ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಎಸ್ಎಸ್ಎಫ್ ನ ಬ್ಲಡ್ ಸೈಬೋ ಅಧೀನದಲ್ಲಿ 100ನೇ ರಕ್ತದಾನ ಶಿಬಿರವು ಆ.18 ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಬ್ಲಡ್ ಸೈಬೋ ಸುಳ್ಯ ಡಿವಿಜನ್ ಉಸ್ತುವಾರಿ ಅಬೂಬಕ್ಕರ್ ಸಿದ್ದಿಕ್ ಗೂನಡ್ಕ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಎಸ್ಎಸ್ಎಫ್ ರಕ್ತದಾನಿಗಳ ತಂಡವನ್ನು ಕಟ್ಟಿ ಬೆಳೆಸಿದ್ದು ಎರಡು ದಶಕಗಳಲ್ಲಿ ಸಾವಿರಾರು ಮಂದಿಗೆ ರಕ್ತದಾನದ ಮೂಲಕ ಜೀವದಾನ ನೀಡಿದೆ. ಇದಕ್ಕಾಗಿ ಪ್ರತ್ಯೇಕ ಬ್ಲಡ್ ಸೈಬೋ ಎಂಬ ಪ್ರತ್ಯೇಕ ತಂಡ ಅಸ್ತಿತ್ವದಲ್ಲಿದೆ. ಬ್ಲಡ್ ಸೈಬೋ ಮೂಲಕ ಎರಡು ವರುಷದಲ್ಲಿ 99 ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದು ದಕ, ಉಡುಪಿ, ಕಾಸರಗೋಡು ಜಿಲ್ಲೆಯ ನಾನಾ ಆಸ್ಪತ್ರೆಗಳ ರೋಗಿಗಳಿಗೆ 7260 ಯೂನಿಟ್ ರಕ್ತ ದಾನ ಮಾಡಿದೆ. ಜಾತಿ, ಧರ್ಮ,ಭೇದವಿಲ್ಲದೆ ಎಲ್ಲರಿಗೂ ಅಗತ್ಯ ಸಮಯದಲ್ಲಿ ರಕ್ತವನ್ನು ಪೂರೈಸುವ ಕೆಲಸ ಮಾಡುತ್ತಿದೆ. ಅಲ್ಲದೆ ಪ್ರವಾಹ ಮತ್ತು ನೆರೆ ಪೀಡಿತ ಪ್ರದೇಶದಲ್ಲಿ ಧನ ಸಹಾಯ, ವಸ್ತ್ರವಿತರಣೆ, ಮನೆಗಳ ಶುಚಿತ್ವ ಮತ್ತು ರಕ್ಷಣಾ ಕಾರ್ಯದಲ್ಲಿ ಕೈ ಜೋಡಿಸುತ್ತಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಎಸ್ ವೈ ಎಸ್ ಸೆಂಟರ್ ಅಧ್ಯಕ್ಷ ಎ.ಬಿ.ಅಶ್ರಫ್ ಸಹದಿ, ಪ್ರಧಾನ ಕಾರ್ಯದರ್ಶಿ ಅಂದುಂಞಿ ಗೋರಡ್ಕ,ಎಸ್ಎಸ್ಎಫ್ ಸುಳ್ಯ ಸೆಕ್ಟರ್ ಅಧ್ಯಕ್ಷ ಸ್ವಬಾಹ್ ಹಿಮಮಿ,ಎಸ್ಎಸ್ಎಫ್ ಜಿಲ್ಲಾ ಸದಸ್ಯ ಎ.ಎಂ. ಫೈಝಲ್ ಝುಹ್ರಿ ಕಲ್ಲುಗುಂಡಿ,ಕೆಸಿಎಫ್ ಅಬುದಾಬಿ ವಲಯ ಅಧ್ಯಕ್ಷ ಎಬಿ ಹಸೈನಾರ್ ಅಮಾನಿ, ಡಿವಿಷನ್ ಸದಸ್ಯ ನೌಶಾದ್ ಕೆರೆಮೂಲೆ,ಎಸ್ ವೈ ಎಸ್ ಹಿಸಾಬ ನಾಯಕ ಸಿದ್ದಿಕ್ ಕಟ್ಟೆಕ್ಕಾರ್ ಉಪಸ್ಥಿತರಿದ್ದರು.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…