ಸುಳ್ಯ : ಮೇ 30ರಂದು ರಾಷ್ಟ್ರಪತಿ ಭವನದ ರೈಸಿನಾ ಹಿಲ್ಸ್ ನಲ್ಲಿ ಮತ್ತೊಮ್ಮೆ ಮೋದಿ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಮಧ್ಯೆ ಟೀಂ ಮೋದಿ ಸಚಿವ ಸಂಪುಟದಲ್ಲಿ ಯಾರೆಲ್ಲ ಸೇರಿಕೊಳ್ಳಲಿದ್ದಾರೆ. ಯಾರಿಗೆಲ್ಲ ಸಚಿವ ಸ್ಥಾನದ ಅದೃಷ್ಟ ಒಲಿದು ಬರಲಿದೆ ಎಂಬ ಕುತೂಹಲ, ಚರ್ಚೆ ಗರಿಗೆದರಿದೆ. ಕರಾವಳಿ ಭಾಗದಿಂದ ಯಾರು, ಅದರಲ್ಲೂ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೊಳಪಟ್ಟ ಮೂವರು ಸಂಸದರಲ್ಲಿ ಯಾರಿಗಾದರೂ ಸಚಿವ ಸ್ಥಾನ ಸಿಗುತ್ತದಾ ಎಂಬ ಜಿಜ್ಞಾಸೆ ಇದೆ.
‘ನವ ಭಾರತ’ ನಿರ್ಮಾಣದ ಹೆಸರಿನಲ್ಲಿ ಈ ಬಾರಿ ಮೋದಿ ಸರಕಾರ 2.0 ಕಾರ್ಯನಿರ್ವಹಣೆ ಮಾಡುವ ಸಂದರ್ಭ ತಮ್ಮ ಹೊಸ ಸಚಿವ ಸಂಪುಟದಲ್ಲಿ ಹೊಸಬರಿಗೆ ಆದ್ಯತೆ ನೀಡುತ್ತಾರೆಯೇ ಎಂಬ ಕುತೂಹಲ ಎಲ್ಲೆಡೆ ಮೂಡಿದೆ. ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕಾರ ಸಂದರ್ಭ 2.0 ಸಂಪುಟ ಕೂಡಾ ರಚನೆಯಾಗಲಿದ್ದು ಸುಮಾರು 60 ಮಂದಿ ಸಚಿವರು ಕೂಡಾ ಪ್ರಮಾಣವಚನ ಸ್ವೀಕಾರ ಮಾಡುವರು ಎಂದು ಮಾಧ್ಯಮಗಳು ವರದಿ ಮಾಡಿದೆ. ಆದರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೇರಿ ಯಾರೊಬ್ಬರ ಹೆಸರನ್ನೂ ಕೂಡ ಅಧಿಕೃತವಾಗಿ ಪ್ರಕಟಿಸಿಲ್ಲ. ಎನ್ ಡಿ ಎ ಮಿತ್ರ ಪಕ್ಷಗಳಿಗೆ ಸಚಿವ ಸ್ಥಾನ ಹಂಚಿಕೆ ಸೇರಿದಂತೆ ಇತರ ಮಾತುಕತೆಗಳು ನಡೆಯುತ್ತಿದ್ದು ಕೊನೆಯ ಕ್ಷಣದಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಗಳಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಬಳಿಕ ಮುಂದೆ ಸಂಪುಟ ವಿಸ್ತರಣೆ ಸಾಧ್ಯತೆಯನ್ನು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ. ಈ ಬಾರಿ 6 ಸಾವಿರಕ್ಕೂ ಹೆಚ್ಚು ಆಹ್ವಾನಿತ ಅತಿಥಿಗಳು ಪ್ರಮಾಣವಚನ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಆದರೆ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸುಳ್ಯದ 3 ಜನ ಸಂಸದರ ಪೈಕಿ ಯಾರಾಗ್ತಾರೆ ಸಚಿವ ಎಂಬ ಕುತೂಹಲ ಎಲ್ಲೆಡೆ ಇದೆ. ಈ ಹಿಂದೆ ಸಚಿವರಾಗಿದ್ದ ಡಿ.ವಿ.ಸದಾನಂದ ಗೌಡ ಅವರಿಗೆ ಮತ್ತೆ ಒಲಿಯಬಹುದೇ ಸಚಿವ ಸ್ಥಾನ ಅಥವಾ ಶೋಭಾ ಕರಂದ್ಲಾಜೆ ಅವರಾಗ್ತಾರಾ ಅತ್ಯಧಿಕ ಮತಗಳ ಅಂತರದಿಂದ ಗೆದ್ದ ರಾಜ್ಯದ ನಂ.1 ಸಂಸದ ಎಂದು ಹೆಸರು ಪಡೆದ ನಳಿನ್ ಕುಮಾರ್ ಕಟೀಲು ಅವರಿಗೆ ಸಿಗುತ್ತಾ ಸಚಿವ ಸ್ಥಾನ ಎಂಬ ಕುತೂಹಲ ಎಲ್ಲೆಡೆ ಇದೆ.
ಬಿಜೆಪಿಯ ಭದ್ರಕೋಟೆ ಎಂದೇ ಪರಿಗಣಿಸಲಾಗಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಸತತ ಮೂರನೇ ಬಾರಿ ಆಯ್ಕೆಯಾದ ನಳಿನ್ ಕುಮಾರ್ ಕಟೀಲ್ ಕೇಂದ್ರ ಸಚಿವರಾಗುತ್ತಾರಾ ಎಂಬ ಚರ್ಚೆ ಆರಂಭವಾಗಿದ್ದರೂ ‘ನಾನು ಸಚಿವನಾಗುವುದಿಲ್ಲ, ನಾನು ಸಚಿವ ಸ್ಥಾನದ ಆಕಾಂಕ್ಷಿಯೂ ಅಲ್ಲ ಎಂದು ನಳಿನ್ ಕುಮಾರ್ ಕಟೀಲ್ ಅವರೇ ಹೇಳುವ ಮೂಲಕ ಚರ್ಚೆಗೆ ತೆರೆ ಎಳೆದಿದ್ದರು.
28 ರಲ್ಲಿ 25 ಸ್ಥಾನಗಳನ್ನು ಗೆಲ್ಲುವ ಮೂಲಕ ಗೆಲ್ಲುವ ಮೂಲಕ ಕರ್ನಾಟಕದಲ್ಲಿ ಬಿಜೆಪಿ ಬಾರೀ ಮುನ್ನಡೆ ಸಾಧಿಸಿದೆ. ಆದುದರಿಂದ ಕೇಂದ್ರ ಸಚಿವ ಸಂಪುಟದಲ್ಲೂ ರಾಜ್ಯಕ್ಕೆ ಪ್ರಾಶಸ್ತ್ಯ ಸಿಗಬಹುದು. ಯಾರಿಗೆಲ್ಲ ಅದೃಷ್ಟ ಒಲಿದು ಬರಲಿದೆ ಎಂಬುದು ಮಾತ್ರ ಸಸ್ಪೆನ್ಸ್.
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…