Advertisement
MIRROR FOCUS

ಇದು ‘ಕುಂಡಿಗೆ’ ಆಮಂತ್ರಣ..! , ಇದು ಆಂದೋಳನದ ಭಾಗ

Share

ಪುತ್ತೂರು: ಒಂದು ಆಂದೋಳನವು ಬದುಕಿನ ಭಾಗವಾದಾಗ ಅದು ಅನುಭವವಾಗುತ್ತದೆ, ಅನುಭಾವವಾಗುತ್ತದೆ. ಬದುಕಿನ ಭಾಗವಾಗುವ ಆಂದೋಳನಗಳಲ್ಲಿ ಹೋರಾಟದ ಕಿಚ್ಚಿಲ್ಲ, ಬಣ್ಣಗಳಿಲ್ಲ, ಧ್ವಜಗಳಿಲ್ಲ, ಘೋಷಣೆಗಳಿಲ್ಲ. ಅಲ್ಲಿರುವುದು ಸಾತ್ವಿಕತೆ ಒಂದೇ!

ಬಂಟ್ವಾಳ ತಾಲೂಕಿನ ಕೇಪು ಉಬರು ‘ಹಲಸು ಸ್ನೇಹಿ ಕೂಟ’ವು ದಶಕದೀಚೆಗೆ ಊಟದ ಬಟ್ಟಲನ್ನು ವಿಷಮುಕ್ತಗೊಳಿಸುವ ಆಂದೋಳನವನ್ನು ಸದ್ದಿಲ್ಲದೆ ಮಾಡಿದೆ, ಮಾಡುತ್ತಿದೆ. ಕೂಟದ ತೆಕ್ಕೆಗೆ ಬಂದ ಕುಟುಂಬಗಳ ಊಟದ ಮೇಜುಗಳಲ್ಲಿ ಸಾವಯವ ಉತ್ಪನ್ನಗಳಿಗೆ ಸ್ಥಾನ, ಮಾನ. ಹಲಸು, ಮಾವು, ಸಿರಿಧಾನ್ಯ, ತರಕಾರಿ, ಸೊಪ್ಪು.. ಹೀಗೆ ಅನ್ಯಾನ್ಯ ಒಳಸುರಿಗಳು ಖಾದ್ಯಗಳ ಮೂಲವಸ್ತುಗಳು.
ತರಬೇತಿ, ಪ್ರಾತ್ಯಕ್ಷಿಕೆ, ಮೇಳ ಮೊದಲಾದ ಪ್ರಕ್ರಿಯೆಗಳಿಂದ ಹಲಸು ಸ್ನೇಹಿ ಕೂಟವು ಸುಮನಸಿಗರ ಒಂದು ತಂಡವಾಗಿ ರೂಪುಗೊಂಡಿದೆ. ಹಸಿರು ಎನ್ನುವುದು ಕೇವಲ ಪ್ರಕೃತಿ, ಆಹಾರ ಇಷ್ಟಕ್ಕೆ ಸೀಮಿತವಾಗಿಲ್ಲ. ಅದರ ಅರಿವನ್ನು ಬಿಂಬಿಸುವ ಹಲವಾರು ‘ಕೆಣಿ’ಗಳನ್ನೂ ಅನುಷ್ಠಾನಗೊಳಿಸಿದೆ. ಈ ರೀತಿಯ ಕೆಣಿಗಳು ಮನದೊಳಗೆ ಗಾಢವಾಗಿ ಇಳಿದ ಪರಿಣಾಮಗಳ ಫಲಿತಾಂಶ ಇಲ್ಲಿದೆ ನೋಡಿ.


ಇದು ರಾಧಾಕೃಷ್ಣ ಶರ್ಮ ಮುಳಿಯ ಇವರ ವಿವಾಹದ ಆಮಂತ್ರಣ. ಬಾಳೆಯ ಕುಂಡಿಗೆಯ (ಪೂಂಬೆ) ದಳಗಳಾಕೃತಿಯ ವಿನ್ಯಾಸ. ಮೂರು ಎಸಳುಗಳ ಆರು ಪುಟಗಳಲ್ಲಿ ಮದುವೆಯ ವಿವರಗಳು. ಬಂಟ್ವಾಳದ ಕಲಾವಿದ ಮೌನೀಶ ಮಲ್ಯರ ವಿನ್ಯಾಸ. ಅಧ್ಯಾಪಕ ಅರವಿಂದ ಕುಡ್ಲರ ಸಂಯೋಜನೆ. ಮುಳಿಯ ಶರ್ಮ ಮನೆಮಂದಿಯ ಕಲ್ಪನೆ.
ಫಕ್ಕನೆ ಮೇಲ್ನೋಟಕ್ಕೆ ನೋಡುವಾಗ ಆಮಂತ್ರಣ ಪತ್ರಿಕೆಯ ವಿನ್ಯಾಸದಲ್ಲಿ ಹೊಸತು ಕಾಣದಿರಬಹುದು. ಆದರೆ ಹಸಿರು, ಕೃಷಿಯು ಮನದೊಳಗೆ ಇಳಿದು ‘ನಾವು ಅದೇ’ ಆದಾಗ ಇಂತಹ ಯೋಚನೆಗಳು, ಯೋಚನೆಗಳು ರೂಪುಗೊಳ್ಳುತ್ತವೆ.
ರಾಧಾಕೃಷ್ಣರ ತಂದೆ ಮುಳಿಯ ವೆಂಕಟಕೃಷ್ಣ ಶರ್ಮ. ಇವರು ತಮ್ಮ ಹಿರಿಯ ಮಗನ ವಿವಾಹದ ಆಮಂತ್ರಣವನ್ನು ಹಲಸಿನ ವಿನ್ಯಾಸದಲ್ಲಿ ಅಚ್ಚು ಹಾಕಿಸಿದ್ದರು. ಈ ಮೂಲಕವಾದರೂ ಹಲಸು, ಕುಂಡಿಗೆಗಳು ಮತ್ತೊಮ್ಮೆ ಅನ್ನದ ಬಟ್ಟಲಲ್ಲಿ ಸ್ಥಾನ ಪಡೆದುಕೊಳ್ಳಲಿ, ಅಲ್ವಾ.


ಇಂತಹ ಆಮಂತ್ರಣ ಪತ್ರಿಕೆಯನ್ನು ಒಂದು ಕಲೆಯಾಗಿ, ಆಂದೋಳನದ ಉಪಾಧಿಯಾಗಿ ನೋಡುವ ಮನಸ್ಸುಗಳು ಬೇಕಾಗಿವೆ!

( ನಿರೂಪಣೆ : ನಾ.ಕಾರಂತ ಪೆರಾಜೆ )

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

3 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

8 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

19 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

24 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

1 day ago