Advertisement
ಸುದ್ದಿಗಳು

ಆ.14 : ಸುಳ್ಯದಲ್ಲಿ ಟ್ರಝರ್ ಹಂಟ್ ಫಾರ್ ಪ್ಲಾಸ್ಟಿಕ್….. ಪ್ಲಾಸ್ಟಿಕ್ ನಿರ್ಮೂಲನಾ ವಿಶಿಷ್ಟ ಜಾಥಾ

Share

ಸುಳ್ಯ: ಹೈ ಟೊರ್ಕ್ ಮೊಟೊ ಕ್ರೆವ್ ಗ್ರೂಪ್ ಮತ್ತು ಸ್ವಚ್ಛ ನಗರ ಸುಳ್ಯದ ಸಹಭಾಗಿತ್ವದಲ್ಲಿ ವಿಭಿನ್ನ‌ ರೀತಿಯಲ್ಲಿ ಪ್ಲಾಸ್ಟಿಕ್ ನಿರ್ಮೂಲನಾ ಜಾಥ ನಡೆಯಲಿದೆ.

ಆ.14 ರಂದು ಬೆಳಿಗ್ಗೆ 10 ಗಂಟೆಗೆ ಚೆನ್ನಕೇಶವ ದೇವಾಲಯದ ಆವರಣದಲ್ಲಿ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಧ್ವಜ ಹಾರಿಸುವ ಮೂಲಕ ಬೈಕ್ ಜಾಥಕ್ಕೆ ಚಾಲನೆ ನೀಡಲಿದ್ದಾರೆ. ಸುಮಾರು 50 ಕ್ಕಿಂತ ಹೆಚ್ಚಿನ ಬೈಕ್ ಸವಾರರು ಸುಳ್ಯ ನಗರದ ಎಲ್ಲಾ ಮುಖ್ಯ ರಸ್ತೆಗಳಲ್ಲಿ ಸಂಚರಿಸಿ ದಾರಿಯುದ್ದಕ್ಕೂ ಬಿದ್ದಿದ್ದ ಪ್ಲಾಸ್ಟಿಕ್ ಗಳನ್ನು ಹೆಕ್ಕಿ ತಂದು ವಿಲೇವಾರಿ ಮಾಡುವ ಮೂಲಕ ಜನರಲ್ಲಿ ಮುಂದೆ ಪ್ಲಾಸ್ಟಿಕ್ ಉಪಯೋಗಿಸಬೇಡಿ ಎಂದು ಜಾಗೃತಿ ಮೂಡಿಸುವ ವಿಭಿನ್ನ ರೀತಿಯ ” ಟ್ರೆಝರ್ ಹಂಟ್ ಫಾರ್ ಪ್ಲಾಸ್ಟಿಕ್ “ ಚಳುವಳಿ ನಡೆಯಲಿದೆ.ಈ ಬೃಹತ್ ಜಾಥ ಸುಳ್ಯ ಪ್ಲಾಸ್ಟಿಕ್ ಮುಕ್ತ ನಗರವಾಗಿ ಪರಿಣಮಿಸಲು ನಾಂದಿ ಹಾಡಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ಲಾಸ್ಟಿಕ್ ತ್ಯಾಜ್ಯದಿಂದ ಉಂಟಾಗುವ ಪರಿಸರ ಹಾನಿಯ ಕುರಿತು ಜನಜಾಗೃತಿ ಮೂಡಿಸುವ ಸಲುವಾಗಿ ಹಾಗೂ ಸ್ವಚ್ಛ ಸುಳ್ಯ-ಸುಂದರ ಸುಳ್ಯ ಪರಿಕಲ್ಪನೆಯನ್ನು ಸಾಕಾರಗೊಳಸುವತ್ತ ಮತ್ತೊಂದು ಹೆಜ್ಜೆ ಈ ಕಾರ್ಯಕ್ರಮ.

ಈ ಕಾರ್ಯಕ್ರಮದಲ್ಲಿ ಭಾಗವಹಿಸುವವರು ತಮ್ಮ ದ್ವಿಚಕ್ರ ವಾಹನ( ಬೈಕ್, ಆಕ್ಟಿವಾ)ದಲ್ಲಿ ಹಿಂಬದಿ ಸವಾರರೊಂದಿಗೆ ನಗರದಾದ್ಯಂತ ಸಂಚರಿಸಲಿರುವರು.ಪ್ಲಾಸ್ಟಿಕ್ ತ್ಯಾಜ್ಯ ಕಂಡಲ್ಲಿ ಹಿಂಬದಿ ಸವಾರರು ಅದನ್ನು ಹೆಕ್ಕಿ ತಮ್ಮೊಂದಿಗೆ ತಂದ ಕೈಚೀಲದಲ್ಲಿ ಹಾಕುವರು.

ಚೆನ್ನಕೇಶವ ದೇವಸ್ಥಾನದಿಂದ ಪ್ರಾರಂಭಗೊಂಡು, ಸುಳ್ಯ ನಗರದಾದ್ಯಂತ ಸಂಚರಿಸಿ , ಪೈಚಾರ್ ತನಕ ಕಸ ಸಂಗ್ರಹಿಸಿ ಪುನಃ ಚೆನ್ನಕೇಶವ ದೇವಸ್ಥಾನದ ಬಳಿ ಕಾರ್ಯಕ್ರಮ ಸಂಪನ್ನಗೊಳಲ್ಲಿದೆ.

ಇದರಲ್ಲಿ ಭಾಗವಹಿಸಲು ಸರ್ವರಿಗೂ ಮುಕ್ತ ಅವಕಾಶ ಎಂದು ಸಂಘಟಕರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…

4 hours ago

ಹಲಸು ಅಭಿವೃದ್ಧಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಲು ಮಾಜಿ ಪ್ರಧಾನಿ ದೇವೇ ಗೌಡ ಒತ್ತಾಯ

ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…

4 hours ago

ಕಾಪುವಿನಲ್ಲಿ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಯಶಸ್ವಿ – ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಯೋಜನೆ

ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…

10 hours ago

ಭಾರತದ 365 ಆಹಾರ ಉತ್ಪನ್ನಗಳಲ್ಲಿ ಕೀಟನಾಶಕ, ಭಾರೀ ಲೋಹಗಳ ಅವಶೇಷ ಪತ್ತೆ..!

ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…

11 hours ago

ನೇಪಾಳದಿಂದ ಭಾರತೀಯ ಮಾವಿನ ಹಣ್ಣಿಗೆ ನಿರ್ಬಂಧ – ಕೀಟನಾಶಕ ಅಂಶಗಳು ಪತ್ತೆ ಹಿನ್ನೆಲೆ ಕ್ರಮ

ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…

11 hours ago