Advertisement
ಮಾಹಿತಿ

ಇಂದು ಪತ್ರಿಕಾದಿನ – ವೈದ್ಯರ ದಿನ

Share

ಇಂದು ವೈದ್ಯರ ದಿನ ಹಾಗೂ ಪತ್ರಿಕಾ ದಿನ. 

ಜುಲೈ1 ಭಾರತರತ್ನ ಡಾ.ಬಿದನ್ ಚಂದ್ರ ರಾಯ್ ಅವರ ಜನ್ಮಜಯಂತಿ.

ಅವರ ಸಾಧನೆಯನ್ನು ಪರಿಗಣಿಸಿ ಈ ದಿನವನ್ನು ಭಾರತದಲ್ಲಿ ವೈದ್ಯರ ದಿನಾಚರಣೆಯನ್ನಾಗಿ ಆಚರಿಸುತ್ತಾ ಬರಲಾಗುತ್ತಿದೆ. ಆ ಮೂಲಕ  ರೋಗಿಗಳ ಶುಶ್ರೂಷೆಯಲ್ಲಿ ತೊಡಗಿ ಆರೋಗ್ಯ ಸೇವೆ ಮಾಡುವ ವೈದ್ಯರಿಗೆ ಗೌರವ ಸಲ್ಲಿಸಲಾಗುತ್ತಿದೆ. ವೈದ್ಯರ ದಿನಾಚರಣೆಯನ್ನು ಭಾರತದಲ್ಲಿ ಜುಲೈ 1 ರಂದು ಆಚರಿಸಿದರೆ, ಅಮೆರಿಕದಲ್ಲಿ ಮಾರ್ಚ್ 30ರಂದು ವೈದ್ಯ ದಿನಾಚರಣೆಯನ್ನು ಆಚರಿಸುತ್ತಾರೆ. ಏಕೆಂದರೆ ಮಾರ್ಚ್, 30-1842 ರಂದು ಡಾ.ಕ್ರಾಫರ್ಡ್ ಡಬ್ಲ್ಯು ಲಾಂಗ್ ಎನ್ನುವವರು ಮೊದಲ ಬಾರಿಗೆ ಅರಿವಳಿಕೆಯನ್ನು (ಅನೆಸ್ತೀಸಿಯ) ಪರಿಣಾಮಕಾರಿಯಾಗಿ ಬಳಸಿ ಒಂದು ಶಸ್ತ್ರಚಿಕಿತ್ಸೆಯನ್ನು ಮಾಡಿದರಂತೆ ಈ ಮಹತ್ವದ ದಿನವನ್ನು ಅವರು ರಾಷ್ಟ್ರೀಯ ವೈದ್ಯ ದಿನಾಚರಣೆಯನ್ನಾಗಿ ಆಚರಿಸುತ್ತಿದ್ದಾರೆ.

ಕನ್ನಡದ ಮೊದಲ ಪತ್ರಿಕೆ ಮಂಗಳೂರು ಸಮಾಚಾರ ಆರಂಭವಾದದ್ದು 1843 ಜುಲೈ 1.  ಹೀಗಾಗಿ ಈ ದಿನವನ್ನು ಪತ್ರಿಕಾ ದಿನವನ್ನಾಗಿ ಆಚರಿಸಲಾಗುತ್ತಿದೆ. 

ಇದೆರಡೂ ಸೇವೆಯೂ ಸಮಾಜದ ಹಿತಕ್ಕಾಗಿ. ರೋಗ ಮುಕ್ತಗೊಳಿಸುವ ಪ್ರಕ್ರಿಯೆ. ಒಂದು ಆರೋಗ್ಯದ ಹಿತವಾದರೆ ಮತ್ತೊಂದು ಸಾಮಾಜಿಕ  ಹಿತ.  ಕಳಕಳಿ, ಕಾಳಜಿ ಎರಡೂ ದೊಡ್ಡದೇ. ಜವಾಬ್ದಾರಿ ನೆನಪಿಸುವ ದಿನ ಇದು. ನಡೆದು ಬಂದ ಹಾದಿ, ನಡೆಯಬೇಕಾದ ಹಾದಿ, ನಡೆಯಬಹುದಾದ ದಾರಿಯ ಬಗ್ಗೆ ಯೋಚಿಸುವ ಸಮಯ ಇದು. 

ಎಲ್ಲರಿಗೂ ಶುಭಾಶಯ.

ಸುಳ್ಯನ್ಯೂಸ್.ಕಾಂ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

15 minutes ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

15 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

16 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

1 day ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

1 day ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

2 days ago