ಸುಳ್ಯ: ಬೇಸಿಗೆ ರಜೆ ಕಳೆದು ಶಾಲೆ ಇಂದು ಪುನರಾರಂಭಗೊಳ್ಳುತ್ತಿದೆ. ಶಾಲೆಯಲ್ಲಿ ಸಂಭ್ರಮ ಮನೆ ಮಾಡಲಿದೆ. ಮಕ್ಕಳಿಗೆ ಹಳೆಯ ಗೆಳೆಯರು, ಹೊಸ ಗೆಳೆಯರು ಸಿಕ್ಕಿ ರಜೆಯ ಮಜಾ ಚರ್ಚಿಸುವ ಹೊತ್ತು ಬಂದಿದೆ. ಅದಕ್ಕೂ ಮೊದಲು, ಅಮ್ಮಾ… ಚೀಲ ಎಲ್ಲಿದೆ, ಪುಸ್ತಕ ಎಲ್ಲಿದೆ… ಬೇಗ ಬೇಗ ಲೇಟಾಯಿತು ಶಾಲೆಗೆ…… ಎಂದು ತಡಕಾಡುವ ಹೊತ್ತು ಶುರುವಾಗಿದೆ.
ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮೇ 29 ರಂದು ಆರಂಭಗೊಳ್ಳುತ್ತಿದೆ. ಸುದೀರ್ಘ ರಜೆಯ ಬಳಿಕ ವಿದ್ಯಾರ್ಥಿಗಳು ಶಾಲೆಯ ಕಡೆಗೆ ಹೆಜ್ಜೆ ಹಾಕುತ್ತಿದ್ದಾರೆ. ಸರಕಾರಿ ಶಾಲೆಗಳಲ್ಲಿ ಮೇ 29ರಂದು ಪ್ರಾರಂಭೋತ್ಸವ ನಡೆಯಲಿದೆ. ಎಲ್ಲಾ ಶಾಲೆಗಳಲ್ಲೂ ಸ್ವಾಗತ ಕಾರ್ಯಕ್ರಮ ನಡೆಯಬೇಕು. ಇದಕ್ಕಾಗಿಯೇ ಶಾಲೆಯಲ್ಲಿ ಸಿದ್ಧತೆ ನಡೆಯಬೇಕು. ಶಾಲೆಗಳನ್ನು ತಳಿರು ತೋರಣ ಗಳಿಂದ ಸಿಂಗರಿಸಬೇಕು.
ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಪಠ್ಯಪುಸ್ತಕಗಳು ಉಚಿತವಾಗಿ ದೊರೆಯುತ್ತವೆ. ಸರಕಾರದಿಂದ ಈಗಾಗಲೇ ಶೇ.75ರಷ್ಟು ಪಠ್ಯಪುಸ್ತಕಗಳು ಸರಬರಾಜು ಆಗಿದ್ದು, ಶಾಲಾ ಆರಂಭೋತ್ಸವದಂದೇ ಪಠ್ಯ ಪುಸ್ತಕಗಳನ್ನು ಮಕ್ಕಳಿಗೆ ವಿತರಿಸಲು ಇಲಾಖೆ ಕ್ರಮ ಕೈಗೊಳ್ಳುತ್ತಿದೆ.
ಇದೆಲ್ಲಾ ಸರಿ. ಈ ಬಾರಿ ಮಳೆ ಇನ್ನೂ ಶುರುವಾಗಿಲ್ಲ. ಬಿಸಿಲಿನ ಕಾರಣದಿಂದ ಸೆಖೆಯಲ್ಲಿ ಕ್ಲಾಸಲ್ಲಿ ಕುಳಿತುಕೊಳ್ಳುವುದು ಹೇಗೆ ಎಂಬುದು ಹೆತ್ತವರ ತಲೆಬಿಸಿ. ವಿಪರೀತ ಬೆವರುತ್ತದೆ, ಹಿಂದೆಲ್ಲಾ ಆದಂತೆ ಜೂನ್ ಮೊದಲ ವಾರದಲ್ಲಿ ಶಾಲೆ ಪುನರಾರಂಭವಾದರೆ ಸಾಕಿತ್ತು ಎಂದು ಹೆತ್ತವರು ಹೇಳುತ್ತಾರೆ.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…