( ಕಳೆದ ತಿಂಗಳು ಭಾರೀ ಮಳೆಗೆ ಕುಸಿತದ ದೃಶ್ಯ)
ಮಂಗಳೂರು: ಭಾರೀ ಮಳೆಯ ಕಾರಣದಿಂದ ಆ.8 ರಂದು ಚಾರ್ಮಾಡಿ ಘಾಟಿಯ 14 ಕಡೆ ಕುಸಿತವಾಗಿತ್ತು. ಹೀಗಾಗಿ ಒಂದು ತಿಂಗಳ ಕಾಲ ವಾಹನ ಸಂಚಾರ ಬಂದ್ ಮಾಡಲು ಲೋಕೋಪಯೋಗಿ ಇಲಾಖೆ ಜಿಲ್ಲಾಡಳಿತಕ್ಕೆ ಮನವಿ ಮಾಡಿತ್ತು. ಹೀಗಾಗಿ ಆ.15 ರಿಂದ ಸೆ.14 ರವರೆಗೆ ವಾಹನ ಸಂಚಾರ ನಿಷೇಧವಾಗಿತ್ತು. ಇದೀಗ ಸೆ.15 ರಿಂದ ಲಘು ವಾಹನಗಳ ಓಡಾಟಕ್ಕೆ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಜಿಲ್ಲಾಡಳಿತ ಅನಿಮತಿ ನೀಡಿದೆ.
ರಾತ್ರಿ 6 ಗಂಟೆಯಿಂದ ಎಲ್ಲಾ ರೀತಿಯ ವಾಹನ ಓಡಾಟಕ್ಕೆ ನಿಷೇಧ ಹೇರಲಾಗಿದೆ. ಘಾಟಿ ಪ್ರದೇಶದಲ್ಲಿ 20 ಕಿಮೀ ವೇಗದ ಮಿತಿಯನ್ನು ನಿಗದಿಪಡಿಸಲಾಗಿದೆ. ರಸ್ತೆ ಹಾನಿಯಾಗಿರುವುದಿಂದ ಜಾಗರೂಕತೆಯ ಚಾಲನೆಗೆ ಸೂಚನೆ ನೀಡಲಾಗಿದ್ದು, ಮುಂಜಾಗ್ರತಾ ಕ್ರಮಕ್ಕಾಗಿ ಫೋಟೊ ಹಾಗೂ ಸೆಲ್ಪೀ ತೆಗೆಯುವುದು ನಿಷೇಧವಿದೆ ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಅವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
ಭಾರೀ ಮಳೆಯ ಕಾರಣದಿಂದಾಗಿ ಚಾರ್ಮಾಡಿ ಘಾಟಿ ಭಾರೀ ಕುಸಿತವಾಗಿ ಮುಂದೆ ವಾಹನ ಸಂಚಾರವೇ ಕಷ್ಟ ಎಂದೇ ಹೇಳಲಾಗಿತ್ತು. ಘಾಟಿ ರಸ್ತೆ ಕುಸಿತ ನೋಡಿದ ಎಲ್ಲರೂ ವಾಹನ ಸಂಚಾರ ಬಹಳ ವರ್ಷ ಸಾಧ್ಯವಿಲ್ಲ ಎಂದು ಅನೇಕರು ಹೇಳಿದ್ದರೆ, ಕೆಲವರು ಇನ್ನು ವಾಹನ ಸಂಚಾರ ಶಾಶ್ವತವಾಗಿ ಬಂದ್ ಎಂದು ಹೇಳಿದ್ದರು. ಆದರೆ ನಮ್ಮ ರಸ್ತೆಯನ್ನು ಸುಸ್ಥಿತಿಗೆ ತಂದು ಸದ್ಯ ಲಘುವಾಹನ ಓಡಾಟಕ್ಕೆ ಸಾಧ್ಯವಾಗುವಂತೆ ಮಾಡಿದ್ದಾರೆ. ಸಂಪಾಜೆ ಘಾಟಿಯಲ್ಲೂ ಕಳೆದ ಬಾರಿ ಕುಸಿತವಾದಾಗ ತಕ್ಷಣ ಕ್ರಮ ಕೈಗೊಂಡು ವಾಹನ ಓಡಾಡುವಂತೆ ಮಾಡಿದ್ದಾರೆ. ಇಂಜಿಯರ್ ದಿನದಂದೇ ವಾಹನ ಓಡಾಟಕ್ಕೆ ಅನುವು ಆಗುವಂತೆ ಮಾಡಿರುವುದು ನಮ್ಮ ಇಂಜಿನಿಯರ್ ಗಳ ಹೆಮ್ಮೆ ಹಾಗೂ ಭರವಸೆ ಹುಸಿಯಾಗಲಿಲ್ಲ.
ಆ.14 ರಂದು ಹಿಂದೆ ಸುಳ್ಯ ನ್ಯೂಸ್ ಮಾಡಿರುವ ಪಾಸಿಟಿವ್ ವರದಿ :
ನಮ್ಮ ಇಂಜಿನಿಯರ್ ಗಳು ಚಾರ್ಮಾಡಿ ರಸ್ತೆ ದುರಸ್ತಿ ಮಾಡುತ್ತಾರೆ…..
Advertisement
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…