Advertisement

ಆ.25 : ಸುಳ್ಯದ ರಂಗಮನೆಯಲ್ಲಿ ಯಕ್ಷ ಸಂಭ್ರಮ

Share

ಸುಳ್ಯ: ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ(ರಿ.)ಸುಳ್ಯ ಇದರ ಆಶ್ರಯದಲ್ಲಿ ಆಗಸ್ಟ್ 25 ರಂದು ಸಂಜೆ 5.15 ರಿಂದ ಯಕ್ಷ ಸಂಭ್ರಮ ಹಾಗೂ ವನಜ ರಂಗಮನೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ರಂಗಮನೆ ಅಧ್ಯಕ್ಷ ಜೀವನ್ ರಾಂ ಸುಳ್ಯ ತಿಳಿಸಿದ್ದಾರೆ.

ಸಮಾರಂಭವನ್ನು ಸುಳ್ಯ ವಿಧಾನ ಸಭಾ ಶಾಸಕ ಎಸ್.ಅಂಗಾರ ಇವರ ಅಧ್ಯಕ್ಷತೆಯಲ್ಲಿ, ಹಿರಿಯ ಕಲಾ ಪೋಷಕರು, ಮೂಡುಬಿದಿರೆಯ ಧನಲಕ್ಷ್ಮೀ ಕ್ಯಾಶ್ಯೂ ಎಕ್ಸ್ ಪೋರ್ಟ್ ಇದರ ಅಧ್ಯಕ್ಷ ಕೆ. ಶ್ರೀಪತಿ ಭಟ್ ಉದ್ಘಾಟಿಸಲಿದ್ದಾರೆ. 2019 ನೇ ಸಾಲಿನ ವನಜ ರಂಗಮನೆ ಪ್ರಶಸ್ತಿಯನ್ನು ಹಿರಿಯ ಯಕ್ಷಗಾನ ಭಾಗವತೆ  ಲೀಲಾವತಿ ಬೈಪಾಡಿತ್ತಾಯರಿಗೆ ನೀಡಿ ಗೌರವಿಸಲಾಗುವುದು.
ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ಶುಭಾಶಂಸನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಇದರ ಸಹಾಯಕ ನಿರ್ದೇಶಕ ರಾಜೇಶ್ ಬಿ.ಭಾಗವಹಿಸಲಿದ್ದಾರೆ. ಹಿರಿಯ ಯಕ್ಷ ಕಲಾವಿದ ರಂಗಮನೆಯ ಸುಜನಾ ಸುಳ್ಯ ಉಪಸ್ಥಿತರಿರುತ್ತಾರೆ.

ಆರಂಭದಲ್ಲಿ  ಲೀಲಾವತಿ ಬೈಪಾಡಿತ್ತಾಯ ಇವರಿಂದ ಪರಂಪರೆಯ ಯಕ್ಷ ಗಾಯನ ನಡೆಯಲಿದೆ.ಇದಕ್ಕೆ ಅವರ ಪತಿ ಹರಿನಾರಾಯಣ ಬೈಪಾಡಿತ್ತಾಯರು ಮದ್ದಲೆಯಲ್ಲಿ ಸಹಕರಿಸಲಿದ್ದಾರೆ.
ಬಳಿಕ ಸನಾತನ ಯಕ್ಷಾಲಯ ಮಂಗಳೂರು ಇದರ ಮಹಿಳಾ ಕಲಾವಿದೆಯರಿಂದ,ಬೊಟ್ಟಿಕೆರೆ ಪುರುಷೋತ್ತಮ ಪೂಂಜ ವಿರಚಿತ, ರಾಕೇಶ್ ರೈ ಅಡ್ಕ ನಿರ್ದೇಶನದಲ್ಲಿ ಮಾ ನಿಷಾದ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಹಿಮ್ಮೇಳದಲ್ಲಿ ಭಾಗವತರಾಗಿ ಗಿರೀಶ್ ರೈ ಕಕ್ಕೆಪದವು,ಮದ್ದಳೆಯಲ್ಲಿ ಮುರಾರಿ ಕಡಂಬಳಿತ್ತಾಯ,ಚೆಂಡೆಯಲ್ಲಿ ನೆಕ್ಕರೆಮೂಲೆ ಗಣೇಶ್ ಭಟ್ ಭಾಗವಹಿಸಲಿದ್ದಾರೆ.
ಮುಮ್ಮೇಳದಲ್ಲಿ ಪ್ರತಿಭಾನ್ವಿತ ಮಹಿಳಾ ಯಕ್ಷ ಕಲಾವಿದೆಯರಾದ ವಸುಂಧರ ಹರೀಶ್,ಮಾಲಿನಿ ಅಂಚನ್,ಸತ್ಯ ಜೀವನ್, ವೃಂದಾ ಕೊನ್ನಾರ್,ಮಾಲತಿ ವಿ.ರಾವ್,ಬಿಂದಿಯಾ ಮುಂತಾದವರು ಭಾಗವಹಿಸಲಿದ್ದಾರೆ.

ಸಮಯಕ್ಕೆ ಸರಿಯಾಗಿ ಆರಂಭವಾಗುವ ಈ ಯಕ್ಷ ಸಂಭ್ರಮಕ್ಕೆ ಪ್ರವೇಶ ಉಚಿತವಾಗಿದ್ದು,ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ರಂಗಮನೆ ಅಧ್ಯಕ್ಷ ಜೀವನ್ ರಾಂ ಸುಳ್ಯ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

7 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

7 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

8 hours ago

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

16 hours ago

ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ

ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್‌ ಮತ್ತು ಆಹಾರ ವಿತರಣೆ…

17 hours ago

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

21 hours ago