಕಳಿಗೆ ಹಂಚುವ ಕೆಲಸವನ್ನು ಮಾಡುತ್ತಿದೆ. ಹೀಗೆ ಮಾಡಿರುವ ಕಾರಣ  ಈ ವರ್ಷ 100 ಪುಟದ 600 ಪುಸ್ತಕಗಳಾಗಿದ್ದವು.

ಪರಿಸರದ ಉಳಿವಿಗಾಗಿ ಹಾಗೂ ನದಿಗಳ ಸ್ವಚ್ಛತೆ, ಸ್ವಚ್ಚ ರಾಜಮಾರ್ಗ ಕಲ್ಪನೆಯಲ್ಲಿ ತಾಲೂಕಿನ ಹೆದ್ದಾರಿಯ ಸ್ವಚ್ಛತೆಯನ್ನುವಿವಿಧ ಹಂತಗಳಲ್ಲಿ  ಕಸವನ್ನು ರಾಜ್ಯಹೆದ್ದಾರಿಯಿಂದ ಹೆಕ್ಕಿವಿಲೇವಾರಿ, ಶಾಲಾ ಮಕ್ಕಳಿಗೆ ಬಿಸಿಯೂಟದೊಂದಿಗೆ ಆರೋಗ್ಯಯುತವಾದ ಹಣ್ಣುಗಳು ಸಿಗುವ ಉದ್ದೇಶದಿಂದ  ತಾಲೂಕಿನ ಶಾಲೆಗಳಲ್ಲಿ ಹಣ್ಣಿನ ಗಿಡಗಳನ್ನು ನೆಡುವ ಕಾರ್ಯಕ್ರಮ ,  ಪಾಳು ಬಿದ್ದ ಬಸ್ಸು ನಿಲ್ದಾಣಗಳನ್ನು ಸ್ವಚ್ಛ ಮಾಡಿ ಪೈಂಟ್ ಮಾಡುವ ಮೂಲಕ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವುದು, ತುರ್ತು ಸಂದರ್ಭದಲ್ಲಿ ರಕ್ತ ಕೊರತೆಯಾದಾಗ ರಕ್ತದಾನ,  ಕಾಲೋನಿ ಯಲ್ಲಿನ ಬಡವರಿಗೆ ನೀರು ಸರಬರಾಜು ಸರಿಯಾಗಿ ಆಗದ ಸಂದರ್ಭದಲ್ಲಿ ತಮ್ಮ ಬಿಡುವಿನ ಸಮಯದಲ್ಲಿ ನೀರಿನ ಪೈಪ್ ಗಳನ್ನು ಸರಿ ಪಡಿಸಿ ಸಮಸ್ಯೆ ಗಳನ್ನು ಬಗೆಹರಿಸುವುದು ಹೀಗೆ ಹತ್ತು ಹಲವು ಕೆಲಸವನ್ನು ಸದ್ದಿಲ್ಲದೆ ಯುವಬ್ರಿಗೆಡ್ ಯುವಕರು ಮಾಡಿದ್ದಾರೆ.

 

 

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

9 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

17 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

18 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

18 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago