Advertisement
ಮಾಹಿತಿ

ಇಂದಿನಿಂದ ಮತದಾರರ ಪಟ್ಟಿ ಪರಿಶೀಲನಾ ಕಾರ್ಯಕ್ರಮ

Share

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮ(ಇವಿಪಿ) ಸೆಪ್ಟಂಬರ್ 1 ರಿಂದ ಅಕ್ಟೋಬರ್ 15ರವರೆಗೆ ನಡೆಯಲಿದೆ.

Advertisement
Advertisement

ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಮತದಾರರ ಪಟ್ಟಿಯಲ್ಲಿ ದೋಷ, ಹೆಸರಿನಲ್ಲಿ ವ್ಯತ್ಯಾಸ, ಹೆಸರು ನಾಪತ್ತೆ, ಮೃತರ ಹೆಸರು ಮತ್ತಿತರ ದೂರುಗಳು ಬರುತ್ತಿವೆ. ಈ ಹಿನ್ನಲೆಯಲ್ಲಿ ಮತದಾರರ ಪಟ್ಟಿಯ ದೋಷಗಳನ್ನು ಸರಿಪಡಿಸಿ ಮತದಾರರ ಭಾವಚಿತ್ರ ಹಾಗೂ ವಿವರಗಳನ್ನು ಸಮರ್ಪಕವಾಗಿ ನಮೂದಿಸುವ ಕಾರ್ಯವನ್ನು ಅಭಿಯಾನ ರೂಪದಲ್ಲಿ ನಡೆಸಿ ಶುದ್ಧ ಮತದಾರರ ಪಟ್ಟಿಯನ್ನು ತಯಾರಿಸಲು ಈ ಕಾರ್ಯಕ್ರಮವನ್ನು ಚುನಾವಣಾ ಆಯೋಗ ಏರ್ಪಡಿಸಿದೆ. ಮತದಾರರಿಗೆ ಉತ್ತಮ ಸೇವೆ ನೀಡಲು ಈ ಕಾರ್ಯಕ್ರಮ ನಡೆಯಲಿದೆ.

Advertisement

ನಾಗರಿಕರು ಈ ಅವಧಿಯಲ್ಲಿ ಸ್ವಯಂ ಮುಂದೆ ಬಂದು ಮತದಾರರ ಪಟ್ಟಿಯಲ್ಲಿ ತಮ್ಮ ವಿವರಗಳನ್ನು ದೃಢೀಕರಿಸಿಕೊಳ್ಳಬಹುದು ತಮ್ಮ ಹೆಸರು ಮತ್ತು ಭಾವಚಿತ್ರದಲ್ಲಿ ಯಾವುದೇ ತಪ್ಪುಗಳಿದ್ದಲ್ಲಿ, ಕುಟುಂಬ ಸದಸ್ಯರ ವಿವರಗಳನ್ನು ಪರಿಶೀಲಿಸಲು, ಮತಗಟ್ಟೆಗಳ ವಿವರ ಪಡೆಯಲು, ಮತದಾರರ ಪಟ್ಟಿಯನ್ನು ಶುದ್ಧಗೊಳಿಸಲು ಸೂಕ್ತ ದಾಖಲೆಗಳನ್ನು ಒದಗಿಸಿ ಈ ಸೇವೆಯನ್ನು ಪಡೆಯಬಹುದಾಗಿದೆ.

ಮತದಾರರ ಪಟ್ಟಿ ಪರಿಶೀಲಿಸುವ ವಿಧಾನ :

Advertisement

1.ಮತದಾರರು ತಮ್ಮ ಮೊಬೈಲ್‍ನಲ್ಲಿ voter helpline ಎಂಬ ಆ್ಯಪ್‍ನ್ನು ಡೌನ್‍ಲೋಡ್ ಮಾಡಿ ವಿವರಗಳನ್ನು ಅದರಲ್ಲಿ ನಮೂದಿಸಿ ಪರಿಶೀಲಿಸಬಹುದು.

2.ನಾಡಕಚೇರಿ, ಮಂಗಳೂರು ಒನ್, ಸೇವಾ ಸಿಂಧು ಮತ್ತಿರರ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಬಹುದು.

Advertisement

3.ಗ್ರಾಮ ಪಂಚಾಯತ್‍ಗಳಲ್ಲಿರುವ ಬಾಪೂಜಿ ಸೇವಾಕೇಂದ್ರ, ಅಟಲ್‍ಜಿ ಜನಸ್ನೇಹಿ ಕೇಂದ್ರಗಳಿಗೂ ಭೇಟಿ ನೀಡಿ ಪರಿಶೀಲಿಸಬಹುದು.

4. ತಾಲೂಕು ಕಚೇರಿ, ಎ.ಸಿ. ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲಿಸಬಹುದು.

Advertisement

5.ಮತದಾರರ ಸಹಾಯವಾಣಿ 1950 ಸಂಖ್ಯೆಗೆ ಕರೆ ಮಾಡಬಹುದು.

6.ವೆಬ್ ಪೋರ್ಟಲ್ www.nvsp.in ಇದರಲ್ಲಿಯೂ ಪರಿಶೀಲಿಸಬಹುದು.

Advertisement

7.ತಮ್ಮ ಊರಿನ ಮತಗಟ್ಟೆ ಅಧಿಕಾರಿಗಳಲ್ಲಿ ಪರಿಶೀಲಿಸಬಹುದು.

ಮತದಾರರು ತಮ್ಮ ಹೆಸರು ಸೇರ್ಪಡೆ, ತೆಗೆದು ಹಾಕಲು, ತಿದ್ದುಪಡಿ ಮಾಡಲು, ಪರಿಶೀಲನೆ ಮತ್ತು ದೃಡೀಕರಿಸಲು ಈ ಕಾರ್ಯಕ್ರಮದಲ್ಲಿ  ಅವಕಾಶವಿದೆ. ಚುನಾವಣಾ ಆಯೋಗವು ಅನುಮೋದಿಸಿರುವ ಯಾವುದೇ ದಾಖಲೆಗಳನ್ನು (ಪಾಸ್‍ಪೋರ್ಟ್/ಡ್ರೈವಿಂಗ್ ಲೈಸನ್ಸ್/ಆಧಾರ್ ಕಾರ್ಡ್/ಬ್ಯಾಂಕ್ ಪಾಸ್ ಬುಕ್/ರೈತರ ಗುರುತಿನ ಚೀಟಿ ಮತ್ತಿತರ ದಾಖಲೆ) ತಂದು ಈ ಕೇಂದ್ರಗಳಲ್ಲಿ ಪರಿಶೀಲನೆ ಮಾಡಬಹುದು.

Advertisement

ಮತದಾರರ ಪಟ್ಟಿಗೆ ಹೆಸರು ಸೇರಿಸಲು ಪಾರಂ 6, ಹೆಸರು, ಭಾವಚಿತ್ರ ಮತ್ತಿತರ ಮಾಹಿತಿ  ತಿದ್ದುಪಡಿ ಮಾಡಲು ಫಾರಂ 8 ಹಾಗೂ ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಲು ಫಾರಂ 7 ಅರ್ಜಿಗಳನ್ನು ನೀಡಬೇಕು. ಈ ಮೇಲಿನ ಕೇಂದ್ರಗಳಲ್ಲಿ ಈ ಅರ್ಜಿಗಳು ಲಭ್ಯವಿದೆ.

ಮತದಾರರ ವಿವರಗಳನ್ನು  ಸರಿಪಡಿಸಿ ಶೇ 100 ರಷ್ಟು ಶುದ್ಧವಾದ ಮತದಾರರ ಪಟ್ಟಿ ತಯಾರಿಸಲು ಈ  ಪರಿಶೀಲನಾ ಕಾರ್ಯಕ್ರಮ ಸಪ್ಟೆಂಬರ್ 1 ರಿಂದ ನಡೆಯಲಿದ್ದು,  ಜಿಲ್ಲೆಯ ಮತದಾರರು ಈ ಅವಕಾಶವನ್ನು ಬಳಸಿಕೊಂಡು ಸಹಕರಿಸಲು ದಕ್ಷಿಣ ಕನ್ನಡ  ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

9 hours ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

9 hours ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

13 hours ago

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |

ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…

14 hours ago

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…

18 hours ago

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

2 days ago