ಸುಳ್ಯ: ಬೇಸಿಗೆ ರಜೆ ಕಳೆದು ಶಾಲೆ ಇಂದು ಪುನರಾರಂಭಗೊಳ್ಳುತ್ತಿದೆ. ಶಾಲೆಯಲ್ಲಿ ಸಂಭ್ರಮ ಮನೆ ಮಾಡಲಿದೆ. ಮಕ್ಕಳಿಗೆ ಹಳೆಯ ಗೆಳೆಯರು, ಹೊಸ ಗೆಳೆಯರು ಸಿಕ್ಕಿ ರಜೆಯ ಮಜಾ ಚರ್ಚಿಸುವ ಹೊತ್ತು ಬಂದಿದೆ. ಅದಕ್ಕೂ ಮೊದಲು, ಅಮ್ಮಾ… ಚೀಲ ಎಲ್ಲಿದೆ, ಪುಸ್ತಕ ಎಲ್ಲಿದೆ… ಬೇಗ ಬೇಗ ಲೇಟಾಯಿತು ಶಾಲೆಗೆ…… ಎಂದು ತಡಕಾಡುವ ಹೊತ್ತು ಶುರುವಾಗಿದೆ.
ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮೇ 29 ರಂದು ಆರಂಭಗೊಳ್ಳುತ್ತಿದೆ. ಸುದೀರ್ಘ ರಜೆಯ ಬಳಿಕ ವಿದ್ಯಾರ್ಥಿಗಳು ಶಾಲೆಯ ಕಡೆಗೆ ಹೆಜ್ಜೆ ಹಾಕುತ್ತಿದ್ದಾರೆ. ಸರಕಾರಿ ಶಾಲೆಗಳಲ್ಲಿ ಮೇ 29ರಂದು ಪ್ರಾರಂಭೋತ್ಸವ ನಡೆಯಲಿದೆ. ಎಲ್ಲಾ ಶಾಲೆಗಳಲ್ಲೂ ಸ್ವಾಗತ ಕಾರ್ಯಕ್ರಮ ನಡೆಯಬೇಕು. ಇದಕ್ಕಾಗಿಯೇ ಶಾಲೆಯಲ್ಲಿ ಸಿದ್ಧತೆ ನಡೆಯಬೇಕು. ಶಾಲೆಗಳನ್ನು ತಳಿರು ತೋರಣ ಗಳಿಂದ ಸಿಂಗರಿಸಬೇಕು.
ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಪಠ್ಯಪುಸ್ತಕಗಳು ಉಚಿತವಾಗಿ ದೊರೆಯುತ್ತವೆ. ಸರಕಾರದಿಂದ ಈಗಾಗಲೇ ಶೇ.75ರಷ್ಟು ಪಠ್ಯಪುಸ್ತಕಗಳು ಸರಬರಾಜು ಆಗಿದ್ದು, ಶಾಲಾ ಆರಂಭೋತ್ಸವದಂದೇ ಪಠ್ಯ ಪುಸ್ತಕಗಳನ್ನು ಮಕ್ಕಳಿಗೆ ವಿತರಿಸಲು ಇಲಾಖೆ ಕ್ರಮ ಕೈಗೊಳ್ಳುತ್ತಿದೆ.
ಇದೆಲ್ಲಾ ಸರಿ. ಈ ಬಾರಿ ಮಳೆ ಇನ್ನೂ ಶುರುವಾಗಿಲ್ಲ. ಬಿಸಿಲಿನ ಕಾರಣದಿಂದ ಸೆಖೆಯಲ್ಲಿ ಕ್ಲಾಸಲ್ಲಿ ಕುಳಿತುಕೊಳ್ಳುವುದು ಹೇಗೆ ಎಂಬುದು ಹೆತ್ತವರ ತಲೆಬಿಸಿ. ವಿಪರೀತ ಬೆವರುತ್ತದೆ, ಹಿಂದೆಲ್ಲಾ ಆದಂತೆ ಜೂನ್ ಮೊದಲ ವಾರದಲ್ಲಿ ಶಾಲೆ ಪುನರಾರಂಭವಾದರೆ ಸಾಕಿತ್ತು ಎಂದು ಹೆತ್ತವರು ಹೇಳುತ್ತಾರೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…