ಆ.25 : ಸುಳ್ಯದ ರಂಗಮನೆಯಲ್ಲಿ ಯಕ್ಷ ಸಂಭ್ರಮ

August 13, 2019
11:16 AM

ಸುಳ್ಯ: ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ(ರಿ.)ಸುಳ್ಯ ಇದರ ಆಶ್ರಯದಲ್ಲಿ ಆಗಸ್ಟ್ 25 ರಂದು ಸಂಜೆ 5.15 ರಿಂದ ಯಕ್ಷ ಸಂಭ್ರಮ ಹಾಗೂ ವನಜ ರಂಗಮನೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ರಂಗಮನೆ ಅಧ್ಯಕ್ಷ ಜೀವನ್ ರಾಂ ಸುಳ್ಯ ತಿಳಿಸಿದ್ದಾರೆ.

Advertisement
Advertisement
Advertisement

ಸಮಾರಂಭವನ್ನು ಸುಳ್ಯ ವಿಧಾನ ಸಭಾ ಶಾಸಕ ಎಸ್.ಅಂಗಾರ ಇವರ ಅಧ್ಯಕ್ಷತೆಯಲ್ಲಿ, ಹಿರಿಯ ಕಲಾ ಪೋಷಕರು, ಮೂಡುಬಿದಿರೆಯ ಧನಲಕ್ಷ್ಮೀ ಕ್ಯಾಶ್ಯೂ ಎಕ್ಸ್ ಪೋರ್ಟ್ ಇದರ ಅಧ್ಯಕ್ಷ ಕೆ. ಶ್ರೀಪತಿ ಭಟ್ ಉದ್ಘಾಟಿಸಲಿದ್ದಾರೆ. 2019 ನೇ ಸಾಲಿನ ವನಜ ರಂಗಮನೆ ಪ್ರಶಸ್ತಿಯನ್ನು ಹಿರಿಯ ಯಕ್ಷಗಾನ ಭಾಗವತೆ  ಲೀಲಾವತಿ ಬೈಪಾಡಿತ್ತಾಯರಿಗೆ ನೀಡಿ ಗೌರವಿಸಲಾಗುವುದು.
ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ಶುಭಾಶಂಸನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಇದರ ಸಹಾಯಕ ನಿರ್ದೇಶಕ ರಾಜೇಶ್ ಬಿ.ಭಾಗವಹಿಸಲಿದ್ದಾರೆ. ಹಿರಿಯ ಯಕ್ಷ ಕಲಾವಿದ ರಂಗಮನೆಯ ಸುಜನಾ ಸುಳ್ಯ ಉಪಸ್ಥಿತರಿರುತ್ತಾರೆ.

Advertisement

ಆರಂಭದಲ್ಲಿ  ಲೀಲಾವತಿ ಬೈಪಾಡಿತ್ತಾಯ ಇವರಿಂದ ಪರಂಪರೆಯ ಯಕ್ಷ ಗಾಯನ ನಡೆಯಲಿದೆ.ಇದಕ್ಕೆ ಅವರ ಪತಿ ಹರಿನಾರಾಯಣ ಬೈಪಾಡಿತ್ತಾಯರು ಮದ್ದಲೆಯಲ್ಲಿ ಸಹಕರಿಸಲಿದ್ದಾರೆ.
ಬಳಿಕ ಸನಾತನ ಯಕ್ಷಾಲಯ ಮಂಗಳೂರು ಇದರ ಮಹಿಳಾ ಕಲಾವಿದೆಯರಿಂದ,ಬೊಟ್ಟಿಕೆರೆ ಪುರುಷೋತ್ತಮ ಪೂಂಜ ವಿರಚಿತ, ರಾಕೇಶ್ ರೈ ಅಡ್ಕ ನಿರ್ದೇಶನದಲ್ಲಿ ಮಾ ನಿಷಾದ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಹಿಮ್ಮೇಳದಲ್ಲಿ ಭಾಗವತರಾಗಿ ಗಿರೀಶ್ ರೈ ಕಕ್ಕೆಪದವು,ಮದ್ದಳೆಯಲ್ಲಿ ಮುರಾರಿ ಕಡಂಬಳಿತ್ತಾಯ,ಚೆಂಡೆಯಲ್ಲಿ ನೆಕ್ಕರೆಮೂಲೆ ಗಣೇಶ್ ಭಟ್ ಭಾಗವಹಿಸಲಿದ್ದಾರೆ.
ಮುಮ್ಮೇಳದಲ್ಲಿ ಪ್ರತಿಭಾನ್ವಿತ ಮಹಿಳಾ ಯಕ್ಷ ಕಲಾವಿದೆಯರಾದ ವಸುಂಧರ ಹರೀಶ್,ಮಾಲಿನಿ ಅಂಚನ್,ಸತ್ಯ ಜೀವನ್, ವೃಂದಾ ಕೊನ್ನಾರ್,ಮಾಲತಿ ವಿ.ರಾವ್,ಬಿಂದಿಯಾ ಮುಂತಾದವರು ಭಾಗವಹಿಸಲಿದ್ದಾರೆ.

ಸಮಯಕ್ಕೆ ಸರಿಯಾಗಿ ಆರಂಭವಾಗುವ ಈ ಯಕ್ಷ ಸಂಭ್ರಮಕ್ಕೆ ಪ್ರವೇಶ ಉಚಿತವಾಗಿದ್ದು,ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ರಂಗಮನೆ ಅಧ್ಯಕ್ಷ ಜೀವನ್ ರಾಂ ಸುಳ್ಯ ತಿಳಿಸಿದ್ದಾರೆ.

Advertisement

 

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಕಿಮೀಡಿಯ ಸಮಿತ್‌ 2024 | ಭರತೇಶ ಅಲಸಂಡೆಮಜಲು ಆಯ್ಕೆ
April 8, 2024
11:45 PM
by: ದ ರೂರಲ್ ಮಿರರ್.ಕಾಂ
ಸುಳ್ಯದ ಸಾಯಿಶೃತಿ ಅವರಿಗೆ ‘MISS WORLD INTERNATIONAL INDIA’ ಸೆಕೆಂಡ್ ರನ್ನರ್ ಅಪ್ಅವಾರ್ಡ್
February 28, 2024
11:13 PM
by: ದ ರೂರಲ್ ಮಿರರ್.ಕಾಂ
ಶ್ರೀ ಸಂಗೀತ ಪಾಠಶಾಲೆ | ವಾರ್ಷಿಕೋತ್ಸವ `ಸ್ವರಶ್ರೀ 2024′ |
February 21, 2024
8:09 PM
by: ದ ರೂರಲ್ ಮಿರರ್.ಕಾಂ
ಫೆ.25 ರಂದು ನಡೆಯಲಿರುವ ನಮ್ಮ ಕರಾವಳಿ ಉತ್ಸವದಲ್ಲಿ ಒಂದು ಲಕ್ಷ ಜನ ಭಾಗಿಯಾಗೋ ನಿರೀಕ್ಷೆ
February 19, 2024
1:02 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror