( ಕಳೆದ ತಿಂಗಳು ಭಾರೀ ಮಳೆಗೆ ಕುಸಿತದ ದೃಶ್ಯ)
ಮಂಗಳೂರು: ಭಾರೀ ಮಳೆಯ ಕಾರಣದಿಂದ ಆ.8 ರಂದು ಚಾರ್ಮಾಡಿ ಘಾಟಿಯ 14 ಕಡೆ ಕುಸಿತವಾಗಿತ್ತು. ಹೀಗಾಗಿ ಒಂದು ತಿಂಗಳ ಕಾಲ ವಾಹನ ಸಂಚಾರ ಬಂದ್ ಮಾಡಲು ಲೋಕೋಪಯೋಗಿ ಇಲಾಖೆ ಜಿಲ್ಲಾಡಳಿತಕ್ಕೆ ಮನವಿ ಮಾಡಿತ್ತು. ಹೀಗಾಗಿ ಆ.15 ರಿಂದ ಸೆ.14 ರವರೆಗೆ ವಾಹನ ಸಂಚಾರ ನಿಷೇಧವಾಗಿತ್ತು. ಇದೀಗ ಸೆ.15 ರಿಂದ ಲಘು ವಾಹನಗಳ ಓಡಾಟಕ್ಕೆ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಜಿಲ್ಲಾಡಳಿತ ಅನಿಮತಿ ನೀಡಿದೆ.
ರಾತ್ರಿ 6 ಗಂಟೆಯಿಂದ ಎಲ್ಲಾ ರೀತಿಯ ವಾಹನ ಓಡಾಟಕ್ಕೆ ನಿಷೇಧ ಹೇರಲಾಗಿದೆ. ಘಾಟಿ ಪ್ರದೇಶದಲ್ಲಿ 20 ಕಿಮೀ ವೇಗದ ಮಿತಿಯನ್ನು ನಿಗದಿಪಡಿಸಲಾಗಿದೆ. ರಸ್ತೆ ಹಾನಿಯಾಗಿರುವುದಿಂದ ಜಾಗರೂಕತೆಯ ಚಾಲನೆಗೆ ಸೂಚನೆ ನೀಡಲಾಗಿದ್ದು, ಮುಂಜಾಗ್ರತಾ ಕ್ರಮಕ್ಕಾಗಿ ಫೋಟೊ ಹಾಗೂ ಸೆಲ್ಪೀ ತೆಗೆಯುವುದು ನಿಷೇಧವಿದೆ ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಅವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
ಭಾರೀ ಮಳೆಯ ಕಾರಣದಿಂದಾಗಿ ಚಾರ್ಮಾಡಿ ಘಾಟಿ ಭಾರೀ ಕುಸಿತವಾಗಿ ಮುಂದೆ ವಾಹನ ಸಂಚಾರವೇ ಕಷ್ಟ ಎಂದೇ ಹೇಳಲಾಗಿತ್ತು. ಘಾಟಿ ರಸ್ತೆ ಕುಸಿತ ನೋಡಿದ ಎಲ್ಲರೂ ವಾಹನ ಸಂಚಾರ ಬಹಳ ವರ್ಷ ಸಾಧ್ಯವಿಲ್ಲ ಎಂದು ಅನೇಕರು ಹೇಳಿದ್ದರೆ, ಕೆಲವರು ಇನ್ನು ವಾಹನ ಸಂಚಾರ ಶಾಶ್ವತವಾಗಿ ಬಂದ್ ಎಂದು ಹೇಳಿದ್ದರು. ಆದರೆ ನಮ್ಮ ರಸ್ತೆಯನ್ನು ಸುಸ್ಥಿತಿಗೆ ತಂದು ಸದ್ಯ ಲಘುವಾಹನ ಓಡಾಟಕ್ಕೆ ಸಾಧ್ಯವಾಗುವಂತೆ ಮಾಡಿದ್ದಾರೆ. ಸಂಪಾಜೆ ಘಾಟಿಯಲ್ಲೂ ಕಳೆದ ಬಾರಿ ಕುಸಿತವಾದಾಗ ತಕ್ಷಣ ಕ್ರಮ ಕೈಗೊಂಡು ವಾಹನ ಓಡಾಡುವಂತೆ ಮಾಡಿದ್ದಾರೆ. ಇಂಜಿಯರ್ ದಿನದಂದೇ ವಾಹನ ಓಡಾಟಕ್ಕೆ ಅನುವು ಆಗುವಂತೆ ಮಾಡಿರುವುದು ನಮ್ಮ ಇಂಜಿನಿಯರ್ ಗಳ ಹೆಮ್ಮೆ ಹಾಗೂ ಭರವಸೆ ಹುಸಿಯಾಗಲಿಲ್ಲ.
ಆ.14 ರಂದು ಹಿಂದೆ ಸುಳ್ಯ ನ್ಯೂಸ್ ಮಾಡಿರುವ ಪಾಸಿಟಿವ್ ವರದಿ :
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…