Advertisement
ವೈರಲ್ ಸುದ್ದಿ

ಇದು ವೈರಲ್ ಸುದ್ದಿ : ಅಡ್ಡಮತದಾನದ ಬಿಸಿ ಬಿಜೆಪಿ ಕಾರ್ಯಕರ್ತರಲ್ಲಿ ಹೀಗಿದೆ…..

Share

ಸೋಶಿಯಲ್ ಮೀಡಿಯಾ ಇಂದು ಪ್ರಬಲವಾಗಿ ಬೆಳೆದಿದೆ. ಹಾಗಂತ ಸೋಶಿಯಲ್ ಮೀಡಿಯಾದ ಸುದ್ದಿಗಳೆಲ್ಲವೂ ಸತ್ಯವೂ ಅಲ್ಲ. ಆದರೆ ವೈರಲ್ ಆದ ಸುದ್ದಿಗಳ ಹಿಂದೆ ಕೆಲವೊಂದು ಸತ್ಯಗಳು ಇರುತ್ತದೆ. ಅಂತಹ ವೈರಲ್ ಆದ ಸುದ್ದಿಗಳಲ್ಲಿ ಈ ಬಾರಿ ಸುಳ್ಯದ ಹಾಗೂ ಡಿಸಿಸಿ ಬ್ಯಾಂಕ್ ಚುನಾವಣೆಯ ಅಡ್ಡಮತದಾನ ಸೇರಿದೆ.

ವೈರಲ್ ಆದ ಸುದ್ದಿ ಹೀಗಿದೆ…… ಅದರ ಸಾರಾಂಶ ಇಲ್ಲಿದೆ… (ಈ ಬರಹ ಸುಳ್ಯನ್ಯೂಸ್.ಕಾಂ ನದ್ದು ಅಲ್ಲ)

 

ಬಂಡಾಯ,ಅಡ್ಡ ಮತದಾನದಿಂದ ಗಮನಸೆಳೆದ ಡಿಸಿಸಿ ಬ್ಯಾಂಕ್ ಚುನಾವಣೆ ಕಳೆದು 2 ತಿಂಗಳು ಆಗುತ್ತ ಬಂದಿದ್ರು ಪಕ್ಷದ ಕಡೆಯಿಂದ ಬಂಡಾಯ ಮತ್ತು ಅಡ್ಡ ಮತದಾನಿಗಳ ಮೇಲೆ ಯಾವುದೇ ಶಿಸ್ತು ಕ್ರಮಗಳು ನಡೆಯದಿರುವುದು ನೋವಿನ ಸಂಗತಿ. ದಕ್ಷಿಣ ಕನ್ನಡ ಸಂಘಟನಾತ್ಮಕ ಜಿಲ್ಲೆಯೆಂದು ಗುರುತಿಸಿಕೊಂಡ ಜಿಲ್ಲೆ, ವ್ಯಕ್ತಿಗಳು ನಗಣ್ಯವಾಗಿ ಸಿದ್ದಾಂತ,ಪಕ್ಷ,ಸಂಘಟನೆಯ ಅಡಿಪಾಯದ ಮೇಲೆ ನಿಂತ ಜಿಲ್ಲೆ.ಯಾಕೋ ಅನೇಕ ವರ್ಷ ಗಳಿಂದ ಸಹಕಾರ ಭಾರತಿ ಯನ್ನು ಚುಕ್ಕಾಣಿ ಹಿಡಿದ ವ್ಯಕ್ತಿಯೊಬ್ಬರು ಜಿಲ್ಲೆಯ ಡಿಸಿಸಿ ಬ್ಯಾಂಕ್ ಅಧ್ಯಕ್ಷರಿಗೆ ಸಹಕಾರ ಭಾರತಿಯನ್ನು ಶರಣಗಾತನಾಗಿ ಮಾಡಿದ್ದು ಸುಳ್ಳಾಲ್ಲ.ಸಹಕಾರ ಭಾರತಿಯ ರಾಷ್ಟ್ರೀಯ ಸದಸ್ಯರು,ಕ್ಯಾಂಪ್ಕೋ ಮಾಜಿ ಅಧ್ಯಕ್ಷರು  ಅನೇಕ ದಿನಗಳ ಹಿಂದೆ ಉಡುಪಿ ಸಹಕಾರ ಭಾರತಿ ಸಭೆಯಲ್ಲಿ ಒಬ್ಬ ಕಾರ್ಯಕರ್ತ ಡಿಸಿಸಿ ಬ್ಯಾಂಕ್,  ಬಗ್ಗೆ ಪ್ರಶ್ನಿಸಿದಾಗ  ಹೇಳಿದ ಉತ್ತರವೇನು ? ಆದ್ರೆ ಈಗ ನೀವೇನು ಮಾಡಿದ್ದು ಮೊನ್ನೆ  ಸನ್ಮಾನ  ?. KMF ವಿಚಾರದಲ್ಲಿ  ತಮಗೆ ಬೇಕಾದ ಹಾಗೇ ಒಪ್ಪಂದ ಮಾಡಿಕೊಂಡು  ಬ್ರಷ್ಟ ನ ಜೊತೆ ಸೇರಿಕೊಂಡು ಸಹಕಾರ ಭಾರತಿ ಮೂಲ ವಿಚಾರಗಳು ಎಲ್ಲಿ ಹೋದವು ?  ಬಂಡಾಯ ಅಭ್ಯರ್ಥಿ ಗಳ  ಪಕ್ಷದಿಂದ ಉಚ್ಚಾಟನೆ ಬಿಡಿ ,ನೋಟಿಸ್ ಕೊಡಲು ಸಮಯವಿಲ್ಲ  ನಾಯಕರಿಗೆ. 7+4 ಶಾಸಕರಿದ್ರು ಒಂದು ಸೀಟು ಪಡೆಯಲು ಸಾಧ್ಯವಾಗದಿರುವದು ನಾಚಿಕೆಯ  ಸಂಗತಿ,ಹಾಗದ್ರೆ ಮೊನ್ನೆ ಚೌಕಿದಾರ್ ಪೇಟ ತೊಟ್ಟು ಇವನ ಜೋತೆ ಕೈಜೋಡಿಸಿದ್ರಲ್ಲ ಮೋದಿ ಗೆ ಮಾಡಿದ ಅವಮಾನವಿದು. ಸುಳ್ಯ ದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅವರನ್ನು ಮಠ,ದೇವಸ್ಥಾನ ವಿಚಾರವಾಗಿ ಅನವಶ್ಯಕವಾಗಿ 48 ಗಂಟೆಯಲ್ಲಿ ನೋಟಿಸ್ ಕೊಟ್ಟು ಜವಾಬ್ದಾರಿ ಮುಕ್ತ ಮಾಡಿದ್ರಲ್ಲ ?  ಅವರೇನು ಪಕ್ಷಕ್ಕೆ ಮಾಡಿಲ್ಲ . ಆದ್ರೆ ಸಂಘಟನೆ ವಿರುದ್ಧ ನಿಂತವರ ಮೇಲೆ ಏನು ಕ್ರಮ ಕೈಗೊಂಡಿದ್ದಿರ? ವ್ಯಕ್ತಿಗಿಂತ ಪಕ್ಷ,ಸಂಘಟನೆ ದೊಡ್ಡದು ಅಂತ ನಂಬಿದವರು ಆದ್ರೆ ನೀವೇನು ಮಾಡಿದ್ದ್ದು? ಲಾಭಕ್ಕೆ ಸಹಕಾರ ಭಾರತೀ, ಪಕ್ಷವನ್ನು ದುರುಪಯೋಗ ಮಾಡಿಕೊಂಡಿಲ್ಲವೇ? ಹಣಕ್ಕಾಗಿ ಬಲಿ ಕೊಟ್ಟದ್ದು ವ್ಯಕ್ತಿಯನ್ನಲ್ಲ!ಸಾವಿರಾರು ದೇವದುರ್ಲಭ ಕಾರ್ಯಕರ್ತರ ಪಕ್ಷ ಮತ್ತು ಸಹಕಾರ ಭಾರತಿಯನ್ನಲ್ಲವೇ? ಮೊನ್ನೆ , ಯಾವ ಸಹಕಾರ ಭಾರತಿ, ಆರತಿ ಗೊತ್ತಿಲ್ಲ ಅಂದವರಿಗೆ ಹೂಗುಚ್ಛ ನೀಡಿ ಸನ್ಮಾನ ಮಾಡುತ್ತಿರಲ್ಲ ಸಹಕಾರ ಭಾರತಿ ನಾಯಕರೇ ಒಂದು ಅರ್ಥ ಮಾಡಿಕೊಳ್ಳಿ ಈ ಸಹಕಾರ ಭಾರತಿ ಸಂಘಟನೆಯಿಲ್ಲದಿದ್ರೆ ನಿಮ್ಮನ್ನು ಯಾರು ಮೂಸಿ ನೋಡುವವರು ಇಲ್ಲವಾಯ್ತು! ಅದರಿಂದ ನೀವು ಅಧಿಕಾರ, ನಾಯಕರಾಗಿದ್ದು.

