ಸುಳ್ಯ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂ ರಾವ್ ಆ.31ಕ್ಕೆ ದ.ಕ ಜಿಲ್ಲೆಗೆ ಭೇಟಿ ನೀಡಿ ನೆರೆ ಬಾಧಿತ ಪ್ರದೇಶಕ್ಕೆ ತೆರಳಿ ಸಮೀಕ್ಷೆ ನಡೆಸಲಿದ್ದಾರೆ . ಬಳಿಕ ಅಪರಾಹ್ನ 3:00 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ಬೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ದಲ್ಲಿ ಪಾಲ್ಗೊಳ್ಳಲಿದ್ದಾರೆ .
ಈ ಹಿನ್ನೆಲೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪೂರ್ವಬಾವಿ ಸಭೆ ನಡೆಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್. ಜಯಪ್ರಕಾಶ್ ರೈ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಸುಳ್ಯ ಬ್ಲಾಕ್ ಉಸ್ತುವಾರಿ ಕಾವು ಹೇಮನಾಥ ಶೆಟ್ಟಿ ಮಾತನಾಡಿ ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ನಾಯಕರು , ಕಾರ್ಯಕರ್ತರು ಭಾಗವಹಿಸಿ ರಾಜ್ಯದಲ್ಲಿ , ಜಿಲ್ಲೆಯಲ್ಲಿ ಪಕ್ಷದ ಸಂಘಟನೆಗೆ ಸಹಕಾರ ನೀಡಬೇಕೆಂದು ವಿನಂತಿಸಿದರು. ಕಾರ್ಯಕ್ರಮದ ರೂಪುರೇಷೆ ಬಗ್ಗೆ ಅವರು ವಿವರಿಸಿದರು.
ಈ ಸಂದರ್ಭದಲ್ಲಿ ಮಹಮದ್ ಆಲಿ ಪುತ್ತೂರು , ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ , ಕೃಷ್ಣಪ್ಪ ಗೌಡ ನೆಕ್ರಾಪ್ಪಾಡಿ , ಬೀರಾ ಮೊಯಿದೀನ್ , ಶಾಫಿ ಕುತ್ತಮೊಟ್ಟೆ , ನಂದರಾಜ ಸಂಕೇಶ , ಭವಾನಿಶಂಕರ ಕಲ್ಮಡ್ಕ , ಜೂಲಿಯ ಕ್ರಾಸ್ತಾ , ಮಹಮ್ಮದ್ ಫವಾಜ್ , ರಜಾಕ್ ಪೈಚಾರು , ಗಂಗಾಧರ ಮೇನಾಲ , ಶ್ರೀಲತಾ ಪ್ರಸನ್ನ, ಹನೀಫ್ ಪುಣ್ಚತ್ತಾರು, ಮೊದಲಾದವರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಸ್ವಾಗತಿಸಿ , ಕೆ ಎಂ ಮುಸ್ತಫ ವಂದಿಸಿದರು.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…