ಮಂಗಳೂರು : ಉಡುಪಿ ಜಿಲ್ಲೆಯಲ್ಲಿ ಇಎಸ್ಐ ವತಿಯಿಂದ ಸುಸಜ್ಜಿತ ಆಸ್ಪತ್ರೆಯನ್ನು ತೆರೆಯುವ ಉದ್ದೇಶ ಹೊಂದಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಇಎಸ್ಐ ಯೋಜನೆಯಡಿ ಕಾರ್ಮಿಕರು ನೋಂದಾಯಿಸಿಕೊಳ್ಳಬೇಕಾಗುತ್ತದೆ.
ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುಮಾರು 30 ಸಾವಿರಕ್ಕೂ ಹೆಚ್ಚು ಗೋಡಂಬಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದು, ಇವರಿಗೆ ಇಎಸ್ಐ ಆಸ್ಪತ್ರೆ ಸೌಲಭ್ಯ ಕಲ್ಪಿಸಿಕೊಡುವಂತೆ ಲೋಕಸಭಾ ಸದಸ್ಯೆ ಶೋಭ ಕರಂದ್ಲಾಜೆ, ನಿರ್ದೇಶಿಸಿರುವುದರಿಂದ ಜನವರಿ 27 ರಿಂದ ಫೆಬ್ರವರಿ 10 ರ ವರೆಗೆ ಎಲ್ಲಾ ಕಾರ್ಮಿಕರನ್ನು ಇಎಸ್ಐ ವ್ಯಾಪ್ತಿಗೆ ಒಳಪಡಿಸಲು ಕಾರ್ಮಿಕ ಸಂಘಟನೆಗಳು, ಗೋಡಂಬಿ ಉದ್ದಿಮೆದಾರರ ಸಂಘ, ಸ್ವತಃ ಕಾರ್ಮಿಕರು, ಇಎಸ್ಐ ಅಧಿಕಾರಿಗಳು, ಕಾರ್ಮಿಕ ಇಲಾಖಾ ಅಧಿಕಾರಿಗಳು ಹಾಗೂ ಎಲ್ಲಾ ಭಾಗೀದಾರರು ಸಮರೋಪಾದಿಯಲ್ಲಿ ನೋಂದಣಿ ಕಾರ್ಯದಲ್ಲಿ ಭಾಗವಹಿಸುವಂತೆ ರಾಜ್ಯದ ಕಾರ್ಮಿಕ ಇಲಾಖೆಯ ಕಾರ್ಯದರ್ಶಿಗಳು ತಿಳಿಸಿರುತ್ತಾರೆ. ಎಲ್ಲಾ ಕಾರ್ಮಿಕರು ಇಎಸ್ಐ ಯೋಜನೆಯಲ್ಲಿ ನೋಂದಾಯಿಸಿ, ಸೌಲಭ್ಯಗಳನ್ನು ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಇಎಸ್ಐ ಕಚೇರಿ ಹಾಗೂ ಕಾರ್ಮಿಕ ಇಲಾಖೆಯನ್ನು ಸಂಪರ್ಕಿಸಲು ಸಹಾಯಕ ಕಾರ್ಮಿಕ ಆಯುಕ್ತರು, ಮಂಗಳೂರು ವಿಭಾಗ ಇವರ ಪ್ರಕಟಣೆ ತಿಳಿಸಿದೆ
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…