ಸುಳ್ಯ: ಹೈ ಟೊರ್ಕ್ ಮೊಟೊ ಕ್ರೆವ್ ಗ್ರೂಪ್ ಮತ್ತು ಸ್ವಚ್ಛ ನಗರ ಸುಳ್ಯದ ಸಹಭಾಗಿತ್ವದಲ್ಲಿ ವಿಭಿನ್ನ ರೀತಿಯಲ್ಲಿ ಪ್ಲಾಸ್ಟಿಕ್ ನಿರ್ಮೂಲನಾ ಜಾಥ ನಡೆಯಲಿದೆ.
ಆ.14 ರಂದು ಬೆಳಿಗ್ಗೆ 10 ಗಂಟೆಗೆ ಚೆನ್ನಕೇಶವ ದೇವಾಲಯದ ಆವರಣದಲ್ಲಿ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಧ್ವಜ ಹಾರಿಸುವ ಮೂಲಕ ಬೈಕ್ ಜಾಥಕ್ಕೆ ಚಾಲನೆ ನೀಡಲಿದ್ದಾರೆ. ಸುಮಾರು 50 ಕ್ಕಿಂತ ಹೆಚ್ಚಿನ ಬೈಕ್ ಸವಾರರು ಸುಳ್ಯ ನಗರದ ಎಲ್ಲಾ ಮುಖ್ಯ ರಸ್ತೆಗಳಲ್ಲಿ ಸಂಚರಿಸಿ ದಾರಿಯುದ್ದಕ್ಕೂ ಬಿದ್ದಿದ್ದ ಪ್ಲಾಸ್ಟಿಕ್ ಗಳನ್ನು ಹೆಕ್ಕಿ ತಂದು ವಿಲೇವಾರಿ ಮಾಡುವ ಮೂಲಕ ಜನರಲ್ಲಿ ಮುಂದೆ ಪ್ಲಾಸ್ಟಿಕ್ ಉಪಯೋಗಿಸಬೇಡಿ ಎಂದು ಜಾಗೃತಿ ಮೂಡಿಸುವ ವಿಭಿನ್ನ ರೀತಿಯ ” ಟ್ರೆಝರ್ ಹಂಟ್ ಫಾರ್ ಪ್ಲಾಸ್ಟಿಕ್ “ ಚಳುವಳಿ ನಡೆಯಲಿದೆ.ಈ ಬೃಹತ್ ಜಾಥ ಸುಳ್ಯ ಪ್ಲಾಸ್ಟಿಕ್ ಮುಕ್ತ ನಗರವಾಗಿ ಪರಿಣಮಿಸಲು ನಾಂದಿ ಹಾಡಲಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ಲಾಸ್ಟಿಕ್ ತ್ಯಾಜ್ಯದಿಂದ ಉಂಟಾಗುವ ಪರಿಸರ ಹಾನಿಯ ಕುರಿತು ಜನಜಾಗೃತಿ ಮೂಡಿಸುವ ಸಲುವಾಗಿ ಹಾಗೂ ಸ್ವಚ್ಛ ಸುಳ್ಯ-ಸುಂದರ ಸುಳ್ಯ ಪರಿಕಲ್ಪನೆಯನ್ನು ಸಾಕಾರಗೊಳಸುವತ್ತ ಮತ್ತೊಂದು ಹೆಜ್ಜೆ ಈ ಕಾರ್ಯಕ್ರಮ.
ಈ ಕಾರ್ಯಕ್ರಮದಲ್ಲಿ ಭಾಗವಹಿಸುವವರು ತಮ್ಮ ದ್ವಿಚಕ್ರ ವಾಹನ( ಬೈಕ್, ಆಕ್ಟಿವಾ)ದಲ್ಲಿ ಹಿಂಬದಿ ಸವಾರರೊಂದಿಗೆ ನಗರದಾದ್ಯಂತ ಸಂಚರಿಸಲಿರುವರು.ಪ್ಲಾಸ್ಟಿಕ್ ತ್ಯಾಜ್ಯ ಕಂಡಲ್ಲಿ ಹಿಂಬದಿ ಸವಾರರು ಅದನ್ನು ಹೆಕ್ಕಿ ತಮ್ಮೊಂದಿಗೆ ತಂದ ಕೈಚೀಲದಲ್ಲಿ ಹಾಕುವರು.
ಚೆನ್ನಕೇಶವ ದೇವಸ್ಥಾನದಿಂದ ಪ್ರಾರಂಭಗೊಂಡು, ಸುಳ್ಯ ನಗರದಾದ್ಯಂತ ಸಂಚರಿಸಿ , ಪೈಚಾರ್ ತನಕ ಕಸ ಸಂಗ್ರಹಿಸಿ ಪುನಃ ಚೆನ್ನಕೇಶವ ದೇವಸ್ಥಾನದ ಬಳಿ ಕಾರ್ಯಕ್ರಮ ಸಂಪನ್ನಗೊಳಲ್ಲಿದೆ.
ಇದರಲ್ಲಿ ಭಾಗವಹಿಸಲು ಸರ್ವರಿಗೂ ಮುಕ್ತ ಅವಕಾಶ ಎಂದು ಸಂಘಟಕರು ತಿಳಿಸಿದ್ದಾರೆ.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…