( ಕಳೆದ ತಿಂಗಳು ಭಾರೀ ಮಳೆಗೆ ಕುಸಿತದ ದೃಶ್ಯ)
ಮಂಗಳೂರು: ಭಾರೀ ಮಳೆಯ ಕಾರಣದಿಂದ ಆ.8 ರಂದು ಚಾರ್ಮಾಡಿ ಘಾಟಿಯ 14 ಕಡೆ ಕುಸಿತವಾಗಿತ್ತು. ಹೀಗಾಗಿ ಒಂದು ತಿಂಗಳ ಕಾಲ ವಾಹನ ಸಂಚಾರ ಬಂದ್ ಮಾಡಲು ಲೋಕೋಪಯೋಗಿ ಇಲಾಖೆ ಜಿಲ್ಲಾಡಳಿತಕ್ಕೆ ಮನವಿ ಮಾಡಿತ್ತು. ಹೀಗಾಗಿ ಆ.15 ರಿಂದ ಸೆ.14 ರವರೆಗೆ ವಾಹನ ಸಂಚಾರ ನಿಷೇಧವಾಗಿತ್ತು. ಇದೀಗ ಸೆ.15 ರಿಂದ ಲಘು ವಾಹನಗಳ ಓಡಾಟಕ್ಕೆ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಜಿಲ್ಲಾಡಳಿತ ಅನಿಮತಿ ನೀಡಿದೆ.
ರಾತ್ರಿ 6 ಗಂಟೆಯಿಂದ ಎಲ್ಲಾ ರೀತಿಯ ವಾಹನ ಓಡಾಟಕ್ಕೆ ನಿಷೇಧ ಹೇರಲಾಗಿದೆ. ಘಾಟಿ ಪ್ರದೇಶದಲ್ಲಿ 20 ಕಿಮೀ ವೇಗದ ಮಿತಿಯನ್ನು ನಿಗದಿಪಡಿಸಲಾಗಿದೆ. ರಸ್ತೆ ಹಾನಿಯಾಗಿರುವುದಿಂದ ಜಾಗರೂಕತೆಯ ಚಾಲನೆಗೆ ಸೂಚನೆ ನೀಡಲಾಗಿದ್ದು, ಮುಂಜಾಗ್ರತಾ ಕ್ರಮಕ್ಕಾಗಿ ಫೋಟೊ ಹಾಗೂ ಸೆಲ್ಪೀ ತೆಗೆಯುವುದು ನಿಷೇಧವಿದೆ ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಅವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
ಭಾರೀ ಮಳೆಯ ಕಾರಣದಿಂದಾಗಿ ಚಾರ್ಮಾಡಿ ಘಾಟಿ ಭಾರೀ ಕುಸಿತವಾಗಿ ಮುಂದೆ ವಾಹನ ಸಂಚಾರವೇ ಕಷ್ಟ ಎಂದೇ ಹೇಳಲಾಗಿತ್ತು. ಘಾಟಿ ರಸ್ತೆ ಕುಸಿತ ನೋಡಿದ ಎಲ್ಲರೂ ವಾಹನ ಸಂಚಾರ ಬಹಳ ವರ್ಷ ಸಾಧ್ಯವಿಲ್ಲ ಎಂದು ಅನೇಕರು ಹೇಳಿದ್ದರೆ, ಕೆಲವರು ಇನ್ನು ವಾಹನ ಸಂಚಾರ ಶಾಶ್ವತವಾಗಿ ಬಂದ್ ಎಂದು ಹೇಳಿದ್ದರು. ಆದರೆ ನಮ್ಮ ರಸ್ತೆಯನ್ನು ಸುಸ್ಥಿತಿಗೆ ತಂದು ಸದ್ಯ ಲಘುವಾಹನ ಓಡಾಟಕ್ಕೆ ಸಾಧ್ಯವಾಗುವಂತೆ ಮಾಡಿದ್ದಾರೆ. ಸಂಪಾಜೆ ಘಾಟಿಯಲ್ಲೂ ಕಳೆದ ಬಾರಿ ಕುಸಿತವಾದಾಗ ತಕ್ಷಣ ಕ್ರಮ ಕೈಗೊಂಡು ವಾಹನ ಓಡಾಡುವಂತೆ ಮಾಡಿದ್ದಾರೆ. ಇಂಜಿಯರ್ ದಿನದಂದೇ ವಾಹನ ಓಡಾಟಕ್ಕೆ ಅನುವು ಆಗುವಂತೆ ಮಾಡಿರುವುದು ನಮ್ಮ ಇಂಜಿನಿಯರ್ ಗಳ ಹೆಮ್ಮೆ ಹಾಗೂ ಭರವಸೆ ಹುಸಿಯಾಗಲಿಲ್ಲ.
ಆ.14 ರಂದು ಹಿಂದೆ ಸುಳ್ಯ ನ್ಯೂಸ್ ಮಾಡಿರುವ ಪಾಸಿಟಿವ್ ವರದಿ :
ನಮ್ಮ ಇಂಜಿನಿಯರ್ ಗಳು ಚಾರ್ಮಾಡಿ ರಸ್ತೆ ದುರಸ್ತಿ ಮಾಡುತ್ತಾರೆ…..
ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.10 ಕಳೆಯುವ ಹೊತ್ತಿಗೆ ವಾತಾವರಣ…
ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…
ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…