Advertisement
MIRROR FOCUS

ಇದು ‘ಕುಂಡಿಗೆ’ ಆಮಂತ್ರಣ..! , ಇದು ಆಂದೋಳನದ ಭಾಗ

Share

ಪುತ್ತೂರು: ಒಂದು ಆಂದೋಳನವು ಬದುಕಿನ ಭಾಗವಾದಾಗ ಅದು ಅನುಭವವಾಗುತ್ತದೆ, ಅನುಭಾವವಾಗುತ್ತದೆ. ಬದುಕಿನ ಭಾಗವಾಗುವ ಆಂದೋಳನಗಳಲ್ಲಿ ಹೋರಾಟದ ಕಿಚ್ಚಿಲ್ಲ, ಬಣ್ಣಗಳಿಲ್ಲ, ಧ್ವಜಗಳಿಲ್ಲ, ಘೋಷಣೆಗಳಿಲ್ಲ. ಅಲ್ಲಿರುವುದು ಸಾತ್ವಿಕತೆ ಒಂದೇ!

ಬಂಟ್ವಾಳ ತಾಲೂಕಿನ ಕೇಪು ಉಬರು ‘ಹಲಸು ಸ್ನೇಹಿ ಕೂಟ’ವು ದಶಕದೀಚೆಗೆ ಊಟದ ಬಟ್ಟಲನ್ನು ವಿಷಮುಕ್ತಗೊಳಿಸುವ ಆಂದೋಳನವನ್ನು ಸದ್ದಿಲ್ಲದೆ ಮಾಡಿದೆ, ಮಾಡುತ್ತಿದೆ. ಕೂಟದ ತೆಕ್ಕೆಗೆ ಬಂದ ಕುಟುಂಬಗಳ ಊಟದ ಮೇಜುಗಳಲ್ಲಿ ಸಾವಯವ ಉತ್ಪನ್ನಗಳಿಗೆ ಸ್ಥಾನ, ಮಾನ. ಹಲಸು, ಮಾವು, ಸಿರಿಧಾನ್ಯ, ತರಕಾರಿ, ಸೊಪ್ಪು.. ಹೀಗೆ ಅನ್ಯಾನ್ಯ ಒಳಸುರಿಗಳು ಖಾದ್ಯಗಳ ಮೂಲವಸ್ತುಗಳು.
ತರಬೇತಿ, ಪ್ರಾತ್ಯಕ್ಷಿಕೆ, ಮೇಳ ಮೊದಲಾದ ಪ್ರಕ್ರಿಯೆಗಳಿಂದ ಹಲಸು ಸ್ನೇಹಿ ಕೂಟವು ಸುಮನಸಿಗರ ಒಂದು ತಂಡವಾಗಿ ರೂಪುಗೊಂಡಿದೆ. ಹಸಿರು ಎನ್ನುವುದು ಕೇವಲ ಪ್ರಕೃತಿ, ಆಹಾರ ಇಷ್ಟಕ್ಕೆ ಸೀಮಿತವಾಗಿಲ್ಲ. ಅದರ ಅರಿವನ್ನು ಬಿಂಬಿಸುವ ಹಲವಾರು ‘ಕೆಣಿ’ಗಳನ್ನೂ ಅನುಷ್ಠಾನಗೊಳಿಸಿದೆ. ಈ ರೀತಿಯ ಕೆಣಿಗಳು ಮನದೊಳಗೆ ಗಾಢವಾಗಿ ಇಳಿದ ಪರಿಣಾಮಗಳ ಫಲಿತಾಂಶ ಇಲ್ಲಿದೆ ನೋಡಿ.


ಇದು ರಾಧಾಕೃಷ್ಣ ಶರ್ಮ ಮುಳಿಯ ಇವರ ವಿವಾಹದ ಆಮಂತ್ರಣ. ಬಾಳೆಯ ಕುಂಡಿಗೆಯ (ಪೂಂಬೆ) ದಳಗಳಾಕೃತಿಯ ವಿನ್ಯಾಸ. ಮೂರು ಎಸಳುಗಳ ಆರು ಪುಟಗಳಲ್ಲಿ ಮದುವೆಯ ವಿವರಗಳು. ಬಂಟ್ವಾಳದ ಕಲಾವಿದ ಮೌನೀಶ ಮಲ್ಯರ ವಿನ್ಯಾಸ. ಅಧ್ಯಾಪಕ ಅರವಿಂದ ಕುಡ್ಲರ ಸಂಯೋಜನೆ. ಮುಳಿಯ ಶರ್ಮ ಮನೆಮಂದಿಯ ಕಲ್ಪನೆ.
ಫಕ್ಕನೆ ಮೇಲ್ನೋಟಕ್ಕೆ ನೋಡುವಾಗ ಆಮಂತ್ರಣ ಪತ್ರಿಕೆಯ ವಿನ್ಯಾಸದಲ್ಲಿ ಹೊಸತು ಕಾಣದಿರಬಹುದು. ಆದರೆ ಹಸಿರು, ಕೃಷಿಯು ಮನದೊಳಗೆ ಇಳಿದು ‘ನಾವು ಅದೇ’ ಆದಾಗ ಇಂತಹ ಯೋಚನೆಗಳು, ಯೋಚನೆಗಳು ರೂಪುಗೊಳ್ಳುತ್ತವೆ.
ರಾಧಾಕೃಷ್ಣರ ತಂದೆ ಮುಳಿಯ ವೆಂಕಟಕೃಷ್ಣ ಶರ್ಮ. ಇವರು ತಮ್ಮ ಹಿರಿಯ ಮಗನ ವಿವಾಹದ ಆಮಂತ್ರಣವನ್ನು ಹಲಸಿನ ವಿನ್ಯಾಸದಲ್ಲಿ ಅಚ್ಚು ಹಾಕಿಸಿದ್ದರು. ಈ ಮೂಲಕವಾದರೂ ಹಲಸು, ಕುಂಡಿಗೆಗಳು ಮತ್ತೊಮ್ಮೆ ಅನ್ನದ ಬಟ್ಟಲಲ್ಲಿ ಸ್ಥಾನ ಪಡೆದುಕೊಳ್ಳಲಿ, ಅಲ್ವಾ.


ಇಂತಹ ಆಮಂತ್ರಣ ಪತ್ರಿಕೆಯನ್ನು ಒಂದು ಕಲೆಯಾಗಿ, ಆಂದೋಳನದ ಉಪಾಧಿಯಾಗಿ ನೋಡುವ ಮನಸ್ಸುಗಳು ಬೇಕಾಗಿವೆ!

( ನಿರೂಪಣೆ : ನಾ.ಕಾರಂತ ಪೆರಾಜೆ )

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago