ಸುಳ್ಯ: ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂಜಾ ಸಮಯದಲ್ಲಿ ಬದಲಾವಣೆಯಾಗಲಿದೆ.
ಮಂಗಳವಾರ ರಾತ್ರಿ 1.33ರಿಂದ 4.32ರವರೆಗೆ ಚಂದ್ರಗ್ರಹಣ ನಡೆಯುವ ಹಿನ್ನೆಲೆಯಲ್ಲಿ ಕೆಲವು ದೇವಾಲಯಗಳ ಪೂಜಾ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ರಾತ್ರಿ 7ಕ್ಕೆ ನಡೆಯುವ ಮಹಾಪೂಜೆ ಸಂಜೆ 6.30ಕ್ಕೆ ನಡೆಯಲಿದೆ. 7 ಗಂಟೆ ಬಳಿಕ ಭಕ್ತರಿಗೆ ದೇವಸ್ಥಾನ ಪ್ರವೇಶಿಸಲು ಅವಕಾಶವಿಲ್ಲ. ಸಂಜೆಯ ಆಶ್ಲೇಷಾ ಬಲಿ ಸೇವೆ ಹಾಗೂ ರಾತ್ರಿಯ ಭೋಜನ ವ್ಯವಸ್ಥೆಯೂ ಇರುವುದಿಲ್ಲ ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ. ಮಧ್ಯಾಹದವರೆಗಿನ ಪೂಜಾ ಅವಧಿ ಮತ್ತು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಚಂದ್ರಗ್ರಹಣ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳದ ಕಾರ್ಯಚಟುವಟಿಕೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಎಂದಿನಂತೆ ಪೂಜೆ ಮತ್ತು ದೇವರ ದರ್ಶನ ಇರುತ್ತದೆ. ಚಂದ್ರಗ್ರಹಣ ಮಧ್ಯರಾತ್ರಿ ಆಗುವುದರಿಂದ ರಾತ್ರಿ 9 ಗಂಟೆ ತನಕವೂ ಅನ್ನಛತ್ರದಲ್ಲಿ ಎಂದಿನಂತೆ ಅನ್ನ ದಾಸೋಹ ಇರಲಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…