Advertisement
MIRROR FOCUS

ಇದು “ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಅಚ್ರಪ್ಪಾಡಿ”

Share

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಲನಚಿತ್ರವಾಗಿ ಭಾರೀ ಫೇಮಸ್ಸಾಯಿತು. ಜನಮೆಚ್ಚುಗೆ ಪಡೆಯಿತು. ಏಕೆಂದರೆ ಕಾಸರಗೋಡಿನ ವಾಸ್ತವ ಸ್ಥಿತಿಯೇ ಹಾಗಿತ್ತು, ಈ ಕಾರಣದಿಂದ ಜನರಿಗೆ ಮೆಚ್ಚುಗೆಯಾಯ್ತು. ಇದೂ ಹಾಗೆಯೇ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಅಚ್ರಪ್ಪಾಡಿ.  ಕನ್ನಡ ಶಾಲೆಯನ್ನು ಕನ್ನಡದ ನೆಲದಲ್ಲಿ ಉಳಿಸಲು ಊರಿನ ಮಂದಿ, ಶಾಲೆಯ ಶಿಕ್ಷಕಿ ನಡೆಸುತ್ತಿರುವ ಒಂದು ಮಾದರಿಯ ಹೋರಾಟ ಅಥವಾ ಆಂದೋಲನ ಅಂತಲೂ ಕರೆಯಬಹುದು.  ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಅಚ್ರಪ್ಪಾಡಿ ಶಾಲೆಯ ಕತೆ ಇದು.  ಒಂದು ಕಾಲದಲ್ಲಿ ಇನ್ನೇನು ಶಾಲೆ ಮುಚ್ಚಿಯೇ ಬಿಡುತ್ತದೆ ಎಂಬ ಹಂತದಲ್ಲಿತ್ತು. 1 ನೇ ತರಗತಿಯ ದಾಖಲಾತಿ ಶೂನ್ಯಕ್ಕೆ ತಲಪಿತ್ತು. ಇಂದು ಅದೇ ಶಾಲೆಯಲ್ಲಿ 1 ನೇ ತರಗತಿಗೆ ದಾಖಲಾತಿ 9. ಒಟ್ಟು ಮಕ್ಕಳ ಸಂಖ್ಯೆ 22. 


 

ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಅಚ್ರಪ್ಪಾಡಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಮಕ್ಕಳ ಸಂಖ್ಯೆ 22. 1 ನೇ ತರಗತಿಯಿಂದ 5 ನೇ ತರಗತಿವರೆಗೆ ಇಲ್ಲಿ ಶಾಲೆ ನಡೆಯುತ್ತದೆ. ಒಂದು ಕಾಲದಲ್ಲಿ 100 ಕ್ಕೂ ಅಧಿಕ ಮಕ್ಕಳಿದ್ದ ಶಾಲೆ. 1954 ರಿಂದ ಊರಿನ ಬಹುಪಾಲು ಮಂದಿಗೆ ಅ…ಆ..ಇ..ಈ ಕಲಿಸಿದ ಶಾಲೆ ಇದು. ಅಂತಹ ಶಾಲೆ 2011 ರ ವೇಳೆಗೆ ಮುಚ್ಚುವ ಸ್ಥಿತಿಗೆ ಬಂದಿತು. ಆಗ ಒಟ್ಟು ಮಕ್ಕಳ ಸಂಖ್ಯೆ ಇದ್ದದ್ದು 7. ಆ ನಂತರ ಹಂತ ಹಂತವಾಗಿ ಪ್ರಯತ್ನ ನಡೆಯಿತು. ಇಂದು ಮಕ್ಕಳ ಸಂಖ್ಯೆ 22.

 

ಏನೇನು ಪ್ರಯತ್ನ ಮಾಡಿದರು ?:

ಈ ಶಾಲೆಗೆ ಉಳಿಯಬೇಕು ಎಂದು ಶಾಲೆಯ ಶಿಕ್ಷಕಿಗೆ ಮಾತ್ರವಲ್ಲ ಸ್ಥಳೀಯರಿಗೂ ಈ ಆಸಕ್ತಿ ಇತ್ತು. ಹೀಗಾಗಿಯೇ ಇಲ್ಲಿನ ನಿವೃತ್ತ ಶಿಕ್ಷಕ ಬಾಬು ಮಾಸ್ತರ್ ಅಚ್ರಪ್ಪಾಡಿ ಹಾಗೂ ಅಂದಿನ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ನಿರ್ಮಲ ಅವರನ್ನೊಳಗೊಂಡ ಶಾಲೆ ಉಳಿಸುವ ಹಿತರಕ್ಷಣಾ ಸಮಿತಿ ಮಾಡಿ ಕೆಲಸ ಆರಂಭಿಸಿದರು. ಊರಿನ ಮಂದಿ ಎಲ್ಲರೂ ಸಹಕಾರ ಮಾಡಿದರು. ಕರಪತ್ರ ಮಾಡಿ ಮನೆಮನೆಗೆ ಹಂಚಿ ಆಂದೋಲನ ಮಾದರಿಯಲ್ಲಿ ತೆರಳಿ ಶಾಲೆ ಉಳಿಸುವ ಬಗ್ಗೆ ಮಾಹಿತಿ ನೀಡಿದರು. ಶಾಲೆಯ ಮುಂದೆಯೇ 4-5  ಹಳದಿ ಬಣ್ಣದ ಶಾಲೆಯ ವಾಹನಗಳು ಓಡಾಡುವ ಸಂದರ್ಭ ಸವಾಲಿನಲ್ಲಿಯೇ ಕೆಲಸ ಮುಂದುವರಿಸಿ ಗುಣಮಟ್ಟದ ಶಿಕ್ಷಣ ಅಚ್ರಪ್ಪಾಡಿ  ಸರಕಾರಿ ಶಾಲೆಯಲ್ಲೂ ನೀಡುವ ಬಗ್ಗೆ ಭರವಸೆ ನೀಡಿದರು.ಪಾಠದ ಜೊತೆಗೆ ಪಾಠೇತರ ಚಟುವಟಿಕೆ, ಇಂಗ್ಲಿಷ್ ಪಾಠ, ಓದಲು ಕಲಿಸುವುದು ಸೇರಿದಂತೆ ಮಕ್ಕಳ ವಿಕಾಸದ ಶಿಕ್ಷಣ ನೀಡುವ ಬಗ್ಗೆಯೂ ವಿವರ ನೀಡಿದರು. ಹೀಗಾಗಿ ಕೆಲವೊಂದು ಜನರು ಆಸಕ್ತರಾಗಿ ಶಾಲೆಗೆ ಸೇರಿಸಿದರು. ಇದೇ ವೇಳೆ ಸ್ವಚ್ಛ ಶಾಲೆ ಬಹುಮಾನ ಸೇರಿದಂತೆ ಕೆಲವೊಂದು ಬಹುಮಾನ ಸಿಕ್ಕಿದ್ದು ಕೂಡಾ ಶಾಲೆಗೆ ಗೌರವ ಹೆಚ್ಚಾಯಿತು. ಊರೆಲ್ಲಾ ಸುದ್ದಿಯಾಯಿತು.ಈ ಕಾರಣದಿಂದ ಒಮ್ಮೆಲೇ 12 ಮಂದಿ ವಿದ್ಯಾರ್ಥಿಗಳು ಶಾಲೆಗೆ ಬಂದರು. ಶಾಲೆ ಬೆಳೆಯಿತು. ಈಗಿನ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ್ ಕಡಪಳ ಅವರ ಪ್ರಯತ್ನವೂ ಮುಂದುವರಿದಿದೆ.

 

 

ಮಕ್ಕಳ ಹೆಸರಲ್ಲಿ ಠೇವಣಿ ಇಟ್ಟರು ಊರವರು..!

ಆರಂಭದಲ್ಲಿ ಒಂದನೇ ತರಗತಿಗೆ ಸೇರುವ ವಿದ್ಯಾರ್ಥಿಯ ಹೆಸರಲ್ಲಿ 1 ಸಾವಿರ ರೂಪಾಯಿ ಠೇವಣಿಯನ್ನು ಊರಿನ ಮಂದಿ ಇಡುವ ಬಗ್ಗೆಯೂ ಹೇಳಿದ್ದರು. ಇದಕ್ಕಾಗಿ ಶಾಲೆಯ ಶಿಕ್ಷಕಿಯೂ ಸೇರಿದಂತೆ ಊರಿನ ಕೆಲವು ಮಂದಿ ಸಹಕಾರ ನೀಡಿದರು. ಹೊಸದಾಗಿ ಸೇರುವ ವಿದ್ಯಾರ್ಥಿಯ ಹೆಸರಲ್ಲಿ ಠೇವಣಿ ಇರಿಸಿದರು. 5 ನೇ ತರಗತಿ ಬಿಡುವ ವೇಳೆ ಈ ಠೇವಣಿ ಹಣ ಸಿಗುವಂತೆ ವ್ಯವಸ್ಥೆ ಮಾಡಿದರು. ಇದರಲ್ಲಿ ವೇಣುಗೋಪಾಲ ಮಂಗಳೂರು  ಹಾಗೂ  ರೋಹಿತ್ ಎಂಬವರು ಹೆಚ್ಚಿನ ಆಸಕ್ತಿ ತೋರಿದರು.

 

ಕೊಡುಗೆಗಳಿಗೆ ಮನೆಮನೆ ತೆರಳಿದರು:

ಮುಚ್ಚುವ ಹಂತದಲ್ಲಿದ್ದ ಈ  ಸರಕಾರಿ ಶಾಲೆಗೆ ಸಹಜವಾಗಿಯೇ ಸೌಲಭ್ಯಗಳ ಕೊರತೆ ಇತ್ತು. ವ್ಯವಸ್ಥೆಗಳು ಇಲ್ಲವಾಗಿತ್ತು. ಇದಕ್ಕಾಗಿ ಊರಿನ ಮಂದಿಯೇ ಮುಂದೆ ನಿಂತು ಸಹಕಾರ ನೀಡಿದರು. ಇಲ್ಲೂ ಶಾಲೆಯ ಶಿಕ್ಷಕಿ ಶ್ವೇತಾ,  ಬೇಕುಗಳ ಪಟ್ಟಿ ಮಾಡಿದರೆ ಅವರ ಮನೆಯವರ ಸಹಕಾರದಿಂದ ತೊಡಗಿ ಊರಿನ ಮಂದಿಯ ಬಹುಪಾಲು ಸಹಕಾರ ಪಡೆದು ವ್ಯವಸ್ಥೆಗಳನ್ನು  ಮಾಡಲಾಯಿತು.

ಕೊಡುಗೆ… ಕೊಡುಗೆ…

ಆರಂಭದಲ್ಲಿ ಶಾಲೆಗೆ ಫ್ಯಾನ್, ಡೆಸ್ಕ್ , ನಲಿಕಲಿಗೆ ವ್ಯವಸ್ಥೆ , ಮಕ್ಕಳಿಗೆ ಸಮವಸ್ತ್ರ, ಕೊಡೆ, ಪುಸ್ತಕ, ಬಟ್ಟಲು, ಬಟ್ಟಲು , ಬಟ್ಟಲು ಇಡಲು ರಾಕ್ ,  ಗೋದ್ರೆಜ್…. ಹೀಗೆ ಊರಿನ ಮಂದಿ, ಪರವೂರಿನ ಮಂದಿ ಕೊಡುಗೆಗಳನ್ನು ನೀಡಿ ಶಾಲೆಗೆ ಬೆಳಕಾದರು.

ಸಹಕಾರದ ಹೆಸರು ಒಂದೆರಡಲ್ಲ….

ಅಚ್ರಪ್ಪಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಉಳಿವಿಗೆ ಊರವರ, ಪರವೂರ ಮಂದಿಯ ಕೊಡುಗೆ ಒಂದೆರಡಲ್ಲ. ಹೆಸರುಗಳ ಪಟ್ಟಿಯೇ ಇದೆ. ಅದರ ಜೊತೆಗೆ ವಿವಿಧ ಟ್ರಸ್ಟ್ ಗಳು, ಸಂಘಸಂಸ್ಥೆಗಳು ಸಹಕಾರ ನೀಡಿವೆ. ಸ್ಥಳೀಯ ಗ್ರಾಮ ಪಂಚಾಯತ್, ಜನಪ್ರತಿನಿಧಿಗಳು ಸಹಕಾರ ನೀಡಿದ್ದಾರೆ. ಈಗಲೂ ಈ ಶಾಲೆಯ ಅಭಿವೃದ್ಧಿಗೆ ಕೊಡುಗೆಗಳು, ದಾನಿಗಳ ನೆರವು ಬೇಕಾಗಿದೆ.

 

 

ಹೆಲ್ಪಿಂಗ್ ಹ್ಯಾಂಡ್ ಹೀಲಿಂಗ್ ಹಾರ್ಟ್ ಸಂಸ್ಥೆಯಿಂದ ಸಮವಸ್ತ್ರ ಕೊಡುಗೆ

ಹುಬ್ಬಳ್ಳಿ ಯ ಹೆಲ್ಪಿಂಗ್ ಹ್ಯಾಂಡ್ ಹೀಲಿಂಗ್ ಹಾರ್ಟ್ (4H) ಸಂಸ್ಥೆ ವಿಧ್ಯಾರ್ಥಿಗಳಿಗೆ ಸಮವಸ್ತ್ರ ಕೊಡುಗೆಯಾಗಿ ನೀಡಿದೆ. ದೇವ ರವಿಶಂಕರ್ ಅವರ ಪುತ್ರ ಹುಬ್ಬಳ್ಳಿ ಯಲ್ಲಿ ಆಕ್ಸಿಸ್ ಬ್ಯಾಂಕ್ ನ ಕ್ರೆಡಿಟ್ ಹೆಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಲ್ಲಿ ತನ್ನ ಸ್ನೇಹಿತರನ್ನು ಒಳಗೊಂಡಿರುವ 4H ಸಂಸ್ಥೆಯ ಕಾರ್ಯದರ್ಶಿಯಾಗಿ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ.
4H ನ ಧ್ಯೆಯ ಹೆಲಪಿಂಗ್ ಹ್ಯಾಂಡ್ಸ್ ಹೀಲಿಂಗ್ ಹಾರ್ಟ್ಸ್ ಎಂದು ಆಗಿದ್ದು ತೀರ ಅಗತ್ಯತೆ ಉಳ್ಳ ಸಂಸ್ಥೆಗಳಿಗೆ ನೆರವಾಗುವುದು ಇದರ ಮುಖ್ಯ ಉದ್ದೇಶವಾಗಿದೆ. ಆದುದರಿಂದ ಅಚ್ರಪ್ಪಾಡಿ ಶಾಲೆಗೆ ಸುಮಾರು ರೂ.11000 ಮೌಲ್ಯದ ಸಮವಸ್ತ್ರಗಳನ್ನು ಶಾಲಾ ವಿಧ್ಯಾರ್ಥಿಗಳಿಗೆ ನೀಡಿ, ಶಾಲಾ ಮಕ್ಕಳು ಮತ್ತು ಪೋಷಕರ ಮೆಚ್ಚುಗೆಗೆ ಸಂಸ್ಥೆ ಪಾತ್ರವಾಗಿದೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

14 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

14 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

15 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

15 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

15 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

23 hours ago