ಬೆಳ್ಳಾರೆ: ಮುಕ್ಕೂರು-ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ನಡೆಯಲಿರುವ ದಶಮಾನೋತ್ಸವ ಸಂಭ್ರಮದ ಹತ್ತರ ಹುತ್ತರಿ ಕಾರ್ಯಕ್ರಮದ ಪ್ರಯುಕ್ತ ಕ್ರೀಡಾಕೂಟವು ಆ.18 ರಂದು ಮುಕ್ಕೂರು ಶಾಲಾ ವಠಾರದಲ್ಲಿ ನಡೆಯಲಿದೆ.
ಕೃಷ್ಣಪ್ಪ ನಾಯ್ಕ ಅಡ್ಯತಕಂಡ ಉದ್ಘಾಟಿಸಲಿದ್ದಾರೆ. ದಶಮಾನೋತ್ಸವ ಸಮಿತಿ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಶಮಾನೋತ್ಸವ ಸಮಿತಿ ಗೌರವಾಧ್ಯಕ್ಷ ತಿರುಮಲೇಶ್ವರ ಭಟ್, ಕಾರ್ಯಾಧ್ಯಕ್ಷ ಉಮೇಶ್ ಕೆಎಂಬಿ, ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷ ಸುಧಾಕರ ರೈ ಕುಂಜಾಡಿ, ಮುಕ್ಕೂರು ಹಾಲು ಉತ್ಪಾದಕರ ಸಂಘದ ನಿರ್ದೇಶಕ ಗುಡ್ಡಪ್ಪ ಗೌಡ ಅಡ್ಯತಕಂಡ, ಮುಕ್ಕೂರು ಶಾಲಾ ಎಸ್ಡಿಎಂಸಿ ಅಧ್ಯಕ್ಷ ಕುಂಞಣ್ಣ ನಾಯ್ಕ ಅಡ್ಯಕಂಡ, ಶಿಕ್ಷಕಿ ಅಮೃತ್ತಾ, ಮುಕ್ಕೂರು ಶಾರದೋತ್ಸವ ಸಮಿತಿ ಅಧ್ಯಕ್ಷ ಸಂಜೀವ ಗೌಡ ಬೈಲಂಗಡಿ, ಮುಕ್ಕೂರು ಜ್ಯೋತಿ ಯುವಕ ಮಂಡಲ ಅಧ್ಯಕ್ಷ ನಾರಾಯಣ ಕೊಂಡೆಪ್ಪಾಡಿ ಭಾಗವಹಿಸಲಿದ್ದಾರೆ.
ಮಹಿಳಾ ವಿಭಾಗದಲ್ಲಿ ಹಗ್ಗಜಗ್ಗಾಟ, ತ್ರೋಬಾಲ್, ಸಂಗೀತ ಕುರ್ಚಿ, ಮಡಿಕೆ ಒಡೆಯುವುದು ಹಾಗೂ ಪುರುಷರ ವಿಭಾಗದಲ್ಲಿ ಹಗ್ಗಜಗ್ಗಾಟ, ವಾಲಿಬಾಲ್, ಕಬಡ್ಡಿ, ನಿಧಾನಗತಿ ಬೈಕ್ ರೇಸ್ ಹಾಗೂ ವಿದ್ಯಾರ್ಥಿಗಳ ವಿಭಾಗದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿದೆ. ಎಲ್ಲ ಗುಂಪಾಟಗಳ ತಂಡವನ್ನು ಸ್ಥಳದಲ್ಲಿಯೇ ಆಯ್ಕೆ ಮಾಡಲಾಗುವುದು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…