ಇಂದು ವೈದ್ಯರ ದಿನ ಹಾಗೂ ಪತ್ರಿಕಾ ದಿನ.
ಜುಲೈ1 ಭಾರತರತ್ನ ಡಾ.ಬಿದನ್ ಚಂದ್ರ ರಾಯ್ ಅವರ ಜನ್ಮಜಯಂತಿ.
ಅವರ ಸಾಧನೆಯನ್ನು ಪರಿಗಣಿಸಿ ಈ ದಿನವನ್ನು ಭಾರತದಲ್ಲಿ ವೈದ್ಯರ ದಿನಾಚರಣೆಯನ್ನಾಗಿ ಆಚರಿಸುತ್ತಾ ಬರಲಾಗುತ್ತಿದೆ. ಆ ಮೂಲಕ ರೋಗಿಗಳ ಶುಶ್ರೂಷೆಯಲ್ಲಿ ತೊಡಗಿ ಆರೋಗ್ಯ ಸೇವೆ ಮಾಡುವ ವೈದ್ಯರಿಗೆ ಗೌರವ ಸಲ್ಲಿಸಲಾಗುತ್ತಿದೆ. ವೈದ್ಯರ ದಿನಾಚರಣೆಯನ್ನು ಭಾರತದಲ್ಲಿ ಜುಲೈ 1 ರಂದು ಆಚರಿಸಿದರೆ, ಅಮೆರಿಕದಲ್ಲಿ ಮಾರ್ಚ್ 30ರಂದು ವೈದ್ಯ ದಿನಾಚರಣೆಯನ್ನು ಆಚರಿಸುತ್ತಾರೆ. ಏಕೆಂದರೆ ಮಾರ್ಚ್, 30-1842 ರಂದು ಡಾ.ಕ್ರಾಫರ್ಡ್ ಡಬ್ಲ್ಯು ಲಾಂಗ್ ಎನ್ನುವವರು ಮೊದಲ ಬಾರಿಗೆ ಅರಿವಳಿಕೆಯನ್ನು (ಅನೆಸ್ತೀಸಿಯ) ಪರಿಣಾಮಕಾರಿಯಾಗಿ ಬಳಸಿ ಒಂದು ಶಸ್ತ್ರಚಿಕಿತ್ಸೆಯನ್ನು ಮಾಡಿದರಂತೆ ಈ ಮಹತ್ವದ ದಿನವನ್ನು ಅವರು ರಾಷ್ಟ್ರೀಯ ವೈದ್ಯ ದಿನಾಚರಣೆಯನ್ನಾಗಿ ಆಚರಿಸುತ್ತಿದ್ದಾರೆ.
ಕನ್ನಡದ ಮೊದಲ ಪತ್ರಿಕೆ ಮಂಗಳೂರು ಸಮಾಚಾರ ಆರಂಭವಾದದ್ದು 1843 ಜುಲೈ 1. ಹೀಗಾಗಿ ಈ ದಿನವನ್ನು ಪತ್ರಿಕಾ ದಿನವನ್ನಾಗಿ ಆಚರಿಸಲಾಗುತ್ತಿದೆ.
ಇದೆರಡೂ ಸೇವೆಯೂ ಸಮಾಜದ ಹಿತಕ್ಕಾಗಿ. ರೋಗ ಮುಕ್ತಗೊಳಿಸುವ ಪ್ರಕ್ರಿಯೆ. ಒಂದು ಆರೋಗ್ಯದ ಹಿತವಾದರೆ ಮತ್ತೊಂದು ಸಾಮಾಜಿಕ ಹಿತ. ಕಳಕಳಿ, ಕಾಳಜಿ ಎರಡೂ ದೊಡ್ಡದೇ. ಜವಾಬ್ದಾರಿ ನೆನಪಿಸುವ ದಿನ ಇದು. ನಡೆದು ಬಂದ ಹಾದಿ, ನಡೆಯಬೇಕಾದ ಹಾದಿ, ನಡೆಯಬಹುದಾದ ದಾರಿಯ ಬಗ್ಗೆ ಯೋಚಿಸುವ ಸಮಯ ಇದು.
ಎಲ್ಲರಿಗೂ ಶುಭಾಶಯ.
ಸುಳ್ಯನ್ಯೂಸ್.ಕಾಂ
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…