ಸುಳ್ಯ: ಸುಳ್ಯದ ಪ್ರಮುಖ ಕಚೇರಿಯೊಂದರಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂಬ ಆರೋಪ ಕಳೆದ ಹಲವಾರು ಸಮಯಗಳಿಂದ ಕೇಳಿಬರುತ್ತಿತ್ತು. ಪ್ರತಿಯೊಂದಕ್ಕೂ ಲಂಚಾವತಾರ ಹೆಚ್ಚಾಗಿದೆ ಎಂದು ದೂರು ಇತ್ತು. ಅದಕ್ಕೆ ಪೂರಕವಾಗಿ ವಿಡಿಯೋವೊಂದು “ಸುಳ್ಯನ್ಯೂಸ್.ಕಾಂ” ಗೆ ಲಭಿಸಿದೆ.
ಸುಳ್ಯದ ಉಪನೋಂದಣಿ ಕಚೇರಿಯಲ್ಲಿ ಅಧಿಕಾರಿಯೊಬ್ಬರು ಹಣ ಪಡೆಯುತ್ತಿರುವುದು ಹಾಗೂ ಹಣಕ್ಕಾಗಿ ಚರ್ಚೆ ಮಾಡುತ್ತಿರುವ ದೃಶ್ಯ ವಿಡಿಯೋದಲ್ಲಿದೆ . ಈಗ ಎಲ್ಲವೂ ಆನ್ ಲೈನ್ ಮೂಲಕ ಪಾವತಿಯಾಗುತ್ತಿರುವ ಸಂದರ್ಭ ಇಷ್ಟೊಂದು ಹಣ ಪಡೆಯುತ್ತಿರುವುದು ಏಕೆ ಎಂಬ ಪ್ರಶ್ನೆ ಒಂದು ಕಡೆಯಾದರೆ, ಕಚೇರಿಯಲ್ಲಿ ಹೀಗೆಲ್ಲಾ ಹಣ ಪಡೆಯುವುದು ಯಾವುದೇ ಅಧಿಕಾರಿಗಳ ಗಮನಕ್ಕೂ ಬಾರದೇ ಇರುವುದು ಸೋಜಿಗ ಎನಿಸಿದೆ. ಹೀಗಾಗಿ ಎಚ್ಚೆತ್ತುಕೊಳ್ಳುವ ಅಧಿಕಾರಿಗಳು, ಜನಪ್ರತಿನಿಧಿಗಳು, ಸಾಮಾಜಿಕ ಸಂಘಟನೆಗಳು ಇದರ ವಿರುದ್ಧ ಹೋರಾಟ ನಡೆಸಲೇಬೇಕಾದ ಅನಿವಾರ್ಯತೆ ಇದೆ. ಕೆಲವೊಮ್ಮೆ ಜನರೇ ತಮ್ಮ ಕೆಲಸಗಳಿಗಾಗಿ ಹಣ ನೀಡುತ್ತಾರೆ. ಆದರೆ ಇದು ಅದಲ್ಲ, ಒತ್ತಾಯ ಪೂರ್ವಕವಾಗಿ ಚರ್ಚೆ ಮಾಡಿ ಹಣ ಪಡೆಯುವುದು ಈ ವಿಡಿಯೋದಲ್ಲಿ ತಿಳಿಯುತ್ತದೆ. ಎಲ್ಲಿಗೆ ಬಂದು ನಿಂತಿದೆ ನಮ್ಮ ವ್ಯವಸ್ಥೆ…!
ಈ ನಡುವೆ ವಿಡಿಯೋದಲ್ಲಿ ಕೇಳಿಸುವಂತೆ ಹಾಗೂ ಹಣ ತೆಗೆಯುವ ಸಂದರ್ಭ ನಮಗೆ ಬೇರೆದಕ್ಕೂ ಕೊಡಲಿದೆ ಎಂದು ಹೇಳುವುದು ಕೇಳಿಸುತ್ತದೆ. ಇದು ಕೂಡಾ ಚರ್ಚೆಗೆ ಕಾರಣವಾಗಿದೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಸುಳ್ಯದ ಆಡಳಿತ ಪಕ್ಷಗಳು, ಶಾಸಕರು , ಸರಕಾರ, ವಿಪಕ್ಷಗಳು ಸುಮ್ಮನೆ ಕುಳಿತಿರುವುದೇಕೆ ಎಂಬುದೇ ಪ್ರಶ್ನೆಯಾಗಿದೆ.
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…