Advertisement
ಸುದ್ದಿಗಳು

ಆ.18: ದಕ್ಷಿಣ ಕನ್ನಡ ಜಿಲ್ಲಾ ಎಸ್ಎಸ್ಎಫ್ ವತಿಯಿಂದ 100ನೇ ರಕ್ತದಾನ ಶಿಬಿರ

Share

ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಎಸ್ಎಸ್ಎಫ್ ನ ಬ್ಲಡ್ ಸೈಬೋ ಅಧೀನದಲ್ಲಿ 100ನೇ ರಕ್ತದಾನ ಶಿಬಿರವು ಆ.18 ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಬ್ಲಡ್ ಸೈಬೋ ಸುಳ್ಯ ಡಿವಿಜನ್ ಉಸ್ತುವಾರಿ ಅಬೂಬಕ್ಕರ್ ಸಿದ್ದಿಕ್ ಗೂನಡ್ಕ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಎಸ್ಎಸ್ಎಫ್ ರಕ್ತದಾನಿಗಳ ತಂಡವನ್ನು ಕಟ್ಟಿ ಬೆಳೆಸಿದ್ದು ಎರಡು ದಶಕಗಳಲ್ಲಿ ಸಾವಿರಾರು ಮಂದಿಗೆ ರಕ್ತದಾನದ ಮೂಲಕ ಜೀವದಾನ ನೀಡಿದೆ. ಇದಕ್ಕಾಗಿ ಪ್ರತ್ಯೇಕ ಬ್ಲಡ್ ಸೈಬೋ ಎಂಬ ಪ್ರತ್ಯೇಕ ತಂಡ ಅಸ್ತಿತ್ವದಲ್ಲಿದೆ. ಬ್ಲಡ್ ಸೈಬೋ ಮೂಲಕ ಎರಡು ವರುಷದಲ್ಲಿ 99 ರಕ್ತದಾ‌ನ ಶಿಬಿರವನ್ನು ಹಮ್ಮಿಕೊಂಡಿದ್ದು ದಕ, ಉಡುಪಿ, ಕಾಸರಗೋಡು ಜಿಲ್ಲೆಯ ನಾನಾ ಆಸ್ಪತ್ರೆಗಳ ರೋಗಿಗಳಿಗೆ 7260 ಯೂನಿಟ್ ರಕ್ತ ದಾನ ಮಾಡಿದೆ‌. ಜಾತಿ, ಧರ್ಮ,ಭೇದವಿಲ್ಲದೆ ಎಲ್ಲರಿಗೂ ಅಗತ್ಯ ಸಮಯದಲ್ಲಿ ರಕ್ತವನ್ನು ಪೂರೈಸುವ ಕೆಲಸ ಮಾಡುತ್ತಿದೆ‌. ಅಲ್ಲದೆ ಪ್ರವಾಹ ಮತ್ತು ನೆರೆ ಪೀಡಿತ ಪ್ರದೇಶದಲ್ಲಿ ಧನ ಸಹಾಯ, ವಸ್ತ್ರವಿತರಣೆ, ಮನೆಗಳ ಶುಚಿತ್ವ ಮತ್ತು ರಕ್ಷಣಾ ಕಾರ್ಯದಲ್ಲಿ ಕೈ ಜೋಡಿಸುತ್ತಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಎಸ್ ವೈ ಎಸ್ ಸೆಂಟರ್ ಅಧ್ಯಕ್ಷ ಎ.ಬಿ.ಅಶ್ರಫ್ ಸಹದಿ, ಪ್ರಧಾನ ಕಾರ್ಯದರ್ಶಿ ಅಂದುಂಞಿ ಗೋರಡ್ಕ,ಎಸ್ಎಸ್ಎಫ್ ಸುಳ್ಯ ಸೆಕ್ಟರ್ ಅಧ್ಯಕ್ಷ ಸ್ವಬಾಹ್ ಹಿಮಮಿ,ಎಸ್ಎಸ್ಎಫ್ ಜಿಲ್ಲಾ ಸದಸ್ಯ ಎ.ಎಂ. ಫೈಝಲ್ ಝುಹ್ರಿ ಕಲ್ಲುಗುಂಡಿ,ಕೆಸಿಎಫ್ ಅಬುದಾಬಿ ವಲಯ ಅಧ್ಯಕ್ಷ ಎಬಿ ಹಸೈನಾರ್ ಅಮಾನಿ, ಡಿವಿಷನ್ ಸದಸ್ಯ ನೌಶಾದ್ ಕೆರೆಮೂಲೆ,ಎಸ್ ವೈ ಎಸ್ ಹಿಸಾಬ ನಾಯಕ ಸಿದ್ದಿಕ್ ಕಟ್ಟೆಕ್ಕಾರ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

15 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

16 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

18 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

22 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

22 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago