ಇದು ‘ಕುಂಡಿಗೆ’ ಆಮಂತ್ರಣ..! , ಇದು ಆಂದೋಳನದ ಭಾಗ

May 4, 2019
7:00 AM

ಪುತ್ತೂರು: ಒಂದು ಆಂದೋಳನವು ಬದುಕಿನ ಭಾಗವಾದಾಗ ಅದು ಅನುಭವವಾಗುತ್ತದೆ, ಅನುಭಾವವಾಗುತ್ತದೆ. ಬದುಕಿನ ಭಾಗವಾಗುವ ಆಂದೋಳನಗಳಲ್ಲಿ ಹೋರಾಟದ ಕಿಚ್ಚಿಲ್ಲ, ಬಣ್ಣಗಳಿಲ್ಲ, ಧ್ವಜಗಳಿಲ್ಲ, ಘೋಷಣೆಗಳಿಲ್ಲ. ಅಲ್ಲಿರುವುದು ಸಾತ್ವಿಕತೆ ಒಂದೇ!

ಬಂಟ್ವಾಳ ತಾಲೂಕಿನ ಕೇಪು ಉಬರು ‘ಹಲಸು ಸ್ನೇಹಿ ಕೂಟ’ವು ದಶಕದೀಚೆಗೆ ಊಟದ ಬಟ್ಟಲನ್ನು ವಿಷಮುಕ್ತಗೊಳಿಸುವ ಆಂದೋಳನವನ್ನು ಸದ್ದಿಲ್ಲದೆ ಮಾಡಿದೆ, ಮಾಡುತ್ತಿದೆ. ಕೂಟದ ತೆಕ್ಕೆಗೆ ಬಂದ ಕುಟುಂಬಗಳ ಊಟದ ಮೇಜುಗಳಲ್ಲಿ ಸಾವಯವ ಉತ್ಪನ್ನಗಳಿಗೆ ಸ್ಥಾನ, ಮಾನ. ಹಲಸು, ಮಾವು, ಸಿರಿಧಾನ್ಯ, ತರಕಾರಿ, ಸೊಪ್ಪು.. ಹೀಗೆ ಅನ್ಯಾನ್ಯ ಒಳಸುರಿಗಳು ಖಾದ್ಯಗಳ ಮೂಲವಸ್ತುಗಳು.
ತರಬೇತಿ, ಪ್ರಾತ್ಯಕ್ಷಿಕೆ, ಮೇಳ ಮೊದಲಾದ ಪ್ರಕ್ರಿಯೆಗಳಿಂದ ಹಲಸು ಸ್ನೇಹಿ ಕೂಟವು ಸುಮನಸಿಗರ ಒಂದು ತಂಡವಾಗಿ ರೂಪುಗೊಂಡಿದೆ. ಹಸಿರು ಎನ್ನುವುದು ಕೇವಲ ಪ್ರಕೃತಿ, ಆಹಾರ ಇಷ್ಟಕ್ಕೆ ಸೀಮಿತವಾಗಿಲ್ಲ. ಅದರ ಅರಿವನ್ನು ಬಿಂಬಿಸುವ ಹಲವಾರು ‘ಕೆಣಿ’ಗಳನ್ನೂ ಅನುಷ್ಠಾನಗೊಳಿಸಿದೆ. ಈ ರೀತಿಯ ಕೆಣಿಗಳು ಮನದೊಳಗೆ ಗಾಢವಾಗಿ ಇಳಿದ ಪರಿಣಾಮಗಳ ಫಲಿತಾಂಶ ಇಲ್ಲಿದೆ ನೋಡಿ.


ಇದು ರಾಧಾಕೃಷ್ಣ ಶರ್ಮ ಮುಳಿಯ ಇವರ ವಿವಾಹದ ಆಮಂತ್ರಣ. ಬಾಳೆಯ ಕುಂಡಿಗೆಯ (ಪೂಂಬೆ) ದಳಗಳಾಕೃತಿಯ ವಿನ್ಯಾಸ. ಮೂರು ಎಸಳುಗಳ ಆರು ಪುಟಗಳಲ್ಲಿ ಮದುವೆಯ ವಿವರಗಳು. ಬಂಟ್ವಾಳದ ಕಲಾವಿದ ಮೌನೀಶ ಮಲ್ಯರ ವಿನ್ಯಾಸ. ಅಧ್ಯಾಪಕ ಅರವಿಂದ ಕುಡ್ಲರ ಸಂಯೋಜನೆ. ಮುಳಿಯ ಶರ್ಮ ಮನೆಮಂದಿಯ ಕಲ್ಪನೆ.
ಫಕ್ಕನೆ ಮೇಲ್ನೋಟಕ್ಕೆ ನೋಡುವಾಗ ಆಮಂತ್ರಣ ಪತ್ರಿಕೆಯ ವಿನ್ಯಾಸದಲ್ಲಿ ಹೊಸತು ಕಾಣದಿರಬಹುದು. ಆದರೆ ಹಸಿರು, ಕೃಷಿಯು ಮನದೊಳಗೆ ಇಳಿದು ‘ನಾವು ಅದೇ’ ಆದಾಗ ಇಂತಹ ಯೋಚನೆಗಳು, ಯೋಚನೆಗಳು ರೂಪುಗೊಳ್ಳುತ್ತವೆ.
ರಾಧಾಕೃಷ್ಣರ ತಂದೆ ಮುಳಿಯ ವೆಂಕಟಕೃಷ್ಣ ಶರ್ಮ. ಇವರು ತಮ್ಮ ಹಿರಿಯ ಮಗನ ವಿವಾಹದ ಆಮಂತ್ರಣವನ್ನು ಹಲಸಿನ ವಿನ್ಯಾಸದಲ್ಲಿ ಅಚ್ಚು ಹಾಕಿಸಿದ್ದರು. ಈ ಮೂಲಕವಾದರೂ ಹಲಸು, ಕುಂಡಿಗೆಗಳು ಮತ್ತೊಮ್ಮೆ ಅನ್ನದ ಬಟ್ಟಲಲ್ಲಿ ಸ್ಥಾನ ಪಡೆದುಕೊಳ್ಳಲಿ, ಅಲ್ವಾ.


ಇಂತಹ ಆಮಂತ್ರಣ ಪತ್ರಿಕೆಯನ್ನು ಒಂದು ಕಲೆಯಾಗಿ, ಆಂದೋಳನದ ಉಪಾಧಿಯಾಗಿ ನೋಡುವ ಮನಸ್ಸುಗಳು ಬೇಕಾಗಿವೆ!

( ನಿರೂಪಣೆ : ನಾ.ಕಾರಂತ ಪೆರಾಜೆ )

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ
ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ
August 3, 2026
8:43 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror