Advertisement
ನಮ್ಮೂರ ಸುದ್ದಿ

ಇಡ್ಯಡ್ಕ ಶಾಲೆಯಲ್ಲಿ ಪರಿಸರ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮ

Share

ಕಾಣಿಯೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಇಡ್ಯಡ್ಕ ಶಾಲೆಯಲ್ಲಿ ಪರಿಸರ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮವು ಶಾಲಾ ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ನಡೆಯಿತು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಕೃಷಿ ಅಧಿಕಾರಿ ಉಮೇಶ ಬಿ ” ಪೂಜ್ಯ ಖಾವಂದರ ಆಶಯದಂತೆ ಪ್ರತಿಯೊಬ್ಬರು ತಿಂಗಳಿಗೊಂದರಂತೆ ಗಿಡಗಳನ್ನು ನೆಟ್ಟು ಪೋಷಿಸಬೇಕು” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕುಸುಮಾಧರ ಇಡ್ಯಡ್ಕ ವಹಿಸಿದ್ದರು.ವೇದಿಕೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸವಣೂರು ವಲಯ ಮೇಲ್ವಿಚಾರಕರಾದ ಅಶ್ವಿನಿ ಜೆ, ಗ್ರಾಮ ಪಂಚಾಯತ್ ಸದಸ್ಯರಾದ ದಿನೇಶ್ ಇಡ್ಯಡ್ಕ, ಕಾಣಿಯೂರು ಕ್ಲಸ್ಟರ್ ಸಿ ಆರ್ ಪಿ ಯಶೋದಾ ಎ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಚಾರ್ವಾಕ ಒಕ್ಕೂಟದ ಅಧ್ಯಕ್ಷ ಆನಂದ ಪೂಜಾರಿ ಗಾಳಿಬೆಟ್ಟು, ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಗೌಡ ಇಡ್ಯಡ್ಕ, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಚಾರ್ವಾಕ ಘಟಸಮಿತಿ ಅಧ್ಯಕ್ಷ ದಿನೇಶ್ ಐ ಕೆ, ಸೇವಾ ಪ್ರತಿನಿಧಿ ಕುಸುಮಾಧರ ಮರ್ಲಾಣಿ ಉಪಸ್ಥಿತರಿದ್ದರು.

ಶಾಲಾ ಮಕ್ಕಳು ಪ್ರಾರ್ಥಿಸಿದರು.ಸಹಶಿಕ್ಷಕಿ ಚಂದ್ರಿಕಾ ಸ್ವಾಗತಿಸಿ, ಅಕ್ಷತಾ ವಂದಿಸಿದರು.ಶಾಲಾ ಮುಖ್ಯ ಗುರು ಜಯಂತ ವೈ ಕಾರ್ಯಕ್ರಮ ನಿರೂಪಿಸಿದರು.ಇದೇ ಸಂದರ್ಭದಲ್ಲಿ ಮಕ್ಕಳಿಗೆ ಗಿಡಗಳನ್ನು ವಿತರಣೆ ಮಾಡಲಾಯಿತು. ಧರ್ಣಪ್ಪ ಗೌಡ ಪತ್ತನೆಜಾಲ್, ರಮೇಶ್ ಇಡ್ಯಡ್ಕ,ಲಕ್ಷ್ಮ ಣ ಗೌಡ ಐ ಕೆ, ಪದ್ಮನಾಭ ಕೀಲೆ, ಬಾಲಕೃಷ್ಣ ಕೀಲೆ, ಗೀತಾ ಎಂ ಎ, ಅಂಗನವಾಡಿ ಕಾರ್ಯಕರ್ತೆ ವೇದಾವತಿ,ಲಕ್ಷ್ಮಣ ಕೂಡಿಗೆ ಶಾಲಾ ನಾಯಕ ಶಿವಜಿತ್ ವೈ ಜೆ ಅತಿಥಿಗಳನ್ನು ತಾಂಬೂಲ ನೀಡಿ ತಾಂಬೂಲ ನೀಡಿ ಸ್ವಾಗತಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗುತ್ತಿದೆಯೇ..? – ಜೂನ್ 15 ಬಳಿಕ ಹಲವು ಭಾಗಗಳಲ್ಲಿ ಮಳೆ ಇಳಿಮುಖ ಸಾಧ್ಯತೆ

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…

6 hours ago

ಭಾರತದಲ್ಲಿ ಬಯೋ-ಕಾಂಪೋಸಿಟ್ ಕ್ರಾಂತಿ – ಅರಣ್ಯ ನಾಶವಿಲ್ಲದೇ ಕಟ್ಟಡ ನಿರ್ಮಾಣಕ್ಕೆ ಹೊಸ ದಾರಿ

ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…

8 hours ago

ಅಡಿಕೆಯಿಂದ ಸಾಂಸ್ಕೃತಿಕ ಉದ್ಯಮದವರೆಗೆ – ವಿಯೆಟ್ನಾಂನ ಹೊಸ ಪ್ರಯೋಗ ರೈತರಿಗೆ ಮಾದರಿಯಾಗಬಹುದೇ..?

ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…

12 hours ago

ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು

ಝಾರ್ಖಂಡ್‌ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…

23 hours ago