ಸುಬ್ರಹ್ಮಣ್ಯ:ಕುಕ್ಕೇಸುಬ್ರಹ್ಮಣ್ಯದಲ್ಲಿ ಮಹಾಪ್ರಸಾದ ಮೂಲಮೃತ್ತಿಕೆಯನ್ನು ಶನಿವಾರ ತೆಗೆಯಲಾಗುತ್ತದೆ. ದೇವಳದ ಗರ್ಭಗುಡಿಯಿಂದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯರು ವೈದಿಕ ವಿದಿವಿಧಾನಗಳೊಂದಿಗೆ ಮೂಲಪ್ರಸಾದ ತೆಗೆಯಲಿದ್ದಾರೆ.ಬಳಿಕ ಪ್ರಸಾದ ವಿತರಣೆ ನಡೆಯುತ್ತದೆ. ಶ್ರೀದೇವಳದಲ್ಲಿ ಮೂಲಮೃತ್ತಿಕಾ ಪ್ರಸಾದ ತೆಗೆಯಲು ಇರುವುದರಿಂದ ಇಂದು ಮದ್ಯಾಹ್ನ 2 ಗಂಟೆಯ ನಂತರ ಭಕ್ತಾಧಿಗಳಿಗೆ ಶ್ರೀ ದೇವರ ದರುಶನಕ್ಕೆ ಅವಕಾಶ ಮಾಡಲಾಗಿದೆ. ಶ್ರೀದೇವರ ಜಾತ್ರಾಮಹೋತ್ಸವವು ನ.24ರಂದು ಆರಂಭಗೊಂಡು ಡಿ.9ರವರೆಗೆ ನಡೆಯಲಿದೆ.
ಮೂಲಮೃತ್ತಿಕಾ ಪ್ರಸಾದವನ್ನು ವರ್ಷದಲ್ಲಿ ಒಂದೇ ಬಾರಿ ಮಾತ್ರಾ ತೆಗೆಯಲಾಗುವುದು. ಮೂಲ ಮೃತ್ತಿಕಾ ಪ್ರಸಾದವು ವಿವಿಧ ರೋಗಗಳ ಪರಿಹಾರಕ್ಕೆ ದಿವ್ಯ ಔಷಧ ಎಂಬ ನಂಬಿಕೆ ಇದೆ.
ಇಂದು ಸಭೆ:
ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರ ಲಕ್ಷದೀಪೋತ್ಸವ ರಥೋತ್ಸವದ ಸಮಯದಲ್ಲಿ ಈ ಹಿಂದಿನಂತೆ ಒಂದು ಲಕ್ಷ ಹಣತೆಯನ್ನು ಉರಿಸುವ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಇಂದು ಸಂಜೆ 3.00 ಗಂಟೆಗೆ ಶ್ರೀ ದೇವಳದ ಆಡಳಿತ ಕಚೇರಿಯ ಸಭಾಂಗಣದಲ್ಲಿ ಭಕ್ತರ ಸಭೆಯನ್ನು ಕರೆಯಲಾಗಿದೆ.
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…