ಸುಳ್ಯ: ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂಜಾ ಸಮಯದಲ್ಲಿ ಬದಲಾವಣೆಯಾಗಲಿದೆ.
ಮಂಗಳವಾರ ರಾತ್ರಿ 1.33ರಿಂದ 4.32ರವರೆಗೆ ಚಂದ್ರಗ್ರಹಣ ನಡೆಯುವ ಹಿನ್ನೆಲೆಯಲ್ಲಿ ಕೆಲವು ದೇವಾಲಯಗಳ ಪೂಜಾ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ರಾತ್ರಿ 7ಕ್ಕೆ ನಡೆಯುವ ಮಹಾಪೂಜೆ ಸಂಜೆ 6.30ಕ್ಕೆ ನಡೆಯಲಿದೆ. 7 ಗಂಟೆ ಬಳಿಕ ಭಕ್ತರಿಗೆ ದೇವಸ್ಥಾನ ಪ್ರವೇಶಿಸಲು ಅವಕಾಶವಿಲ್ಲ. ಸಂಜೆಯ ಆಶ್ಲೇಷಾ ಬಲಿ ಸೇವೆ ಹಾಗೂ ರಾತ್ರಿಯ ಭೋಜನ ವ್ಯವಸ್ಥೆಯೂ ಇರುವುದಿಲ್ಲ ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ. ಮಧ್ಯಾಹದವರೆಗಿನ ಪೂಜಾ ಅವಧಿ ಮತ್ತು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಚಂದ್ರಗ್ರಹಣ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳದ ಕಾರ್ಯಚಟುವಟಿಕೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಎಂದಿನಂತೆ ಪೂಜೆ ಮತ್ತು ದೇವರ ದರ್ಶನ ಇರುತ್ತದೆ. ಚಂದ್ರಗ್ರಹಣ ಮಧ್ಯರಾತ್ರಿ ಆಗುವುದರಿಂದ ರಾತ್ರಿ 9 ಗಂಟೆ ತನಕವೂ ಅನ್ನಛತ್ರದಲ್ಲಿ ಎಂದಿನಂತೆ ಅನ್ನ ದಾಸೋಹ ಇರಲಿದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…