Advertisement
ಸುದ್ದಿಗಳು

ಚಾರ್ಮಾಡಿ ಘಾಟಿಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅನುವು

Share

ಮಂಗಳೂರು: ಭಾರೀ ಮಳೆಯ ಕಾರಣದಿಂದ ಆ.8 ರಂದು ಚಾರ್ಮಾಡಿ ಘಾಟಿಯ 14 ಕಡೆ ಕುಸಿತವಾಗಿತ್ತು. ಹೀಗಾಗಿ ಒಂದು ತಿಂಗಳ ಕಾಲ ವಾಹನ ಸಂಚಾರ ಬಂದ್ ಮಾಡಲು ಲೋಕೋಪಯೋಗಿ ಇಲಾಖೆ ಜಿಲ್ಲಾಡಳಿತಕ್ಕೆ ಮನವಿ ಮಾಡಿತ್ತು. ಹೀಗಾಗಿ ಆ.15 ರಿಂದ ಸೆ.14 ರವರೆಗೆ ವಾಹನ ಸಂಚಾರ ನಿಷೇಧವಾಗಿತ್ತು. ಇದೀಗ ಸೆ.15 ರಿಂದ ಲಘು ವಾಹನಗಳ ಓಡಾಟಕ್ಕೆ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಜಿಲ್ಲಾಡಳಿತ ಅನಿಮತಿ ನೀಡಿದೆ.

ರಾತ್ರಿ 6 ಗಂಟೆಯಿಂದ ಎಲ್ಲಾ ರೀತಿಯ ವಾಹನ ಓಡಾಟಕ್ಕೆ ನಿಷೇಧ ಹೇರಲಾಗಿದೆ. ಘಾಟಿ ಪ್ರದೇಶದಲ್ಲಿ 20 ಕಿಮೀ ವೇಗದ ಮಿತಿಯನ್ನು ನಿಗದಿಪಡಿಸಲಾಗಿದೆ. ರಸ್ತೆ ಹಾನಿಯಾಗಿರುವುದಿಂದ ಜಾಗರೂಕತೆಯ ಚಾಲನೆಗೆ ಸೂಚನೆ ನೀಡಲಾಗಿದ್ದು, ಮುಂಜಾಗ್ರತಾ ಕ್ರಮಕ್ಕಾಗಿ ಫೋಟೊ ಹಾಗೂ ಸೆಲ್ಪೀ ತೆಗೆಯುವುದು  ನಿಷೇಧವಿದೆ ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಅವರು ಅಧಿಸೂಚನೆಯಲ್ಲಿ  ತಿಳಿಸಿದ್ದಾರೆ.

ಭಾರೀ ಮಳೆಯ ಕಾರಣದಿಂದಾಗಿ ಚಾರ್ಮಾಡಿ ಘಾಟಿ ಭಾರೀ ಕುಸಿತವಾಗಿ ಮುಂದೆ ವಾಹನ ಸಂಚಾರವೇ ಕಷ್ಟ ಎಂದೇ ಹೇಳಲಾಗಿತ್ತು. ಘಾಟಿ ರಸ್ತೆ ಕುಸಿತ ನೋಡಿದ ಎಲ್ಲರೂ ವಾಹನ ಸಂಚಾರ ಬಹಳ ವರ್ಷ ಸಾಧ್ಯವಿಲ್ಲ ಎಂದು ಅನೇಕರು ಹೇಳಿದ್ದರೆ, ಕೆಲವರು ಇನ್ನು ವಾಹನ ಸಂಚಾರ ಶಾಶ್ವತವಾಗಿ ಬಂದ್ ಎಂದು ಹೇಳಿದ್ದರು. ಆದರೆ ನಮ್ಮ ರಸ್ತೆಯನ್ನು ಸುಸ್ಥಿತಿಗೆ ತಂದು ಸದ್ಯ ಲಘುವಾಹನ ಓಡಾಟಕ್ಕೆ ಸಾಧ್ಯವಾಗುವಂತೆ ಮಾಡಿದ್ದಾರೆ. ಸಂಪಾಜೆ ಘಾಟಿಯಲ್ಲೂ ಕಳೆದ ಬಾರಿ ಕುಸಿತವಾದಾಗ ತಕ್ಷಣ ಕ್ರಮ ಕೈಗೊಂಡು ವಾಹನ ಓಡಾಡುವಂತೆ ಮಾಡಿದ್ದಾರೆ. ಇಂಜಿಯರ್ ದಿನದಂದೇ ವಾಹನ ಓಡಾಟಕ್ಕೆ ಅನುವು ಆಗುವಂತೆ ಮಾಡಿರುವುದು  ನಮ್ಮ ಇಂಜಿನಿಯರ್ ಗಳ ಹೆಮ್ಮೆ ಹಾಗೂ ಭರವಸೆ ಹುಸಿಯಾಗಲಿಲ್ಲ.

 

ಆ.14 ರಂದು ಹಿಂದೆ ಸುಳ್ಯ ನ್ಯೂಸ್ ಮಾಡಿರುವ ಪಾಸಿಟಿವ್  ವರದಿ :

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

1 day ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

1 day ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

1 day ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago