Advertisement
ಸುದ್ದಿಗಳು

ಆ.18: ದಕ್ಷಿಣ ಕನ್ನಡ ಜಿಲ್ಲಾ ಎಸ್ಎಸ್ಎಫ್ ವತಿಯಿಂದ 100ನೇ ರಕ್ತದಾನ ಶಿಬಿರ

Share

ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಎಸ್ಎಸ್ಎಫ್ ನ ಬ್ಲಡ್ ಸೈಬೋ ಅಧೀನದಲ್ಲಿ 100ನೇ ರಕ್ತದಾನ ಶಿಬಿರವು ಆ.18 ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಬ್ಲಡ್ ಸೈಬೋ ಸುಳ್ಯ ಡಿವಿಜನ್ ಉಸ್ತುವಾರಿ ಅಬೂಬಕ್ಕರ್ ಸಿದ್ದಿಕ್ ಗೂನಡ್ಕ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Advertisement
Advertisement

ಎಸ್ಎಸ್ಎಫ್ ರಕ್ತದಾನಿಗಳ ತಂಡವನ್ನು ಕಟ್ಟಿ ಬೆಳೆಸಿದ್ದು ಎರಡು ದಶಕಗಳಲ್ಲಿ ಸಾವಿರಾರು ಮಂದಿಗೆ ರಕ್ತದಾನದ ಮೂಲಕ ಜೀವದಾನ ನೀಡಿದೆ. ಇದಕ್ಕಾಗಿ ಪ್ರತ್ಯೇಕ ಬ್ಲಡ್ ಸೈಬೋ ಎಂಬ ಪ್ರತ್ಯೇಕ ತಂಡ ಅಸ್ತಿತ್ವದಲ್ಲಿದೆ. ಬ್ಲಡ್ ಸೈಬೋ ಮೂಲಕ ಎರಡು ವರುಷದಲ್ಲಿ 99 ರಕ್ತದಾ‌ನ ಶಿಬಿರವನ್ನು ಹಮ್ಮಿಕೊಂಡಿದ್ದು ದಕ, ಉಡುಪಿ, ಕಾಸರಗೋಡು ಜಿಲ್ಲೆಯ ನಾನಾ ಆಸ್ಪತ್ರೆಗಳ ರೋಗಿಗಳಿಗೆ 7260 ಯೂನಿಟ್ ರಕ್ತ ದಾನ ಮಾಡಿದೆ‌. ಜಾತಿ, ಧರ್ಮ,ಭೇದವಿಲ್ಲದೆ ಎಲ್ಲರಿಗೂ ಅಗತ್ಯ ಸಮಯದಲ್ಲಿ ರಕ್ತವನ್ನು ಪೂರೈಸುವ ಕೆಲಸ ಮಾಡುತ್ತಿದೆ‌. ಅಲ್ಲದೆ ಪ್ರವಾಹ ಮತ್ತು ನೆರೆ ಪೀಡಿತ ಪ್ರದೇಶದಲ್ಲಿ ಧನ ಸಹಾಯ, ವಸ್ತ್ರವಿತರಣೆ, ಮನೆಗಳ ಶುಚಿತ್ವ ಮತ್ತು ರಕ್ಷಣಾ ಕಾರ್ಯದಲ್ಲಿ ಕೈ ಜೋಡಿಸುತ್ತಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಎಸ್ ವೈ ಎಸ್ ಸೆಂಟರ್ ಅಧ್ಯಕ್ಷ ಎ.ಬಿ.ಅಶ್ರಫ್ ಸಹದಿ, ಪ್ರಧಾನ ಕಾರ್ಯದರ್ಶಿ ಅಂದುಂಞಿ ಗೋರಡ್ಕ,ಎಸ್ಎಸ್ಎಫ್ ಸುಳ್ಯ ಸೆಕ್ಟರ್ ಅಧ್ಯಕ್ಷ ಸ್ವಬಾಹ್ ಹಿಮಮಿ,ಎಸ್ಎಸ್ಎಫ್ ಜಿಲ್ಲಾ ಸದಸ್ಯ ಎ.ಎಂ. ಫೈಝಲ್ ಝುಹ್ರಿ ಕಲ್ಲುಗುಂಡಿ,ಕೆಸಿಎಫ್ ಅಬುದಾಬಿ ವಲಯ ಅಧ್ಯಕ್ಷ ಎಬಿ ಹಸೈನಾರ್ ಅಮಾನಿ, ಡಿವಿಷನ್ ಸದಸ್ಯ ನೌಶಾದ್ ಕೆರೆಮೂಲೆ,ಎಸ್ ವೈ ಎಸ್ ಹಿಸಾಬ ನಾಯಕ ಸಿದ್ದಿಕ್ ಕಟ್ಟೆಕ್ಕಾರ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

22 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

22 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

2 days ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

3 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

3 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

3 days ago