Advertisement
ಸುದ್ದಿಗಳು

ಆ.18: ದಕ್ಷಿಣ ಕನ್ನಡ ಜಿಲ್ಲಾ ಎಸ್ಎಸ್ಎಫ್ ವತಿಯಿಂದ 100ನೇ ರಕ್ತದಾನ ಶಿಬಿರ

Share

ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಎಸ್ಎಸ್ಎಫ್ ನ ಬ್ಲಡ್ ಸೈಬೋ ಅಧೀನದಲ್ಲಿ 100ನೇ ರಕ್ತದಾನ ಶಿಬಿರವು ಆ.18 ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಬ್ಲಡ್ ಸೈಬೋ ಸುಳ್ಯ ಡಿವಿಜನ್ ಉಸ್ತುವಾರಿ ಅಬೂಬಕ್ಕರ್ ಸಿದ್ದಿಕ್ ಗೂನಡ್ಕ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಎಸ್ಎಸ್ಎಫ್ ರಕ್ತದಾನಿಗಳ ತಂಡವನ್ನು ಕಟ್ಟಿ ಬೆಳೆಸಿದ್ದು ಎರಡು ದಶಕಗಳಲ್ಲಿ ಸಾವಿರಾರು ಮಂದಿಗೆ ರಕ್ತದಾನದ ಮೂಲಕ ಜೀವದಾನ ನೀಡಿದೆ. ಇದಕ್ಕಾಗಿ ಪ್ರತ್ಯೇಕ ಬ್ಲಡ್ ಸೈಬೋ ಎಂಬ ಪ್ರತ್ಯೇಕ ತಂಡ ಅಸ್ತಿತ್ವದಲ್ಲಿದೆ. ಬ್ಲಡ್ ಸೈಬೋ ಮೂಲಕ ಎರಡು ವರುಷದಲ್ಲಿ 99 ರಕ್ತದಾ‌ನ ಶಿಬಿರವನ್ನು ಹಮ್ಮಿಕೊಂಡಿದ್ದು ದಕ, ಉಡುಪಿ, ಕಾಸರಗೋಡು ಜಿಲ್ಲೆಯ ನಾನಾ ಆಸ್ಪತ್ರೆಗಳ ರೋಗಿಗಳಿಗೆ 7260 ಯೂನಿಟ್ ರಕ್ತ ದಾನ ಮಾಡಿದೆ‌. ಜಾತಿ, ಧರ್ಮ,ಭೇದವಿಲ್ಲದೆ ಎಲ್ಲರಿಗೂ ಅಗತ್ಯ ಸಮಯದಲ್ಲಿ ರಕ್ತವನ್ನು ಪೂರೈಸುವ ಕೆಲಸ ಮಾಡುತ್ತಿದೆ‌. ಅಲ್ಲದೆ ಪ್ರವಾಹ ಮತ್ತು ನೆರೆ ಪೀಡಿತ ಪ್ರದೇಶದಲ್ಲಿ ಧನ ಸಹಾಯ, ವಸ್ತ್ರವಿತರಣೆ, ಮನೆಗಳ ಶುಚಿತ್ವ ಮತ್ತು ರಕ್ಷಣಾ ಕಾರ್ಯದಲ್ಲಿ ಕೈ ಜೋಡಿಸುತ್ತಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಎಸ್ ವೈ ಎಸ್ ಸೆಂಟರ್ ಅಧ್ಯಕ್ಷ ಎ.ಬಿ.ಅಶ್ರಫ್ ಸಹದಿ, ಪ್ರಧಾನ ಕಾರ್ಯದರ್ಶಿ ಅಂದುಂಞಿ ಗೋರಡ್ಕ,ಎಸ್ಎಸ್ಎಫ್ ಸುಳ್ಯ ಸೆಕ್ಟರ್ ಅಧ್ಯಕ್ಷ ಸ್ವಬಾಹ್ ಹಿಮಮಿ,ಎಸ್ಎಸ್ಎಫ್ ಜಿಲ್ಲಾ ಸದಸ್ಯ ಎ.ಎಂ. ಫೈಝಲ್ ಝುಹ್ರಿ ಕಲ್ಲುಗುಂಡಿ,ಕೆಸಿಎಫ್ ಅಬುದಾಬಿ ವಲಯ ಅಧ್ಯಕ್ಷ ಎಬಿ ಹಸೈನಾರ್ ಅಮಾನಿ, ಡಿವಿಷನ್ ಸದಸ್ಯ ನೌಶಾದ್ ಕೆರೆಮೂಲೆ,ಎಸ್ ವೈ ಎಸ್ ಹಿಸಾಬ ನಾಯಕ ಸಿದ್ದಿಕ್ ಕಟ್ಟೆಕ್ಕಾರ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

4 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

11 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

1 day ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

1 day ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

1 day ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

1 day ago