ಛೇ ದಕ್ಷಿಣಕನ್ನಡ ಸಂಘಟನಾ ಬದ್ದ ಕ್ಷೇತ್ರದಲ್ಲಿ ಸಹಕಾರ ಭಾರತಿಯನ್ನು ಒಬ್ಬ ವ್ಯಕ್ತಿಗೆ ಮಾರಿಕೊಂಡ್ರಲ್ಲ ಕಾರ್ಯಕರ್ತ ನಿಮ್ಮನ್ನು ಕ್ಷಮಿಸಲಾರ.

 

(ಹೀಗೊಂದು ಬರಹ ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ  ಓಡಾಡುತ್ತಿದೆ. ಇದರ ಬರಹಗಾರ ಯಾರು ಎಂಬುದಕ್ಕಿಂತಲೂ ಸುಳ್ಯ ಸೇರಿದಂತೆ ಜಿಲ್ಲೆಯಲ್ಲಿ  ಈ ಬಗ್ಗೆ ಚರ್ಚೆಯಾಗುತ್ತಿರುವುದು ಸತ್ಯ. ಸುಳ್ಯದಲ್ಲಿ ಇದೇ ವಿಚಾರವಾಗಿ ವಿವಿಧ ಕ್ರಮಗಳು ಆಗಿರುವುದು  ನಿಜ. ಈ ಮೇಲಿನ ಸುದ್ದಿ ಸಾಕಷ್ಟು ವೈರಲ್ ಆದ  ಈ ಹಿನ್ನೆಲೆಯಲ್ಲಿ ಅದೇ ವೈರಲ್ ಸುದ್ದಿಯನ್ನು  ಇಲ್ಲಿ ಪ್ರಕಟಿಸಿದ್ದೇವೆ.  – ಸಂ )

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

5 hours ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

5 hours ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

23 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago