Advertisement
ಸುದ್ದಿಗಳು

ಇಂದು(ಜ.5) ಪುತ್ತೂರಿನಲ್ಲಿ ಸಾವಯವ ಹಬ್ಬ ಸಮಾರೋಪ

Share

ಪುತ್ತೂರು: ಪುತ್ತೂರಿನ ನವಚೇತನ ಸ್ನೇಹಸಂಗಮ ಹಾಗೂ ಜೆಸಿಐ ಪುತ್ತೂರು ಆಯೋಜನೆಯಲ್ಲಿ  ನಡೆಯುತ್ತಿರುವ  ‘ಸಾವಯವ ಹಬ್ಬ’  ಜನವರಿ  5 ರಂದು(ಇಂದು) ಸಮಾರೋಪಗೊಳ್ಳಲಿದೆ.

ಬೆಳಗ್ಗೆ 10-30ಕ್ಕೆ ಪುತ್ತೂರಿನ ಫಾರ್ಮರ್ ಫಸ್ಟ್ ಟ್ರಸ್ಟ್ ಅಧ್ಯಕ್ಷ ಮಂಚಿ ಶ್ರೀನಿವಾಸ ಆಚಾರ್ ಅವರ ಅಧ್ಯಕ್ಷತೆಯಲ್ಲಿ ‘ಸಾವಯವ ವೈವಿಧ್ಯ’ ಎನ್ನುವ ಗೋಷ್ಠಿ ಸಂಪನ್ನವಾಗಲಿದೆ. ಬೆಂಗಳೂರಿನ ಊಟ ಫ್ರಮ್ ಯುವರ್ ತೋಟ ಇದರ ಸಂಚಾಲಕ ರಾಜೇಂದ್ರ ಹೆಗಡೆಯವರು ‘ತಾರಸಿ ಕೈತೋಟ’ದ ಕುರಿತು ಮತ್ತು ತಿಥಿ, ವಾರ, ನಕ್ಷತ್ರ ಆಧಾರಿತ ತರಕಾರಿ ಕೃಷಿ ತಜ್ಞ ಪೆರ್ಲದ ಶಿವಪ್ರಸಾದ್ ವರ್ಮುಡಿಯವರ ತರಕಾರಿ ಕೃಷಿ ಅನುಭವಗಳ ವಿಶೇಷ ಉಪನ್ಯಾಸಗಳು ನಡೆಯಲಿವೆ. ಪುತ್ತೂರಿನ ಕೋಡಿಬೈಲು ಆಗ್ರೋ ಮ್ಯಾಕ್ ಇದರ ಮುಖ್ಯಸ್ಥ ಕೆ.ಸತ್ಯನಾರಾಯಣ ಉಪಸ್ಥಿತಿ.

ಸಂಜೆ ಗಂಟೆ 4ಕ್ಕೆ ಸಾವಯವ ಹಬ್ಬದ ಸಮಾಪನ. ಪುತ್ತೂರಿನ ನವಚೇತನ ಸ್ನೇಹ ಸಂಗಮದ ಅಧ್ಯಕ್ಷ ಅನಂತಪ್ರಸಾದ್ ನೈತ್ತಡ್ಕ ಅಧ್ಯಕ್ಷತೆ. ಜೇಸಿಐ ಪುತ್ತೂರು ಇದರ ಕಾರ್ಯದರ್ಶಿ  ಪ್ರಮಿತಾ ಸಿ. ಹಾಸ್ ಅವರು ಸಮಾರೋಪ ನುಡಿಗಳನ್ನಾಡಲಿದ್ದಾರೆ. ಪುತ್ತೂರಿನ ಮಾಜಿ ಶಾಸಕಿ  ಶಕುಂತಳಾ ಟಿ.ಶೆಟ್ಟಿ, ಕಹಳೆ ನ್ಯೂಸ್ ಇದರ ಮುಖ್ಯಸ್ಥ ಶ್ಯಾಮ ಸುದರ್ಶನ ಮತ್ತು ಜೆಸಿಐ ಭಾರತ ವಲಯ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕ ಜೆ.ಎಫ್.ಎಮ್. ಅಶ್ವಿನಿ ಐತಾಳ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಉತ್ತರ ಕರ್ನಾಟಕದಿಂದ ತಂತಮ್ಮ ಸಾವಯವ ಉತ್ಪನ್ನಗಳೊಂದಿಗೆ ಕೃಷಿಕರೇ ಸ್ವತಃ ಮಳಿಗೆ ತೆರೆದು ಮಾಹಿತಿಯೊಂದಿಗೆ ಉತ್ಪನ್ನಗಳನ್ನು ಮಾರುತ್ತಿರುವುದು ಹಬ್ಬದ ಹೈಲೈಟ್.

 ಬೆಳಿಗ್ಗೆ ಗಂಟೆ ಏಳರಿಂದ ಸಾವಯವ ತರಕಾರಿ ಸಂತೆ ನಡೆಯುತ್ತಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

12 minutes ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

7 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

12 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

1 day ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago