Advertisement
MIRROR FOCUS

ಇತಿಹಾಸದ ಹೆಗ್ಗುರುತು ಬೋಗಾಯನ ಕೆರೆಯೂ ಬಿಸಿಲ ಬೇಗೆಗೆ ಬರಡಾಯಿತು..!

Share

ಸುಳ್ಯ:   ಬಳ್ಪದ ಬೋಗಾಯನ ಕೆರೆಯು ನಮ್ಮ ಇತಿಹಾಸದ ಒಂದು ಭಾಗ. ಇತಿಹಾಸದ ಗತ ವೈಭವವನ್ನು ಸಾರಿ ಹೇಳುವ ಈ ಕೆರೆಯಲ್ಲಿ ನೀರು ಬತ್ತಿದ ಇತಿಹಾಸವಿಲ್ಲ. ಆದರೆ ಈ ಬಾರಿಯ ಕಡು ಬೇಸಿಗೆಗೆ ಸಿಲುಕಿ ಭೂಮಿ ಬೆಂದು ಬಸವಳಿದಾಗ ಬೋಗಾಯನ ಕೆರೆಯೂ ಬರಡಾಯಿತು. ಕಡು ಬೇಸಿಗೆಯಲ್ಲೂ ಸಮೃದ್ಧ ನೀರು ತುಂಬಿ ನಳ ನಳಿಸುತ್ತಿದ್ದ ಬೋಗಾಯನ ಕೆರೆಯು ಈ ಬೇಸಿಗೆಯಲ್ಲಿ ಬರಡು ಬಂಜರವಾಗಿ ಹೋಗಿತ್ತು. ಮುಂಗಾರು ಗಟ್ಟಿಗೊಳ್ಳದ ಕಾರಣ ಕೆರೆಯ ಜಲ ಸಮೃದ್ಧಿ ಮರಳಿ ಬಂದಿಲ್ಲ.

ಈ ಸುದ್ದಿಯನ್ನು  ನಾವು ನೆಗೆಟಿವ್ ಆಗಿ ಬಿತ್ತುತ್ತಿಲ್ಲ, ಬದಲಾಗಿ ನಾವೆಷ್ಟು ಜಾಗೃತಿಯಾಗಬೇಕಿದೆ ಎಂಬುದರ ಬಗ್ಗೆ ತಿಳಿಯಬೇಕಿದೆ.

Advertisement

ಬಳ್ಪ ಗ್ರಾಮಕ್ಕೆ ಆಗಮಿಸಿದರೆ ಇಲ್ಲಿರುವ ಇತಿಹಾಸ ಪ್ರಸಿದ್ಧ ಬೋಗಾಯನ ಕೆರೆ ಗಮನ ಸೆಳೆಯುತ್ತದೆ. ಐತಿಹಾಸಿಕ ಹಿನ್ನಲೆಯುಳ್ಳ ಬಳ್ಪಕ್ಕೆ ಮುಕುಟಪ್ರಾಯವಾಗಿ ಹಲವು ಶತಮಾನಗಳ ಇತಿಹಾಸವಿರುವ ಬೋಗಾಯನ ಕೆರೆ ಕಂಗೊಳಿಸುತಿದೆ.
ಅದರೆ ಗತ ವೈಭವವನ್ನು ಸಾರುತ್ತಾ ವಿಶಾಲವಾಗಿ ಹರಡಿರುವ ಕೆರೆಯು ಇಂದು ನಾಶದೆಡೆಗೆ ಮುಖ ಮಾಡಿದ್ದು ತುರ್ತು ಕಾಯಕಲ್ಪಕ್ಕಾಗಿ ಕಾದಿದೆ.
ಮಂಜೇಶ್ವರ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬದಿಯಲ್ಲಿ ಬಳ್ಪ ಗ್ರಾಮ ಕೇಂದ್ರದಿಂದ ಅಲ್ಪ ದೂರದಲ್ಲಿ ಹಚ್ಚ ಹಸಿರು ವನರಾಶಿಯ ಮಧ್ಯೆ ಬೋಗಾಯನ ಕೆರೆ ಇದೆ. ಸುಮಾರು ಒಂದೂವರೆ ಎಕ್ರೆಯಷ್ಟು ವ್ಯಾಪ್ತಿಯಲ್ಲಿರುವ ಕೆರೆಯಲ್ಲಿ ವರ್ಷಪೂರ್ತಿ ನೀರು ತುಂಬಿರುತ್ತದೆ. ಆದರೆ ಈ ಬೇಸಿಗೆ ಮಾತ್ರ ಬೋಗಾಯನ ಕೆರೆಗೂ ಬರಗಾಲ ತಂದಿತ್ತು. ಮಳೆಗಾಲದಲ್ಲಿ ಕೆರೆ ತುಂಬಿ ಹರಿಯುತ್ತದೆ, ಜೊತೆಗೆ ಬಳ್ಪ ರಕ್ಷಿತಾರಣ್ಯ ಮತ್ತಿತರ ಕಡೆಗಳಿಂದ ಹರಿದು ಬರುವ ನೀರು ಕೆರೆಯಲ್ಲಿ ಸೇರಿಕೊಳ್ಳುತ್ತದೆ. ಸುಮಾರು 30 ಅಡಿಗಿಂತಲೂ ಹೆಚ್ಚು ಆಳವಿರುವ ಕೆರೆ ಈಗ ಪೂರ್ತಿ ಹೂಳು, ಕೆಸರು, ಪಾಚಿ ತುಂಬಿ ವಿನಾಶದ ಅಂಚಿನಲ್ಲಿದೆ. ಈ ಬಾರಿಯಂತೂ ನೀರೆ ಇಲ್ಲದ ಕೆರೆಯ ದೃಶ್ಯ ನೋಡುಗರಲ್ಲಿ ವಿಷಾದ ಭಾವ ತರುತ್ತಿತ್ತು. ಒಂದು ಕಾಲದಲ್ಲಿ ಇಡೀ ನಾಡಿಗೆ ನೀರುಣಿಸುತ್ತಿದ್ದ ಕೆರೆಯು ಇಂದು ನಿರುಪಯುಕ್ತವಾಗಿದೆ. ವರುಷ ಕಳೆದಂತೆ ಕೆರೆಯು ತನ್ನ ಜೀವ ಕಳೆ ಕಳೆದುಕೊಳ್ಳುತಿದೆ.

ಇತಿಹಾಸದ ಪುಟದಿಂದ:
ಸುಮಾರು ಏಳು ಶತಮಾನಗಳ ಹಿಂದೆ ವಿಜಯನಗರದ ಅರಸರು ಈ ಕೆರೆಯನ್ನು ನಿರ್ಮಿಸಿದ್ದರು ಎಂದು ಅಂದಾಜಿಸಲಾಗಿದೆ. ವಿಜಯನಗರದ ಅರಸರ ಕಾಲದಲ್ಲಿ ಶ್ರೀಮಂತವಾಗಿದ್ದ ನಾಡಿನ ವಿಶಾಲವಾದ ಭತ್ತದ ಗದ್ದೆಗಳಿಗೆ ನೀರುಣಿಸುವ ಆಶ್ರಯ ತಾಣವಾಗಿತ್ತು ಈ ಕೆರೆ. ಈ ಕೆರೆಯನ್ನು ಬೋಗರಾಯ ಅರಸು ಕಟ್ಟಿಸಿದನೆಂದು ಐತಿಹ್ಯವಿದೆ. ಆದ್ದರಿಂದ ಇದಕ್ಕೆ `ಬೋಗರಾಯನ ಕೆರೆ’ ಎಂಬ ಹೆಸರು ಬಂತು. ಬಳಿಕ ಅದು ಬೋಗಾಯನ ಕೆರೆ ಎಂದಾಯಿತು ಎಂದು ಸ್ಥಳೀಯರು ಹೇಳುತ್ತಾರೆ. ಹಿಂದೆ ಸುಮಾರು ಎಂಟು ಎಕ್ರೆಯಷ್ಟು ವಿಶಾಲವಾಗಿದ್ದ ಕೆರೆ ಇಡೀ ನಾಡಿಗೆ ನೀರುಣಿಸುತ್ತಿತ್ತು. ಅಂದು ಕೆರೆಯ ಒಂದು ತುದಿಯಿಂದ ನೋಡಿದರೆ ಇನ್ನೊಂದು ತುದಿಗೆ ದೃಷ್ಠಿ ತಲುಪುತ್ತಿರಲಿಲ್ಲ ಎಂದು ಹಿರಿಯರು ನೆನಪಿಸುತ್ತಾರೆ. ಆದರೆ ಕ್ರಮೇಣ ಕೆರೆ ನಾಶವಾಗುತ್ತಾ ಬಂದಿದೆ. ಈಗ ಕೆರೆ ಪೂರ್ತಿ ಹೂಳು ತುಂಬಿದೆ. ಮಣ್ಣು ಕುಸಿದು ಬಿದ್ದು ಕೆರೆಯ ವಿಸ್ತೀರ್ಣ ಕಡಿಮೆಯಾಗುತ್ತಾ ಬಂದು ಕುಬ್ಜವಾಗಿದೆ.

Advertisement

 

Advertisement

ಏನು ಅಭಿವೃದ್ಧಿ ಮಾಡಬಹುದು:

ಸಂಬಂಧಪಟ್ಟವರು ಮನಸ್ಸು ಮಾಡಿದರೆ ಬೋಗಾಯನ ಕೆರೆಯನ್ನು ಅಭಿವೃದ್ಧಿಪಡಿಸಿ ಒಂದು ಅದ್ಭುತ ಪ್ರವಾಸೀ ಕೇಂದ್ರವಾಗಿಸಬಹುದು ಎಂಬುದು ಬಳ್ಪದ ಜನತೆಯ ಆಶಯ. ಬಳ್ಪ ಗ್ರಾಮವನ್ನು ಸಂಸದರ ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ದತ್ತು ಪಡೆದಿರುವುದರಿಂದ ಆದರ್ಶ ಗ್ರಾಮವಾಗುವುದರ ಜೊತೆಗೆ ಬೋಗಾಯನ ಕೆರೆಗೂ ಕಾಯಕಲ್ಪ ದೊರೆಯಬಹುದು ಎಂಬ ನಿರೀಕ್ಷೆ ಜನರದ್ದು. ಕೆರೆಯ ಹೂಳನ್ನು ಎತ್ತಿ, ಪಾಚಿ ಮತ್ತಿತರ ಕಲ್ಮಶಗಳನ್ನು ತೆಗೆದು ಕೆರೆಯನ್ನು ಶುದ್ದೀಕರಿಸಬೇಕು. ಕೆರೆಯನ್ನು ಸಾಧ್ಯವಾದಷ್ಟು ಅಗಲೀಕರಣ ಮಾಡಿ ಸುತ್ತಲೂ ರಕ್ಷಣಾ ಬೇಲಿ ನಿರ್ಮಿಸಿ ಪ್ರವಾಸಿಗರಿಗೆ ಬೋಟಿಂಗ್ ಮತ್ತಿತರ ವ್ಯವಸ್ಥೆಯನ್ನು ಕಲ್ಪಿಸಬಹುದು. ಸುತ್ತಲೂ ಗಾರ್ಡನ್ ನಿರ್ಮಿಸಿ ಪಾರ್ಕ್ ಮಾಡಿದಲ್ಲಿ ನಾಡಿನ ಪರಂಪರೆಯ ಹೆಗ್ಗುರುತಾಗಿರುವ ಬೋಗಾಯನ ಕೆರೆಯನ್ನು ಶಾಶ್ವತವಾಗಿ ಸಂರಕ್ಷಿಸುವುದರ ಜೊತೆಗೆ ಉತ್ತಮ ಪ್ರವಾಸೀ ತಾಣವಾಗಿ ಮಾರ್ಪಾಡಾಗಿಸಬಹುದು ಎಂಬುದು ಸಾರ್ವಜನಿಕರ ಆಶಯ.
ಹಚ್ಚ ಹಸಿರ ಪ್ರಕೃತಿ ಸಿರಿಯ ಮಧ್ಯೆ ಇರುವ ಅಪರೂಪದ ಬೋಗಾಯನ ಕೆರೆಯನ್ನು ಅಭಿವೃದ್ಧಿ ಪಡಿಸಿದಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗುವ ದಾರಿ ಮಧ್ಯೆ ಒಂದು ಉತ್ತಮ `ಪಿಕ್‍ನಿಕ್ ಪಾಯಿಂಟ್’ ಆಗಬಹುದು.

Advertisement

ಅಲ್ಲದೆ ಈಗ ಕಾಡಿನಿಂದ ಮತ್ತಿತರ ಕಡೆಗಳಿಂದ ಕೆಸರು ನೀರು ಹರಿದು ಬಂದು ಕೆರೆಗೆ ಸೇರುವುದನ್ನು ತಡೆದು, ಒರತೆ ನೀರು ಮಾತ್ರ ಕೆರೆಯಲ್ಲಿ ಶೇಖರಣೆಯಾಗಬೇಕು. ಹಾಗಾದರೆ ಕೆರೆಯ ನೀರನ್ನು ಕೃಷಿ ಮತ್ತಿತರ ಅಗತ್ಯತೆಗಳಿಗೆ ಬಳಕೆ ಮಾಡಬಹುದು. ಎಲ್ಲಕ್ಕಿಂತ ಮುಖ್ಯವಾಗಿ ಕೆರೆಯ ನೀರು ಭೂಮಿಗೆ ಇಂಗಿ ಸಮೀಪದ ಹತ್ತಾರು ಎಕ್ರೆ ಭೂಪ್ರದೇಶ ಜಲಸಮೃದ್ಧವಾಗಲು ಸಹಾಯಕವಾಗಬಹುದು. ಮೀನುಗಳನ್ನು ಸಾಕಿ, ಪ್ರದೇಶದಲ್ಲಿ ಮತ್ಸ್ಯೋದ್ಯಮವನ್ನು ಬೆಳೆಸಲು ಕೆರೆ ಪೂರಕವಾಗಿದೆ. ಗ್ರಾಮದ ಎತ್ತರದ ಭಾಗದಲ್ಲಿರುವ ಕೆರೆಯಿಂದ ನೀರನ್ನು ಇಡೀ ಗ್ರಾಮಕ್ಕೆ ಸಲೀಸಾಗಿ ಬಳಸಬಹುದು. ಹಲವು ವರ್ಷಗಳ ಹಿಂದೆ ಬೋಗಾಯನ ಕೆರೆಯನ್ನು ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗಿದ್ದರೂ ಅದು ಕೈಗೂಡಿಲ್ಲ. ಬೋಗಾಯನ ಕೆರೆಯನ್ನು ಅಭಿವೃದ್ಧಿ ಪಡಿಸಬೇಕೆಂದು ಸಂಬಂಧಪಟ್ಟವರನ್ನು ಜನತೆ ಒತ್ತಾಯಿಸುತ್ತಲೇ ಬಂದಿದ್ದಾರೆ.

ಕೆರೆ ಅಭಿವೃದ್ಧಿಗೆ ಅನುದಾನ: ನಳಿನ್‍ಕುಮಾರ್ ಕಟೀಲ್

Advertisement

ಬೋಗಾಯನ ಕೆರೆಯನ್ನು ಅಭಿವೃದ್ಧಿಪಡಿಸಬೇಕೆಂಬ ಕನಸು ಮತ್ತು ಬೇಡಿಕೆ ಹಲವು ವರ್ಷಗಳಿಂದ ಇದೆ. ಇದೀಗ ಕೆರೆಯ ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗಿದೆ. ಚುನಾವಣೆ ಇದ್ದ ಕಾರಣ ಟೆಂಡರ್ ಪ್ರಕ್ರಿಯೆ ವಿಳಂಬವಾಗಿತ್ತು. ಮುಂದಿನ ದಿನಗಳಲ್ಲಿ ಕೆರೆಯ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಸಂಸದ ನಳಿನ್‍ಕುಮಾರ್ ಕಟೀಲ್ ಹೇಳಿದ್ದಾರೆ. ಸಂಸದರು ಆದರ್ಶ ಗ್ರಾಮವಾಗಿ ಆಯ್ಕೆ ಮಾಡಿರುವ ದೇವಾಲಯಗಳ ನಾಡಾದ ಬಳ್ಪಕ್ಕೆ ಮುಕುಟ ಪ್ರಾಯವಾಗಿರುವ ಬೋಗಾಯನ ಕೆರೆಯೂ ಅಭಿವೃದ್ಧಿಯಾದರೆ ಆದರ್ಶ ಗ್ರಾಮಕ್ಕೆ ಇನ್ನಷ್ಟು ಮೆರುಗು ತರಬಹುದು.

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago