Advertisement
MIRROR FOCUS

ಇದು ‘ಕುಂಡಿಗೆ’ ಆಮಂತ್ರಣ..! , ಇದು ಆಂದೋಳನದ ಭಾಗ

Share

ಪುತ್ತೂರು: ಒಂದು ಆಂದೋಳನವು ಬದುಕಿನ ಭಾಗವಾದಾಗ ಅದು ಅನುಭವವಾಗುತ್ತದೆ, ಅನುಭಾವವಾಗುತ್ತದೆ. ಬದುಕಿನ ಭಾಗವಾಗುವ ಆಂದೋಳನಗಳಲ್ಲಿ ಹೋರಾಟದ ಕಿಚ್ಚಿಲ್ಲ, ಬಣ್ಣಗಳಿಲ್ಲ, ಧ್ವಜಗಳಿಲ್ಲ, ಘೋಷಣೆಗಳಿಲ್ಲ. ಅಲ್ಲಿರುವುದು ಸಾತ್ವಿಕತೆ ಒಂದೇ!

ಬಂಟ್ವಾಳ ತಾಲೂಕಿನ ಕೇಪು ಉಬರು ‘ಹಲಸು ಸ್ನೇಹಿ ಕೂಟ’ವು ದಶಕದೀಚೆಗೆ ಊಟದ ಬಟ್ಟಲನ್ನು ವಿಷಮುಕ್ತಗೊಳಿಸುವ ಆಂದೋಳನವನ್ನು ಸದ್ದಿಲ್ಲದೆ ಮಾಡಿದೆ, ಮಾಡುತ್ತಿದೆ. ಕೂಟದ ತೆಕ್ಕೆಗೆ ಬಂದ ಕುಟುಂಬಗಳ ಊಟದ ಮೇಜುಗಳಲ್ಲಿ ಸಾವಯವ ಉತ್ಪನ್ನಗಳಿಗೆ ಸ್ಥಾನ, ಮಾನ. ಹಲಸು, ಮಾವು, ಸಿರಿಧಾನ್ಯ, ತರಕಾರಿ, ಸೊಪ್ಪು.. ಹೀಗೆ ಅನ್ಯಾನ್ಯ ಒಳಸುರಿಗಳು ಖಾದ್ಯಗಳ ಮೂಲವಸ್ತುಗಳು.
ತರಬೇತಿ, ಪ್ರಾತ್ಯಕ್ಷಿಕೆ, ಮೇಳ ಮೊದಲಾದ ಪ್ರಕ್ರಿಯೆಗಳಿಂದ ಹಲಸು ಸ್ನೇಹಿ ಕೂಟವು ಸುಮನಸಿಗರ ಒಂದು ತಂಡವಾಗಿ ರೂಪುಗೊಂಡಿದೆ. ಹಸಿರು ಎನ್ನುವುದು ಕೇವಲ ಪ್ರಕೃತಿ, ಆಹಾರ ಇಷ್ಟಕ್ಕೆ ಸೀಮಿತವಾಗಿಲ್ಲ. ಅದರ ಅರಿವನ್ನು ಬಿಂಬಿಸುವ ಹಲವಾರು ‘ಕೆಣಿ’ಗಳನ್ನೂ ಅನುಷ್ಠಾನಗೊಳಿಸಿದೆ. ಈ ರೀತಿಯ ಕೆಣಿಗಳು ಮನದೊಳಗೆ ಗಾಢವಾಗಿ ಇಳಿದ ಪರಿಣಾಮಗಳ ಫಲಿತಾಂಶ ಇಲ್ಲಿದೆ ನೋಡಿ.


ಇದು ರಾಧಾಕೃಷ್ಣ ಶರ್ಮ ಮುಳಿಯ ಇವರ ವಿವಾಹದ ಆಮಂತ್ರಣ. ಬಾಳೆಯ ಕುಂಡಿಗೆಯ (ಪೂಂಬೆ) ದಳಗಳಾಕೃತಿಯ ವಿನ್ಯಾಸ. ಮೂರು ಎಸಳುಗಳ ಆರು ಪುಟಗಳಲ್ಲಿ ಮದುವೆಯ ವಿವರಗಳು. ಬಂಟ್ವಾಳದ ಕಲಾವಿದ ಮೌನೀಶ ಮಲ್ಯರ ವಿನ್ಯಾಸ. ಅಧ್ಯಾಪಕ ಅರವಿಂದ ಕುಡ್ಲರ ಸಂಯೋಜನೆ. ಮುಳಿಯ ಶರ್ಮ ಮನೆಮಂದಿಯ ಕಲ್ಪನೆ.
ಫಕ್ಕನೆ ಮೇಲ್ನೋಟಕ್ಕೆ ನೋಡುವಾಗ ಆಮಂತ್ರಣ ಪತ್ರಿಕೆಯ ವಿನ್ಯಾಸದಲ್ಲಿ ಹೊಸತು ಕಾಣದಿರಬಹುದು. ಆದರೆ ಹಸಿರು, ಕೃಷಿಯು ಮನದೊಳಗೆ ಇಳಿದು ‘ನಾವು ಅದೇ’ ಆದಾಗ ಇಂತಹ ಯೋಚನೆಗಳು, ಯೋಚನೆಗಳು ರೂಪುಗೊಳ್ಳುತ್ತವೆ.
ರಾಧಾಕೃಷ್ಣರ ತಂದೆ ಮುಳಿಯ ವೆಂಕಟಕೃಷ್ಣ ಶರ್ಮ. ಇವರು ತಮ್ಮ ಹಿರಿಯ ಮಗನ ವಿವಾಹದ ಆಮಂತ್ರಣವನ್ನು ಹಲಸಿನ ವಿನ್ಯಾಸದಲ್ಲಿ ಅಚ್ಚು ಹಾಕಿಸಿದ್ದರು. ಈ ಮೂಲಕವಾದರೂ ಹಲಸು, ಕುಂಡಿಗೆಗಳು ಮತ್ತೊಮ್ಮೆ ಅನ್ನದ ಬಟ್ಟಲಲ್ಲಿ ಸ್ಥಾನ ಪಡೆದುಕೊಳ್ಳಲಿ, ಅಲ್ವಾ.


ಇಂತಹ ಆಮಂತ್ರಣ ಪತ್ರಿಕೆಯನ್ನು ಒಂದು ಕಲೆಯಾಗಿ, ಆಂದೋಳನದ ಉಪಾಧಿಯಾಗಿ ನೋಡುವ ಮನಸ್ಸುಗಳು ಬೇಕಾಗಿವೆ!

( ನಿರೂಪಣೆ : ನಾ.ಕಾರಂತ ಪೆರಾಜೆ )

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

4 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

11 hours ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

11 hours ago

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

19 hours ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

20 hours ago

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧ

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…

20 hours ago