Advertisement
ಸುದ್ದಿಗಳು

ಇಂದು(ಜ.5) ಪುತ್ತೂರಿನಲ್ಲಿ ಸಾವಯವ ಹಬ್ಬ ಸಮಾರೋಪ

Share

ಪುತ್ತೂರು: ಪುತ್ತೂರಿನ ನವಚೇತನ ಸ್ನೇಹಸಂಗಮ ಹಾಗೂ ಜೆಸಿಐ ಪುತ್ತೂರು ಆಯೋಜನೆಯಲ್ಲಿ  ನಡೆಯುತ್ತಿರುವ  ‘ಸಾವಯವ ಹಬ್ಬ’  ಜನವರಿ  5 ರಂದು(ಇಂದು) ಸಮಾರೋಪಗೊಳ್ಳಲಿದೆ.

ಬೆಳಗ್ಗೆ 10-30ಕ್ಕೆ ಪುತ್ತೂರಿನ ಫಾರ್ಮರ್ ಫಸ್ಟ್ ಟ್ರಸ್ಟ್ ಅಧ್ಯಕ್ಷ ಮಂಚಿ ಶ್ರೀನಿವಾಸ ಆಚಾರ್ ಅವರ ಅಧ್ಯಕ್ಷತೆಯಲ್ಲಿ ‘ಸಾವಯವ ವೈವಿಧ್ಯ’ ಎನ್ನುವ ಗೋಷ್ಠಿ ಸಂಪನ್ನವಾಗಲಿದೆ. ಬೆಂಗಳೂರಿನ ಊಟ ಫ್ರಮ್ ಯುವರ್ ತೋಟ ಇದರ ಸಂಚಾಲಕ ರಾಜೇಂದ್ರ ಹೆಗಡೆಯವರು ‘ತಾರಸಿ ಕೈತೋಟ’ದ ಕುರಿತು ಮತ್ತು ತಿಥಿ, ವಾರ, ನಕ್ಷತ್ರ ಆಧಾರಿತ ತರಕಾರಿ ಕೃಷಿ ತಜ್ಞ ಪೆರ್ಲದ ಶಿವಪ್ರಸಾದ್ ವರ್ಮುಡಿಯವರ ತರಕಾರಿ ಕೃಷಿ ಅನುಭವಗಳ ವಿಶೇಷ ಉಪನ್ಯಾಸಗಳು ನಡೆಯಲಿವೆ. ಪುತ್ತೂರಿನ ಕೋಡಿಬೈಲು ಆಗ್ರೋ ಮ್ಯಾಕ್ ಇದರ ಮುಖ್ಯಸ್ಥ ಕೆ.ಸತ್ಯನಾರಾಯಣ ಉಪಸ್ಥಿತಿ.

ಸಂಜೆ ಗಂಟೆ 4ಕ್ಕೆ ಸಾವಯವ ಹಬ್ಬದ ಸಮಾಪನ. ಪುತ್ತೂರಿನ ನವಚೇತನ ಸ್ನೇಹ ಸಂಗಮದ ಅಧ್ಯಕ್ಷ ಅನಂತಪ್ರಸಾದ್ ನೈತ್ತಡ್ಕ ಅಧ್ಯಕ್ಷತೆ. ಜೇಸಿಐ ಪುತ್ತೂರು ಇದರ ಕಾರ್ಯದರ್ಶಿ  ಪ್ರಮಿತಾ ಸಿ. ಹಾಸ್ ಅವರು ಸಮಾರೋಪ ನುಡಿಗಳನ್ನಾಡಲಿದ್ದಾರೆ. ಪುತ್ತೂರಿನ ಮಾಜಿ ಶಾಸಕಿ  ಶಕುಂತಳಾ ಟಿ.ಶೆಟ್ಟಿ, ಕಹಳೆ ನ್ಯೂಸ್ ಇದರ ಮುಖ್ಯಸ್ಥ ಶ್ಯಾಮ ಸುದರ್ಶನ ಮತ್ತು ಜೆಸಿಐ ಭಾರತ ವಲಯ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕ ಜೆ.ಎಫ್.ಎಮ್. ಅಶ್ವಿನಿ ಐತಾಳ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಉತ್ತರ ಕರ್ನಾಟಕದಿಂದ ತಂತಮ್ಮ ಸಾವಯವ ಉತ್ಪನ್ನಗಳೊಂದಿಗೆ ಕೃಷಿಕರೇ ಸ್ವತಃ ಮಳಿಗೆ ತೆರೆದು ಮಾಹಿತಿಯೊಂದಿಗೆ ಉತ್ಪನ್ನಗಳನ್ನು ಮಾರುತ್ತಿರುವುದು ಹಬ್ಬದ ಹೈಲೈಟ್.

 ಬೆಳಿಗ್ಗೆ ಗಂಟೆ ಏಳರಿಂದ ಸಾವಯವ ತರಕಾರಿ ಸಂತೆ ನಡೆಯುತ್ತಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

2 hours ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

19 hours ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

19 hours ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

1 day ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

1 day ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

2 days ago