ಸುಳ್ಯ: ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂಜಾ ಸಮಯದಲ್ಲಿ ಬದಲಾವಣೆಯಾಗಲಿದೆ.
ಮಂಗಳವಾರ ರಾತ್ರಿ 1.33ರಿಂದ 4.32ರವರೆಗೆ ಚಂದ್ರಗ್ರಹಣ ನಡೆಯುವ ಹಿನ್ನೆಲೆಯಲ್ಲಿ ಕೆಲವು ದೇವಾಲಯಗಳ ಪೂಜಾ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ರಾತ್ರಿ 7ಕ್ಕೆ ನಡೆಯುವ ಮಹಾಪೂಜೆ ಸಂಜೆ 6.30ಕ್ಕೆ ನಡೆಯಲಿದೆ. 7 ಗಂಟೆ ಬಳಿಕ ಭಕ್ತರಿಗೆ ದೇವಸ್ಥಾನ ಪ್ರವೇಶಿಸಲು ಅವಕಾಶವಿಲ್ಲ. ಸಂಜೆಯ ಆಶ್ಲೇಷಾ ಬಲಿ ಸೇವೆ ಹಾಗೂ ರಾತ್ರಿಯ ಭೋಜನ ವ್ಯವಸ್ಥೆಯೂ ಇರುವುದಿಲ್ಲ ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ. ಮಧ್ಯಾಹದವರೆಗಿನ ಪೂಜಾ ಅವಧಿ ಮತ್ತು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಚಂದ್ರಗ್ರಹಣ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳದ ಕಾರ್ಯಚಟುವಟಿಕೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಎಂದಿನಂತೆ ಪೂಜೆ ಮತ್ತು ದೇವರ ದರ್ಶನ ಇರುತ್ತದೆ. ಚಂದ್ರಗ್ರಹಣ ಮಧ್ಯರಾತ್ರಿ ಆಗುವುದರಿಂದ ರಾತ್ರಿ 9 ಗಂಟೆ ತನಕವೂ ಅನ್ನಛತ್ರದಲ್ಲಿ ಎಂದಿನಂತೆ ಅನ್ನ ದಾಸೋಹ ಇರಲಿದೆ.
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…