ಮಂಗಳೂರು : ಉಡುಪಿ ಜಿಲ್ಲೆಯಲ್ಲಿ ಇಎಸ್ಐ ವತಿಯಿಂದ ಸುಸಜ್ಜಿತ ಆಸ್ಪತ್ರೆಯನ್ನು ತೆರೆಯುವ ಉದ್ದೇಶ ಹೊಂದಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಇಎಸ್ಐ ಯೋಜನೆಯಡಿ ಕಾರ್ಮಿಕರು ನೋಂದಾಯಿಸಿಕೊಳ್ಳಬೇಕಾಗುತ್ತದೆ.
ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುಮಾರು 30 ಸಾವಿರಕ್ಕೂ ಹೆಚ್ಚು ಗೋಡಂಬಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದು, ಇವರಿಗೆ ಇಎಸ್ಐ ಆಸ್ಪತ್ರೆ ಸೌಲಭ್ಯ ಕಲ್ಪಿಸಿಕೊಡುವಂತೆ ಲೋಕಸಭಾ ಸದಸ್ಯೆ ಶೋಭ ಕರಂದ್ಲಾಜೆ, ನಿರ್ದೇಶಿಸಿರುವುದರಿಂದ ಜನವರಿ 27 ರಿಂದ ಫೆಬ್ರವರಿ 10 ರ ವರೆಗೆ ಎಲ್ಲಾ ಕಾರ್ಮಿಕರನ್ನು ಇಎಸ್ಐ ವ್ಯಾಪ್ತಿಗೆ ಒಳಪಡಿಸಲು ಕಾರ್ಮಿಕ ಸಂಘಟನೆಗಳು, ಗೋಡಂಬಿ ಉದ್ದಿಮೆದಾರರ ಸಂಘ, ಸ್ವತಃ ಕಾರ್ಮಿಕರು, ಇಎಸ್ಐ ಅಧಿಕಾರಿಗಳು, ಕಾರ್ಮಿಕ ಇಲಾಖಾ ಅಧಿಕಾರಿಗಳು ಹಾಗೂ ಎಲ್ಲಾ ಭಾಗೀದಾರರು ಸಮರೋಪಾದಿಯಲ್ಲಿ ನೋಂದಣಿ ಕಾರ್ಯದಲ್ಲಿ ಭಾಗವಹಿಸುವಂತೆ ರಾಜ್ಯದ ಕಾರ್ಮಿಕ ಇಲಾಖೆಯ ಕಾರ್ಯದರ್ಶಿಗಳು ತಿಳಿಸಿರುತ್ತಾರೆ. ಎಲ್ಲಾ ಕಾರ್ಮಿಕರು ಇಎಸ್ಐ ಯೋಜನೆಯಲ್ಲಿ ನೋಂದಾಯಿಸಿ, ಸೌಲಭ್ಯಗಳನ್ನು ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಇಎಸ್ಐ ಕಚೇರಿ ಹಾಗೂ ಕಾರ್ಮಿಕ ಇಲಾಖೆಯನ್ನು ಸಂಪರ್ಕಿಸಲು ಸಹಾಯಕ ಕಾರ್ಮಿಕ ಆಯುಕ್ತರು, ಮಂಗಳೂರು ವಿಭಾಗ ಇವರ ಪ್ರಕಟಣೆ ತಿಳಿಸಿದೆ
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…