Advertisement
ರಾಷ್ಟ್ರೀಯ

ಇಂದು ಮೋದಿ ಸರಕಾರ 2.0 : ಸಂಪುಟದಲ್ಲಿ ಸುಳ್ಯದ ಮೂವರಲ್ಲಿ ಯಾರಾಗ್ತಾರೆ ಸಚಿವ ?

Share

ಸುಳ್ಯ : ಮೇ 30ರಂದು ರಾಷ್ಟ್ರಪತಿ ಭವನದ ರೈಸಿನಾ ಹಿಲ್ಸ್ ನಲ್ಲಿ ಮತ್ತೊಮ್ಮೆ ಮೋದಿ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಮಧ್ಯೆ ಟೀಂ ಮೋದಿ ಸಚಿವ ಸಂಪುಟದಲ್ಲಿ ಯಾರೆಲ್ಲ ಸೇರಿಕೊಳ್ಳಲಿದ್ದಾರೆ. ಯಾರಿಗೆಲ್ಲ ಸಚಿವ ಸ್ಥಾನದ ಅದೃಷ್ಟ ಒಲಿದು ಬರಲಿದೆ ಎಂಬ ಕುತೂಹಲ, ಚರ್ಚೆ ಗರಿಗೆದರಿದೆ. ಕರಾವಳಿ ಭಾಗದಿಂದ ಯಾರು, ಅದರಲ್ಲೂ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೊಳಪಟ್ಟ ಮೂವರು ಸಂಸದರಲ್ಲಿ ಯಾರಿಗಾದರೂ ಸಚಿವ ಸ್ಥಾನ ಸಿಗುತ್ತದಾ ಎಂಬ ಜಿಜ್ಞಾಸೆ ಇದೆ.

‘ನವ ಭಾರತ’ ನಿರ್ಮಾಣದ ಹೆಸರಿನಲ್ಲಿ ಈ ಬಾರಿ ಮೋದಿ ಸರಕಾರ 2.0 ಕಾರ್ಯನಿರ್ವಹಣೆ ಮಾಡುವ ಸಂದರ್ಭ  ತಮ್ಮ ಹೊಸ ಸಚಿವ ಸಂಪುಟದಲ್ಲಿ ಹೊಸಬರಿಗೆ ಆದ್ಯತೆ ನೀಡುತ್ತಾರೆಯೇ ಎಂಬ ಕುತೂಹಲ ಎಲ್ಲೆಡೆ ಮೂಡಿದೆ.  ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕಾರ ಸಂದರ್ಭ 2.0 ಸಂಪುಟ ಕೂಡಾ ರಚನೆಯಾಗಲಿದ್ದು ಸುಮಾರು 60 ಮಂದಿ ಸಚಿವರು ಕೂಡಾ ಪ್ರಮಾಣವಚನ ಸ್ವೀಕಾರ ಮಾಡುವರು ಎಂದು ಮಾಧ್ಯಮಗಳು ವರದಿ ಮಾಡಿದೆ. ಆದರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೇರಿ ಯಾರೊಬ್ಬರ ಹೆಸರನ್ನೂ ಕೂಡ ಅಧಿಕೃತವಾಗಿ ಪ್ರಕಟಿಸಿಲ್ಲ. ಎನ್ ಡಿ ಎ ಮಿತ್ರ ಪಕ್ಷಗಳಿಗೆ ಸಚಿವ ಸ್ಥಾನ ಹಂಚಿಕೆ ಸೇರಿದಂತೆ ಇತರ ಮಾತುಕತೆಗಳು ನಡೆಯುತ್ತಿದ್ದು  ಕೊನೆಯ ಕ್ಷಣದಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಗಳಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಬಳಿಕ ಮುಂದೆ ಸಂಪುಟ ವಿಸ್ತರಣೆ ಸಾಧ್ಯತೆಯನ್ನು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ. ಈ ಬಾರಿ 6 ಸಾವಿರಕ್ಕೂ ಹೆಚ್ಚು ಆಹ್ವಾನಿತ ಅತಿಥಿಗಳು ಪ್ರಮಾಣವಚನ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಆದರೆ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸುಳ್ಯದ 3 ಜನ ಸಂಸದರ ಪೈಕಿ ಯಾರಾಗ್ತಾರೆ ಸಚಿವ ಎಂಬ ಕುತೂಹಲ ಎಲ್ಲೆಡೆ ಇದೆ. ಈ ಹಿಂದೆ ಸಚಿವರಾಗಿದ್ದ ಡಿ.ವಿ.ಸದಾನಂದ ಗೌಡ ಅವರಿಗೆ ಮತ್ತೆ ಒಲಿಯಬಹುದೇ ಸಚಿವ ಸ್ಥಾನ ಅಥವಾ ಶೋಭಾ ಕರಂದ್ಲಾಜೆ ಅವರಾಗ್ತಾರಾ ಅತ್ಯಧಿಕ ಮತಗಳ ಅಂತರದಿಂದ ಗೆದ್ದ ರಾಜ್ಯದ ನಂ.1 ಸಂಸದ ಎಂದು ಹೆಸರು ಪಡೆದ ನಳಿನ್ ಕುಮಾರ್ ಕಟೀಲು ಅವರಿಗೆ ಸಿಗುತ್ತಾ ಸಚಿವ ಸ್ಥಾನ ಎಂಬ ಕುತೂಹಲ ಎಲ್ಲೆಡೆ ಇದೆ.

 

   ಬೆಂಗಳೂರು ಉತ್ತರ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದ ಡಿ.ವಿ.ಸದಾನಂದ ಗೌಡ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಆಯ್ಕೆಯಾದ ಶೋಭಾ ಕರಂದ್ಲಾಜೆಗೆ ಇವರಿಗೆ ಸಚಿವ ಸ್ಥಾನ ಒಲಿದು ಬರುತ್ತದಾ ಎಂಬ ಚರ್ಚೆ ಚುನಾವಣಾ ಫಲಿತಾಂಶ ಬಂದಾಗಿನಿಂದ ಆರಂಭಗೊಂಡಿತ್ತು. ಲೋಕಸಭೆಗೆ ನಾಲ್ಕನೇ ಬಾರಿ ಆಯ್ಕೆಯಾದ ಸದಾನಂದ ಗೌಡರು ಪ್ರಥಮ ಮೋದಿ ಸರಕಾರಲ್ಲಿ ಐದು ವರ್ಷ ಸಚಿವರಾಗಿ ರೈಲ್ವೇ, ಕಾನೂನು, ಅಂಕಿ ಅಂಶ, ರಸಗೊಬ್ಬರ ಖಾತೆಗಳನ್ನು ನಿಭಾಯಿಸಿದ್ದರು.

 

ಎರಡನೇ ಬಾರಿ ಸಂಸದೆಯಾಗಿರುವ ಶೋಭಾ ಕರಂದ್ಲಾಜೆ ಈ ಹಿಂದೆ ರಾಜ್ಯ ಬಿಜೆಪಿ ಸರಕಾರದಲ್ಲಿ ಗ್ರಾಮೀಣಾಭಿವೃದ್ಧಿ, ಇಂಧನ ಖಾತೆ ಸಚಿವರಾಗಿದ್ದರು.

 

ಬಿಜೆಪಿಯ ಭದ್ರಕೋಟೆ ಎಂದೇ ಪರಿಗಣಿಸಲಾಗಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಸತತ ಮೂರನೇ ಬಾರಿ ಆಯ್ಕೆಯಾದ ನಳಿನ್ ಕುಮಾರ್ ಕಟೀಲ್ ಕೇಂದ್ರ ಸಚಿವರಾಗುತ್ತಾರಾ ಎಂಬ ಚರ್ಚೆ ಆರಂಭವಾಗಿದ್ದರೂ ‘ನಾನು ಸಚಿವನಾಗುವುದಿಲ್ಲ, ನಾನು ಸಚಿವ ಸ್ಥಾನದ ಆಕಾಂಕ್ಷಿಯೂ ಅಲ್ಲ ಎಂದು ನಳಿನ್ ಕುಮಾರ್ ಕಟೀಲ್ ಅವರೇ ಹೇಳುವ ಮೂಲಕ ಚರ್ಚೆಗೆ ತೆರೆ ಎಳೆದಿದ್ದರು.

28 ರಲ್ಲಿ 25 ಸ್ಥಾನಗಳನ್ನು ಗೆಲ್ಲುವ ಮೂಲಕ ಗೆಲ್ಲುವ ಮೂಲಕ ಕರ್ನಾಟಕದಲ್ಲಿ ಬಿಜೆಪಿ ಬಾರೀ ಮುನ್ನಡೆ ಸಾಧಿಸಿದೆ. ಆದುದರಿಂದ ಕೇಂದ್ರ ಸಚಿವ ಸಂಪುಟದಲ್ಲೂ ರಾಜ್ಯಕ್ಕೆ ಪ್ರಾಶಸ್ತ್ಯ ಸಿಗಬಹುದು. ಯಾರಿಗೆಲ್ಲ ಅದೃಷ್ಟ ಒಲಿದು ಬರಲಿದೆ ಎಂಬುದು ಮಾತ್ರ ಸಸ್ಪೆನ್ಸ್.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

9 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

19 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

21 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

1 day ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 day ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago